TOP STORIES:

ತುಳು ಸತ್ಯ ಅನಾವರಣದ ಮಹಾಶಕ್ತಿ ಡಾ. ವೆಂಕಟರಾಜ ಪುಣಿಂಚಿತ್ತಾಯ!


ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು ಕವಿಗಳ ಬಗ್ಗೆ ಕೇಳಿದರೆ ಮಾತ್ರ ಯಾಕೋ ಮುಖ ಮುಖ ನೋಡುತ್ತೇವೆ.

ಯಾರೊಬ್ಬರ ಪರಿಚಯವೂ ನಮಗಿಲ್ಲ. ಅವರ ಬರಹಗಳು ಕವಿತೆಗಳನ್ನಂತೂ ನೋಡಿಯೇ ಇರಲಿಕ್ಕಿಲ್ಲ. ಅನೇಕ ಕವಿಗಳು ಅಥವಾ ಸಾಹಿತಿಗಳು ತುಳು ಭಾಷೆಯಲ್ಲಿ ತುಳು ಭಾಷೆಗಾಗಿ ಅನರ್ಘ್ಯ ಸೇವೆ ಸಲ್ಲಿಸಿದ್ದಾರೆ. ಅಂಥವರಲ್ಲೇ ಒಬ್ಬರು ಡಾ. ವೆಂಕಟರಾಜ ಪುಣಿಚಿತ್ತಾಯ!

ಪುಣಿಚಿತ್ತಾಯರು ಸಾಹಿತಿ ಮಾತ್ರವಲ್ಲ ಸಂಶೋಧಕರು. ತುಳು ಸಾಹಿತ್ಯ ಸಂಶೋಧನೆಯಲ್ಲಿ ಅಗಾಧ ಸಾಧನೆ ಮಾಡಿರುವ ಪುಣಿಂಚಿತ್ತಾಯರು ತುಳುವಿನಲ್ಲಿ ಶಿಷ್ಟ ಸಾಹಿತ್ಯ ಪರಂಪರೆಯೇ ಇರಲಿಲ್ಲ ಎಂಬ ವಾದವನ್ನು ಅಲ್ಲಗಳೆದು 4 ಅತಿ ಪ್ರಾಚೀನ ತಾಡವಾಲೆ ಗ್ರಂಥಗಳನ್ನು ಪತ್ತೆಹಚ್ಚಿ ಅವುಗಳನ್ನು ಕನ್ನಡಕ್ಕೆ ಲಿಪ್ಯಂತರಗೊಳಿಸಿ ವಿಸ್ತಾರವಾದ ಪೀಠಿಕೆ, ಅಡಿಟಿಪ್ಪಣಿ, ಅರ್ಥ ಕೋಶಗಳೊಂದಿಗೆ ಸಂಪಾದಿಸುವ ಮೂಲಕ ತುಳು ಭಾಷೆಗೆ ಭಾರತದ ಇತರ 20 ಭಾಷೆಗಳ ಸಾಲಿನಲ್ಲಿ ಸಮಾನ ಸ್ಥಾನವನ್ನು ದೊರಕಿಸಿಕೊಟ್ಟ ಶ್ರೇಯಸ್ಸು ಹೊಂದಿದ್ದಾರೆ. ಶ್ರೀ ಭಾಗವತೊ, ಕಾವೇರಿ, ದೇವಿ ಮಹಾತ್ಮೆ, ತುಳು ಮಹಾಭಾರತೋ ಈ ಪ್ರಾಚೀನ ತುಳು ಗ್ರಂಥಗಳಾಗಿವೆ. ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳ ಬೆನ್ನು ಹತ್ತಿ ಹೋಗಿ ತುಳುವಿಗೂ ಲಿಪಿ ಇದೆ ಎಂದು ತೋರಿಸಿದ ಡಾ. ವೆಂಕಟರಾಜ ಪುಣಿಂಚಿತ್ತಾಯರ ಸಾಧನೆ ತುಳುನಾಡು ಯಾವತ್ತೂ ಮರೆಯಲಾಗದ್ದು.

ಎಲ್ಲ ದ್ರಾವಿಡ ಭಾಷೆಗಳಂತೆ ಸಂಶೋಧನೆಯ ಶಾಸ್ತ್ರೀಯ ಚೌಕಟ್ಟಿನಲ್ಲಿ ತುಳುವಿನ ಬಗ್ಗೆ ಮೊದಲು ಆಸಕ್ತಿ ತೋರಿಸಿದ್ದು ಇಂಗ್ಲಿಷರು. ಆದರೆ, ತುಳುವಿನ ಮೂಲದ ಜಾಡು ಹುಡುಕಿ ಹೊರಟವರು ಪುಣಿಂಚಿತ್ತಾಯರು.

ಅವರನ್ನು ಸಂಶೋಧಕರನ್ನಾಗಿಸಿದ್ದು ಹೊರಗಿನದ್ದಲ್ಲ, ಒಳಗಿನ ಒತ್ತಡ. ಗದ್ದೆಯಲ್ಲಿ ಕಾಯಕ ನಡೆಸುತ್ತಿದ್ದ ಹತ್ತಾರು ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳು ಅವರಲ್ಲಿ ಮೂಡಿಸಿದ ಆಸಕ್ತಿ ‘ಶ್ರೀ ಭಾಗವತೋ’ದಂಥ ಪ್ರಾಚೀನ ತುಳು ಕಾವ್ಯದ ಹುಡುಕಾಟ ಸತತ ಸಂಶೋಧನ ಕಾಯಕದ ವರೆಗೆ ತಂದು ನಿಲ್ಲಿಸಿತು.

ಸಂಶೋಧನೆ ಸ್ವಭಾವವನ್ನು ಮೂಲಭೂತವಾಗಿಯೇ ಹೊಂದಿದ್ದ ಪುಣಿಂಚಿತ್ತಾಯರನ್ನು ಪಂಚ ದ್ರಾವಿಡ ಭಾಷೆಗಳ ಪೆಕಿ ತುಳುವನ್ನು ಉಳಿದು ಮಿಕ್ಕ 4ಕ್ಕೂ ಲಿಪಿಯಿದೆ. ಹಾಗಿದ್ದರೆ ತುಳುವಿಗೂ ಲಿಪಿ ಇದ್ದಿರಲೇಬೇಕು ಎಂಬ ಜಿಜ್ಞಾಸೆ ಕಾಡುತ್ತಲೇ ಇತ್ತು. ಪುಣಿಂಚಿತ್ತಾಯರು ಒಮ್ಮೆ ಮಧೂರಿನ ಶಿವನಾರಾಯಣ ಸರಳಾಯ ಅವರ ನಿವಾಸಕ್ಕೆ ತೆರಳಿದ್ದ ವೇಳೆ ಮಾತಿನ ನಡುವೆ ಸರಳಾಯರು ತಂದು ತೋರಿದ ತಾಡವಾಲೆ ಗ್ರಂಥವೇ ಹೊಸ ಅಧ್ಯಾಯ ಬರೆಯಿತು. ಆ ಕೃತಿ ತುಳು ಮಹಾಕಾವ್ಯ ‘ಶ್ರೀಭಾಗವತೋ’.

16ನೇ ಶತಮಾನದ ಅಂದಾಜಿನಲ್ಲಿ ಕವಿ ವಿಷ್ಣುತುಂಗ ಈ ಕತಿ ರಚಿಸಿದ್ದರು. ಇದರ ಜಾಡು ಹಿಡಿದು ಹೋದ ವರು ಕೋಯಿಕೋಡ್ ವಿವಿ ಸಂಸ್ಕೃತ ಗ್ರಂಥಾಲಯದಲ್ಲಿ ಅನಾಥವಾಗಿದ್ದ ತುಳು ಕಾವ್ಯ ‘ಕಾವೇರಿ’ಯನ್ನು ಪತ್ತೆ ಹಚ್ಚಿದರು. ನಂತರ ದೇವಿ ಮಹಾತ್ಮೆ, ನಾಟಿ ವೆದ್ಯ ಪದ್ಧತಿಯ ಚರ್ಚೆಗಳಿರುವ ಗ್ರಂಥವೊಂದನ್ನೂ ಹುಡುಕಿದರು.

ತುಳು ಪಾಡ್ದನಗಳನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿದ್ದು ತುಳು ಜಾನಪದ ಲೋಕದಲ್ಲಿ ಅಜರಾಮರರನ್ನಾಗಿಸಿದೆ.

Inputs: Beauty of Tulunadu


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »