TOP STORIES:

FOLLOW US

ತುಳುವಿನಲ್ಲೂ ಸೈ ಎನಿಸಿಕೊಂಡ ’ಕೊಂಕಣಿ ಕೋಮೆಡಿ ಪ್ರಿನ್ಸ್’ ಪ್ರದೀಪ್ ಬಾರ್ಬೋಜಾ


ಮಹೇಶ್, ಅಕಾಶ್ ಭವನ್

ಮಂಗಳೂರು: ಕಳೆದ ವರ್ಷಾಂತ್ಯಕ್ಕೆ ಕರಾವಳಿಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ ಸೋಡಾ ಶರ್ಬತ್ ಹೊಸ ವರ್ಷದ ಶುಭಾರಂಭದಲ್ಲೂ ತನ್ನ ಜೈತ್ರಯಾತ್ರೆಯನ್ನು ಮುಂದುವರೆಸಿದೆ. ಬಹಳ ಸಮಯದ ನಂತರ ಉತ್ತಮ ಕಥಾಹಂದರವನ್ನು ಹೊಂದಿದ ಚಿತ್ರವೊಂದು ಬಿಡುಗಡೆಯಾದದ್ದು ಸಿನಿಪ್ರಿಯರನ್ನು ಚಿತ್ರಮಂದಿರಗಳಿಗೆ ಆಕರ್ಷಿಸುವಂತೆ ಮಾಡಿದೆ. ಇದಕ್ಕಿಂತಲೂ ಮಿಗಿಲಾಗಿ ಸೋಡಾ ಶರ್ಬತ್ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಪ್ರತಿಭಾವಂತ ನಿರ್ದೇಶಕ ಹಾಗೂ ನಟನೋರ್ವನ ಪ್ರವೇಶವಾಗಿದೆ ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಮೂಡಬಿದಿರೆ ಸಮೀಪದ ಪಾಲಡ್ಕ ನಿವಾಸಿಯಾದ ಪ್ರದೀಪ್ ಬರ್ಬೋಜಾ ಉಧ್ಯೋಗ ನಿಮಿತ್ತ ಕಳೆದ ಹದಿನೈದು ವರ್ಷಗಳಿಂದ ಯುಎಇಯಲ್ಲಿ ವಾಸವಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ನಾಟಕ ರಚನೆ ಹಾಗೂ ಅಭಿನಯದ ಗೀಳು ಹಚ್ಚಿಸಿಕೊಂಡ ಪ್ರದೀಪ್ ಮೂಡಬಿದ್ರೆ ಪರಿಸರದ ಸಾಂಸ್ಕೃತಿಕ ರಂಗದಲ್ಲಿ ಅತೀ ಕಿರಿವಯಸ್ಸಿನಲ್ಲಿಯೇ ವಿಶೇಷ ಸದ್ದು ಮಾಡಿದ್ದರು. ಅವರು ಬರೆದು ನಿರ್ದೇಶಿಸಿದ ತುಳು ನಾಟಕ ’ಬಂಡಲ್ ಭಾಸ್ಕರೆ’ ವಿಶೇಷ ಜನಮನ್ನಣೆಗೆ ಪಾತ್ರವಾಗಿತ್ತು. ಯುಎಇಗೆ ತಲುಪಿದ ನಂತರ ಅಲ್ಲೂ ನಾಟಕ ರಂಗದಲ್ಲಿ ಸಕ್ರೀಯವಾಗಿದ್ದ ಪ್ರದೀಪ್ ಹಲವಾರು ಕೊಂಕಣಿ ನಾಟಕಗಳನ್ನು ರಚಿಸಿ ನಿರ್ದೇಶಿದ್ದಾರೆ. ವಿದೇಶದಲ್ಲಿ ನೂರಕ್ಕಿಂತಲೂ ಹೊಸ ಕಲಾವಿದರಿಗೆ ರಂಗಕಲೆಯ ಬಗ್ಗೆ ತರಬೇತಿಯನ್ನಿತ್ತು ರಂಗಭೂಮಿಯಲ್ಲಿ ನಂತರ ಸೀರಿಯಲ್/ಸಿನೆಮಾ ಕ್ಷೇತ್ರದಲ್ಲಿ ಮಿಂಚುವಂತೆ ಮಾಡಿದ ಕೀರ್ತಿ ಪ್ರದೀಪ್ ಅವರಿಗೆ ಸಲ್ಲುತ್ತದೆ.

ಈ ಮಧ್ಯೆ 2016ರಲ್ಲಿ ’ಏಕ್ ಅಸ್ಲ್ಯಾರ್ ಏಕ್ ನಾ’ ಎಂಬ ಕೊಂಕಣಿ ಸಿನೆಮಾವನ್ನು ನಿರ್ದೇಶಿಸಿ ಅಧಿಕೃತವಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಪ್ರದೀಪ್ ಅವರ ಮೊದಲ ಕೊಂಕಣಿ ಸಿನೆಮಾವು ಕೊಂಕಣಿ ಚಿತ್ರರಂಗದ ಅಯಾಮನ್ನೇ ಬದಲಿಸಿತು ಎಂದು ಹೇಳಬಹುದು. ನಾಟಕ ಹಾಗೂ ನಾಟಕೀಯತೆಯನ್ನು ಚಿತ್ರೀಕರಣ ಮಾಡಿ ಸಿನೆಮಾ ಎಂದು ತೋರಿಸುತ್ತಿದ್ದ ಕೊಂಕಣಿ ಜಗತ್ತಿನಲ್ಲಿ ಪ್ರದೀಪ್ ಅವರ ’ಏಕ್ ಅಸ್ಲ್ಯಾರ್ ಏಕ್ ನಾ’ ನೈಜ ಸಿನೆಮಾದತ್ತ ಮುಖಮಾಡುವಂತೆ ಮಾಡಿತು. ಕೊಂಕಣಿ ಮೂಲಭಾಷೆಯಾಗಿದ್ದುಕೊಂಡು ತುಳು-ಕನ್ನಡ ಚಿತ್ರರಂಗಲ್ಲಿ ನಟರೆನಿಸಿಕೊಂಡ ಹೆಚ್ಚಿನ ಮುಖಗಳು ಪ್ರದೀಪ್ ಬಾರ್ಬೋಜಾ ಅವರ ಕೈಕೆಳಗೆ ಪಳಗಿದವರೇ.

ಕೊಂಕಣಿ ಚಿತ್ರದ ನಂತರ ಕೆಲ ಕನ್ನಡ-ತುಳು ಚಿತ್ರಗಳಲ್ಲಿ ನಟಿಸಿದ ಪ್ರದೀಪ್ ಅವರಿಗೆ ತುಳುವಿನಲ್ಲಿ ಚಿತ್ರವೊಂದನ್ನು ನಿರ್ದೇಶಿಸುವ ಕನಸಿತ್ತು. ಇದೀಗ ಸೋಡಾ ಶರ್ಬತ್ ಮೂಲಕ ಈ ಕನಸು ಈಡೇರಿದಂತಾಗಿದೆ. ಚಿತ್ರದುದ್ದಕ್ಕೂ ತನ್ನ ವಿಭಿನ್ನ ಶೈಲಿಯ ನಟನೆಯೊಂದಿಗೆ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡ ಪ್ರದೀಪ್ ತುಳು ಚಿತ್ರರಂಗದಲ್ಲೂ ಸೈ ಎನಿಸಿಕೊಂಡಿದ್ದಾರೆ. ಸದಭಿರುಚಿಯ ಚಿತ್ರಗಳ ಕೊರತೆ ಎದ್ದು ಕಾಣುತ್ತಿದ್ದ ಸಂದರ್ಭದಲ್ಲಿ ಪ್ರದೀಪ್ ಅವರು ಇಡೀ ಸಮಾಜೆವೇ ಚರ್ಚಿಸುವಂತಹ ಸಿನೆಮಾವೊಂದನ್ನು ಮಾಡಿ ತನ್ನ ಚಾಕಚಕ್ಯತೆ ಮೆರೆದಿದ್ದಾರೆ. ಪಾಲಡ್ಕ ಎಂಬ ಪುಟ್ಟ ಹಳ್ಳಿಯಿಂದ ಬಂದ ಪ್ರತಿಭೆ ಮುಂದೊಂದು ದಿನ ತುಳು ಚಿತ್ರರಂಗದಲ್ಲಿ ಇಷ್ಟೊಂದು ಅಬ್ಬರದ ಎಂಟ್ರಿ ಕೊಡಬಹುದು ಎಂದು ಯಾರೂ ನಂಬಿರಲಿಕ್ಕಿಲ್ಲ. ಆದರೆ ಛಲವಾದಿಯಾದ ಪ್ರದೀಪ್ ಅದನ್ನು ಮಾಡಿ ತೋರಿಸಿದ್ದಾರೆ. ಸೋಡಾ ಶರ್ಬತಿನ ಗೆಲುವು ಪ್ರದೀಪ್ ಹಾಗೂ ತಂಡಕ್ಕೆ ಮಾತ್ರವಲ್ಲದೆ ತುಳುಚಿತ್ರರಂಗಕ್ಕೂ ದಕ್ಕಿದ ಗೆಲುವಾಗಿದೆ. ಮೊದಲ ಪ್ರಯತ್ನದಲ್ಲೇ ತುಳು ಸಿನಿಪ್ರಿಯರ ಹೃದಯಗಳನ್ನು ಗೆದ್ದ ಪ್ರದೀಪ್ ಅವರಿಂದ ಇನ್ನೂ ಹೆಚ್ಚಿನ ಚಿತ್ರಗಳು ಮೂಡಿಬರಲಿ ಎಂದು ಆಶಿಸೋಣ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »