TOP STORIES:

FOLLOW US

ತುಳುವಿನಲ್ಲೂ ಸೈ ಎನಿಸಿಕೊಂಡ ’ಕೊಂಕಣಿ ಕೋಮೆಡಿ ಪ್ರಿನ್ಸ್’ ಪ್ರದೀಪ್ ಬಾರ್ಬೋಜಾ


ಮಹೇಶ್, ಅಕಾಶ್ ಭವನ್

ಮಂಗಳೂರು: ಕಳೆದ ವರ್ಷಾಂತ್ಯಕ್ಕೆ ಕರಾವಳಿಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ ಸೋಡಾ ಶರ್ಬತ್ ಹೊಸ ವರ್ಷದ ಶುಭಾರಂಭದಲ್ಲೂ ತನ್ನ ಜೈತ್ರಯಾತ್ರೆಯನ್ನು ಮುಂದುವರೆಸಿದೆ. ಬಹಳ ಸಮಯದ ನಂತರ ಉತ್ತಮ ಕಥಾಹಂದರವನ್ನು ಹೊಂದಿದ ಚಿತ್ರವೊಂದು ಬಿಡುಗಡೆಯಾದದ್ದು ಸಿನಿಪ್ರಿಯರನ್ನು ಚಿತ್ರಮಂದಿರಗಳಿಗೆ ಆಕರ್ಷಿಸುವಂತೆ ಮಾಡಿದೆ. ಇದಕ್ಕಿಂತಲೂ ಮಿಗಿಲಾಗಿ ಸೋಡಾ ಶರ್ಬತ್ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಪ್ರತಿಭಾವಂತ ನಿರ್ದೇಶಕ ಹಾಗೂ ನಟನೋರ್ವನ ಪ್ರವೇಶವಾಗಿದೆ ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಮೂಡಬಿದಿರೆ ಸಮೀಪದ ಪಾಲಡ್ಕ ನಿವಾಸಿಯಾದ ಪ್ರದೀಪ್ ಬರ್ಬೋಜಾ ಉಧ್ಯೋಗ ನಿಮಿತ್ತ ಕಳೆದ ಹದಿನೈದು ವರ್ಷಗಳಿಂದ ಯುಎಇಯಲ್ಲಿ ವಾಸವಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ನಾಟಕ ರಚನೆ ಹಾಗೂ ಅಭಿನಯದ ಗೀಳು ಹಚ್ಚಿಸಿಕೊಂಡ ಪ್ರದೀಪ್ ಮೂಡಬಿದ್ರೆ ಪರಿಸರದ ಸಾಂಸ್ಕೃತಿಕ ರಂಗದಲ್ಲಿ ಅತೀ ಕಿರಿವಯಸ್ಸಿನಲ್ಲಿಯೇ ವಿಶೇಷ ಸದ್ದು ಮಾಡಿದ್ದರು. ಅವರು ಬರೆದು ನಿರ್ದೇಶಿಸಿದ ತುಳು ನಾಟಕ ’ಬಂಡಲ್ ಭಾಸ್ಕರೆ’ ವಿಶೇಷ ಜನಮನ್ನಣೆಗೆ ಪಾತ್ರವಾಗಿತ್ತು. ಯುಎಇಗೆ ತಲುಪಿದ ನಂತರ ಅಲ್ಲೂ ನಾಟಕ ರಂಗದಲ್ಲಿ ಸಕ್ರೀಯವಾಗಿದ್ದ ಪ್ರದೀಪ್ ಹಲವಾರು ಕೊಂಕಣಿ ನಾಟಕಗಳನ್ನು ರಚಿಸಿ ನಿರ್ದೇಶಿದ್ದಾರೆ. ವಿದೇಶದಲ್ಲಿ ನೂರಕ್ಕಿಂತಲೂ ಹೊಸ ಕಲಾವಿದರಿಗೆ ರಂಗಕಲೆಯ ಬಗ್ಗೆ ತರಬೇತಿಯನ್ನಿತ್ತು ರಂಗಭೂಮಿಯಲ್ಲಿ ನಂತರ ಸೀರಿಯಲ್/ಸಿನೆಮಾ ಕ್ಷೇತ್ರದಲ್ಲಿ ಮಿಂಚುವಂತೆ ಮಾಡಿದ ಕೀರ್ತಿ ಪ್ರದೀಪ್ ಅವರಿಗೆ ಸಲ್ಲುತ್ತದೆ.

ಈ ಮಧ್ಯೆ 2016ರಲ್ಲಿ ’ಏಕ್ ಅಸ್ಲ್ಯಾರ್ ಏಕ್ ನಾ’ ಎಂಬ ಕೊಂಕಣಿ ಸಿನೆಮಾವನ್ನು ನಿರ್ದೇಶಿಸಿ ಅಧಿಕೃತವಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಪ್ರದೀಪ್ ಅವರ ಮೊದಲ ಕೊಂಕಣಿ ಸಿನೆಮಾವು ಕೊಂಕಣಿ ಚಿತ್ರರಂಗದ ಅಯಾಮನ್ನೇ ಬದಲಿಸಿತು ಎಂದು ಹೇಳಬಹುದು. ನಾಟಕ ಹಾಗೂ ನಾಟಕೀಯತೆಯನ್ನು ಚಿತ್ರೀಕರಣ ಮಾಡಿ ಸಿನೆಮಾ ಎಂದು ತೋರಿಸುತ್ತಿದ್ದ ಕೊಂಕಣಿ ಜಗತ್ತಿನಲ್ಲಿ ಪ್ರದೀಪ್ ಅವರ ’ಏಕ್ ಅಸ್ಲ್ಯಾರ್ ಏಕ್ ನಾ’ ನೈಜ ಸಿನೆಮಾದತ್ತ ಮುಖಮಾಡುವಂತೆ ಮಾಡಿತು. ಕೊಂಕಣಿ ಮೂಲಭಾಷೆಯಾಗಿದ್ದುಕೊಂಡು ತುಳು-ಕನ್ನಡ ಚಿತ್ರರಂಗಲ್ಲಿ ನಟರೆನಿಸಿಕೊಂಡ ಹೆಚ್ಚಿನ ಮುಖಗಳು ಪ್ರದೀಪ್ ಬಾರ್ಬೋಜಾ ಅವರ ಕೈಕೆಳಗೆ ಪಳಗಿದವರೇ.

ಕೊಂಕಣಿ ಚಿತ್ರದ ನಂತರ ಕೆಲ ಕನ್ನಡ-ತುಳು ಚಿತ್ರಗಳಲ್ಲಿ ನಟಿಸಿದ ಪ್ರದೀಪ್ ಅವರಿಗೆ ತುಳುವಿನಲ್ಲಿ ಚಿತ್ರವೊಂದನ್ನು ನಿರ್ದೇಶಿಸುವ ಕನಸಿತ್ತು. ಇದೀಗ ಸೋಡಾ ಶರ್ಬತ್ ಮೂಲಕ ಈ ಕನಸು ಈಡೇರಿದಂತಾಗಿದೆ. ಚಿತ್ರದುದ್ದಕ್ಕೂ ತನ್ನ ವಿಭಿನ್ನ ಶೈಲಿಯ ನಟನೆಯೊಂದಿಗೆ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡ ಪ್ರದೀಪ್ ತುಳು ಚಿತ್ರರಂಗದಲ್ಲೂ ಸೈ ಎನಿಸಿಕೊಂಡಿದ್ದಾರೆ. ಸದಭಿರುಚಿಯ ಚಿತ್ರಗಳ ಕೊರತೆ ಎದ್ದು ಕಾಣುತ್ತಿದ್ದ ಸಂದರ್ಭದಲ್ಲಿ ಪ್ರದೀಪ್ ಅವರು ಇಡೀ ಸಮಾಜೆವೇ ಚರ್ಚಿಸುವಂತಹ ಸಿನೆಮಾವೊಂದನ್ನು ಮಾಡಿ ತನ್ನ ಚಾಕಚಕ್ಯತೆ ಮೆರೆದಿದ್ದಾರೆ. ಪಾಲಡ್ಕ ಎಂಬ ಪುಟ್ಟ ಹಳ್ಳಿಯಿಂದ ಬಂದ ಪ್ರತಿಭೆ ಮುಂದೊಂದು ದಿನ ತುಳು ಚಿತ್ರರಂಗದಲ್ಲಿ ಇಷ್ಟೊಂದು ಅಬ್ಬರದ ಎಂಟ್ರಿ ಕೊಡಬಹುದು ಎಂದು ಯಾರೂ ನಂಬಿರಲಿಕ್ಕಿಲ್ಲ. ಆದರೆ ಛಲವಾದಿಯಾದ ಪ್ರದೀಪ್ ಅದನ್ನು ಮಾಡಿ ತೋರಿಸಿದ್ದಾರೆ. ಸೋಡಾ ಶರ್ಬತಿನ ಗೆಲುವು ಪ್ರದೀಪ್ ಹಾಗೂ ತಂಡಕ್ಕೆ ಮಾತ್ರವಲ್ಲದೆ ತುಳುಚಿತ್ರರಂಗಕ್ಕೂ ದಕ್ಕಿದ ಗೆಲುವಾಗಿದೆ. ಮೊದಲ ಪ್ರಯತ್ನದಲ್ಲೇ ತುಳು ಸಿನಿಪ್ರಿಯರ ಹೃದಯಗಳನ್ನು ಗೆದ್ದ ಪ್ರದೀಪ್ ಅವರಿಂದ ಇನ್ನೂ ಹೆಚ್ಚಿನ ಚಿತ್ರಗಳು ಮೂಡಿಬರಲಿ ಎಂದು ಆಶಿಸೋಣ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »