TOP STORIES:

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಬಡವರ ಬಂಧು ಶ್ರೀ ಪಿ. ಸೇಸಪ್ಪ ಟೈಲರ್ ಆಯ್ಕೆ


2020-21ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿರುವ ಸಮಾಜ ಸೇವಕ, ಬಡವರ ಬಂಧು ಅಜಾತ ಶತ್ರು ಶ್ರೀ ಪಿ. ಸೇಸಪ್ಪ ಟೈಲರ್ ಸುದರ್ಶನ ನಗರ ಪಜೀರು ಇವರಿಗೆ ತುಂಬು ಹೃದಯದ ಅಭಿನಂದನೆಗಳು.

ಶ್ರೀ ಸೇಸಪ್ಪ ಪೂಜಾರಿಯವರ ಜೀವನ ಪರಿಚಯ

ದಿ| ಗುರುವ ಪೂಜಾರಿ ಹಾಗೂ ಶ್ರೀಮತಿ ಗಂಗಾ ಪೂಜಾರ್ತಿ ದಂಪತಿಗಳಿಗೆ ಮೂರನೇ ಮಗನಾಗಿ ಪಜೀರು ಗ್ರಾಮದ ತಂಜರೆ ಎಂಬಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ, ಪಜೀರು ಇಲ್ಲಿ ಪೂರೈಸಿರುತ್ತಾರೆ. ಕಾರಣಾಂತರಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದೆ ಟೈಲರಿಂಗ್ ವೃತ್ತಿಯನ್ನು ಪ್ರಾರಂಭಿಸಿದರು. ವೃತ್ತಿಯಲ್ಲಿ ಟೈಲರ್ ಆಗಿದ್ದರೂ, ತಾವು ಪ್ರವೃತ್ತಿಯಲ್ಲಿ ರಾಜಕೀಯ ಮತ್ತು ಸಾಮಾಜಿಕ ಕಾರ್ಯವನ್ನು ಮಾಡಿರುತ್ತಾರೆ.

‌ಶ್ರೀ ಕೃಷ್ಣ ಭಜನಾ ಮಂದಿರ, ಪಜೀರು ಇದರ ಸ್ಥಾಪಕ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಹಾಗೂ ನೂತನ ಕಟ್ಟಡದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿ, ಮಂದಿರದ ಜೀರ್ಣೋದ್ಧಾರಕ್ಕೆ ಅವಿರತವಾಗಿ ಶ್ರಮ ಪಟ್ಟಿರುತ್ತಾರೆ. ‘ಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಛಾವಡಿ’ ಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿಯೂ ಅನನ್ಯ ಸೇವೆ ಸಲ್ಲಿಸಿದ ಇವರು, ಮಂದಿರದ ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ನಾರಾಯಣಗುರು ಮಂದಿರವನ್ನು ನಿರ್ಮಿಸುವಲ್ಲಿ ಕಾರಣೀಕರ್ತರಾಗಿದ್ದಾರೆ.

ಅಮ್ಮೆಂಜಳ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ 3 ಅವಧಿಗೆ ನಿರ್ದೇಶಕರಾಗಿ, ಒಂದನೇ ದರ್ಜೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ‘ಸಾರ್ವಜನಿಕ ಹಿಂದೂ ರುದ್ರಭೂಮಿ, ಪಜೀರು.’ ಇದರ ಕಾರ್ಯದರ್ಶಿಯಾಗಿ ರುದ್ರಭೂಮಿ ನಿರ್ಮಿಸುವಲ್ಲಿ ಅವಿರತ ಪ್ರಯತ್ನ ಪಟ್ಟಿರುತ್ತಾರೆ. 1967 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿಯೂ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ.

ಪಜೀರು ಗ್ರಾಮ ಪಂಚಾಯತ್ ನಲ್ಲಿ 13 ವರ್ಷ ಸೇವೆ ಸಲ್ಲಿಸಿದ ಇವರು ಉಪಾಧ್ಯಕ್ಷರಾಗಿ, ಪ್ರಭಾರ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಾರೆ. ಹಾಗೂ ತಾಲೂಕು ಪಂಚಾಯತ್ ನಲ್ಲಿ 5 ವರ್ಷ ಕ್ರಿಯಾಶೀಲ ಸದಸ್ಯರಾಗಿ ಸಾರ್ವಜನಿಕ ಸೇವೆ ಸಲ್ಲಿಸಿರುತ್ತಾರೆ. ಪಜೀರು ಗ್ರಾಮದ ಪ್ರತಿಯೊಂದು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಇವರು, ಗ್ರಾಮದ ಸರ್ವಜನಾಂಗದವರ ಪ್ರೀತಿಗೆ ಪಾತ್ರರಾಗಿರುತ್ತಾರೆ. ಸರ್ವೋದಯ ಯುವಕ ಮಂಡಲ, ಪಜೀರು ಸುದರ್ಶನನಗರ ಇದರ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ‘ಟೈಲರಿಂಗ್ ಅಸೋಸಿಯೇಷನ್’ ನ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.

ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಶ್ರೀ ಕೃಷ್ಣ ಯಕ್ಷಗಾನ ಸಂಘದ ಪೋಷಕರಾಗಿ, ಊರಿನ ಮತ್ತು ಹತ್ತಿರದ ಗ್ರಾಮಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ನಿರಂತರ ಸಂಪರ್ಕವಿರಿಸಿಕೊಂಡಂತಹ ಇವರು, ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಜನರಿಗೆ ಟೈಲರಿಂಗ್ ತರಬೇತಿ ನೀಡಿ ಅವರ ಜೀವನದ ದಾರಿದೀಪವಾಗಿದ್ದಾರೆ.‌ ಎಲ್ಲರ ಬಳಿ ಬಹಳ ಪ್ರೀತಿಯಿಂದಲೇ ಮಾತನಾಡಿಸುವ ಇವರ ಬಳಿ, ಯಾರೇ ಬಂದರೂ ಬಂದವರ ಮನೆ ಭಾಷೆಯಲ್ಲೇ ಆತ್ಮೀಯವಾಗಿ ಮಾತನಾಡುವರು. ತುಳು, ಬ್ಯಾರಿ, ಕೊಂಕಣಿ, ಮಲಯಾಳಂ ಹೀಗೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡುವ ಜಾಣ್ಮೆ ಇವರದು. ಇವರ ಪತ್ನಿ, ತಾಲೂಕು ಪಂಚಾಯತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂದಿಗೂ ಇವರು ಹಾಗೂ ಇವರ ಪತ್ನಿ ಇಬ್ಬರೂ ಟೈಲರಿಂಗ್ ವೃತ್ತಿ ನಡೆಸಿ ಜೀವನ ಸಾಗಿಸುತ್ತಿದ್ದಾರೆ. 5 ಗ್ರಾಮಗಳಲ್ಲಿ ಚಿರಪರಿಚಿತರಾಗಿ, ‘ಬಡವರ ಬಂಧು’ ಎಂದು ಗುರುತಿಸಿಕೊಂಡಿರುವ ಪಜೀರು ಗ್ರಾಮದ ಶ್ರೀ ಸೇಸಪ್ಪ ಪೂಜಾರಿ ಇವರಿಗೆ ಗೌರವಪೂರ್ವಕವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಅವರಿಗೆ ತುಂಬು ಹೃದಯದ ಅಭಿನಂದನೆಗಳು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »