TOP STORIES:

FOLLOW US

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಬಡವರ ಬಂಧು ಶ್ರೀ ಪಿ. ಸೇಸಪ್ಪ ಟೈಲರ್ ಆಯ್ಕೆ


2020-21ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿರುವ ಸಮಾಜ ಸೇವಕ, ಬಡವರ ಬಂಧು ಅಜಾತ ಶತ್ರು ಶ್ರೀ ಪಿ. ಸೇಸಪ್ಪ ಟೈಲರ್ ಸುದರ್ಶನ ನಗರ ಪಜೀರು ಇವರಿಗೆ ತುಂಬು ಹೃದಯದ ಅಭಿನಂದನೆಗಳು.

ಶ್ರೀ ಸೇಸಪ್ಪ ಪೂಜಾರಿಯವರ ಜೀವನ ಪರಿಚಯ

ದಿ| ಗುರುವ ಪೂಜಾರಿ ಹಾಗೂ ಶ್ರೀಮತಿ ಗಂಗಾ ಪೂಜಾರ್ತಿ ದಂಪತಿಗಳಿಗೆ ಮೂರನೇ ಮಗನಾಗಿ ಪಜೀರು ಗ್ರಾಮದ ತಂಜರೆ ಎಂಬಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ, ಪಜೀರು ಇಲ್ಲಿ ಪೂರೈಸಿರುತ್ತಾರೆ. ಕಾರಣಾಂತರಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದೆ ಟೈಲರಿಂಗ್ ವೃತ್ತಿಯನ್ನು ಪ್ರಾರಂಭಿಸಿದರು. ವೃತ್ತಿಯಲ್ಲಿ ಟೈಲರ್ ಆಗಿದ್ದರೂ, ತಾವು ಪ್ರವೃತ್ತಿಯಲ್ಲಿ ರಾಜಕೀಯ ಮತ್ತು ಸಾಮಾಜಿಕ ಕಾರ್ಯವನ್ನು ಮಾಡಿರುತ್ತಾರೆ.

‌ಶ್ರೀ ಕೃಷ್ಣ ಭಜನಾ ಮಂದಿರ, ಪಜೀರು ಇದರ ಸ್ಥಾಪಕ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಹಾಗೂ ನೂತನ ಕಟ್ಟಡದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿ, ಮಂದಿರದ ಜೀರ್ಣೋದ್ಧಾರಕ್ಕೆ ಅವಿರತವಾಗಿ ಶ್ರಮ ಪಟ್ಟಿರುತ್ತಾರೆ. ‘ಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಛಾವಡಿ’ ಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿಯೂ ಅನನ್ಯ ಸೇವೆ ಸಲ್ಲಿಸಿದ ಇವರು, ಮಂದಿರದ ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ನಾರಾಯಣಗುರು ಮಂದಿರವನ್ನು ನಿರ್ಮಿಸುವಲ್ಲಿ ಕಾರಣೀಕರ್ತರಾಗಿದ್ದಾರೆ.

ಅಮ್ಮೆಂಜಳ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ 3 ಅವಧಿಗೆ ನಿರ್ದೇಶಕರಾಗಿ, ಒಂದನೇ ದರ್ಜೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ‘ಸಾರ್ವಜನಿಕ ಹಿಂದೂ ರುದ್ರಭೂಮಿ, ಪಜೀರು.’ ಇದರ ಕಾರ್ಯದರ್ಶಿಯಾಗಿ ರುದ್ರಭೂಮಿ ನಿರ್ಮಿಸುವಲ್ಲಿ ಅವಿರತ ಪ್ರಯತ್ನ ಪಟ್ಟಿರುತ್ತಾರೆ. 1967 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿಯೂ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ.

ಪಜೀರು ಗ್ರಾಮ ಪಂಚಾಯತ್ ನಲ್ಲಿ 13 ವರ್ಷ ಸೇವೆ ಸಲ್ಲಿಸಿದ ಇವರು ಉಪಾಧ್ಯಕ್ಷರಾಗಿ, ಪ್ರಭಾರ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಾರೆ. ಹಾಗೂ ತಾಲೂಕು ಪಂಚಾಯತ್ ನಲ್ಲಿ 5 ವರ್ಷ ಕ್ರಿಯಾಶೀಲ ಸದಸ್ಯರಾಗಿ ಸಾರ್ವಜನಿಕ ಸೇವೆ ಸಲ್ಲಿಸಿರುತ್ತಾರೆ. ಪಜೀರು ಗ್ರಾಮದ ಪ್ರತಿಯೊಂದು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಇವರು, ಗ್ರಾಮದ ಸರ್ವಜನಾಂಗದವರ ಪ್ರೀತಿಗೆ ಪಾತ್ರರಾಗಿರುತ್ತಾರೆ. ಸರ್ವೋದಯ ಯುವಕ ಮಂಡಲ, ಪಜೀರು ಸುದರ್ಶನನಗರ ಇದರ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ‘ಟೈಲರಿಂಗ್ ಅಸೋಸಿಯೇಷನ್’ ನ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.

ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಶ್ರೀ ಕೃಷ್ಣ ಯಕ್ಷಗಾನ ಸಂಘದ ಪೋಷಕರಾಗಿ, ಊರಿನ ಮತ್ತು ಹತ್ತಿರದ ಗ್ರಾಮಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ನಿರಂತರ ಸಂಪರ್ಕವಿರಿಸಿಕೊಂಡಂತಹ ಇವರು, ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಜನರಿಗೆ ಟೈಲರಿಂಗ್ ತರಬೇತಿ ನೀಡಿ ಅವರ ಜೀವನದ ದಾರಿದೀಪವಾಗಿದ್ದಾರೆ.‌ ಎಲ್ಲರ ಬಳಿ ಬಹಳ ಪ್ರೀತಿಯಿಂದಲೇ ಮಾತನಾಡಿಸುವ ಇವರ ಬಳಿ, ಯಾರೇ ಬಂದರೂ ಬಂದವರ ಮನೆ ಭಾಷೆಯಲ್ಲೇ ಆತ್ಮೀಯವಾಗಿ ಮಾತನಾಡುವರು. ತುಳು, ಬ್ಯಾರಿ, ಕೊಂಕಣಿ, ಮಲಯಾಳಂ ಹೀಗೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡುವ ಜಾಣ್ಮೆ ಇವರದು. ಇವರ ಪತ್ನಿ, ತಾಲೂಕು ಪಂಚಾಯತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂದಿಗೂ ಇವರು ಹಾಗೂ ಇವರ ಪತ್ನಿ ಇಬ್ಬರೂ ಟೈಲರಿಂಗ್ ವೃತ್ತಿ ನಡೆಸಿ ಜೀವನ ಸಾಗಿಸುತ್ತಿದ್ದಾರೆ. 5 ಗ್ರಾಮಗಳಲ್ಲಿ ಚಿರಪರಿಚಿತರಾಗಿ, ‘ಬಡವರ ಬಂಧು’ ಎಂದು ಗುರುತಿಸಿಕೊಂಡಿರುವ ಪಜೀರು ಗ್ರಾಮದ ಶ್ರೀ ಸೇಸಪ್ಪ ಪೂಜಾರಿ ಇವರಿಗೆ ಗೌರವಪೂರ್ವಕವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಅವರಿಗೆ ತುಂಬು ಹೃದಯದ ಅಭಿನಂದನೆಗಳು.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »