TOP STORIES:

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಬಡವರ ಬಂಧು ಶ್ರೀ ಪಿ. ಸೇಸಪ್ಪ ಟೈಲರ್ ಆಯ್ಕೆ


2020-21ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿರುವ ಸಮಾಜ ಸೇವಕ, ಬಡವರ ಬಂಧು ಅಜಾತ ಶತ್ರು ಶ್ರೀ ಪಿ. ಸೇಸಪ್ಪ ಟೈಲರ್ ಸುದರ್ಶನ ನಗರ ಪಜೀರು ಇವರಿಗೆ ತುಂಬು ಹೃದಯದ ಅಭಿನಂದನೆಗಳು.

ಶ್ರೀ ಸೇಸಪ್ಪ ಪೂಜಾರಿಯವರ ಜೀವನ ಪರಿಚಯ

ದಿ| ಗುರುವ ಪೂಜಾರಿ ಹಾಗೂ ಶ್ರೀಮತಿ ಗಂಗಾ ಪೂಜಾರ್ತಿ ದಂಪತಿಗಳಿಗೆ ಮೂರನೇ ಮಗನಾಗಿ ಪಜೀರು ಗ್ರಾಮದ ತಂಜರೆ ಎಂಬಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ, ಪಜೀರು ಇಲ್ಲಿ ಪೂರೈಸಿರುತ್ತಾರೆ. ಕಾರಣಾಂತರಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದೆ ಟೈಲರಿಂಗ್ ವೃತ್ತಿಯನ್ನು ಪ್ರಾರಂಭಿಸಿದರು. ವೃತ್ತಿಯಲ್ಲಿ ಟೈಲರ್ ಆಗಿದ್ದರೂ, ತಾವು ಪ್ರವೃತ್ತಿಯಲ್ಲಿ ರಾಜಕೀಯ ಮತ್ತು ಸಾಮಾಜಿಕ ಕಾರ್ಯವನ್ನು ಮಾಡಿರುತ್ತಾರೆ.

‌ಶ್ರೀ ಕೃಷ್ಣ ಭಜನಾ ಮಂದಿರ, ಪಜೀರು ಇದರ ಸ್ಥಾಪಕ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಹಾಗೂ ನೂತನ ಕಟ್ಟಡದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿ, ಮಂದಿರದ ಜೀರ್ಣೋದ್ಧಾರಕ್ಕೆ ಅವಿರತವಾಗಿ ಶ್ರಮ ಪಟ್ಟಿರುತ್ತಾರೆ. ‘ಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಛಾವಡಿ’ ಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿಯೂ ಅನನ್ಯ ಸೇವೆ ಸಲ್ಲಿಸಿದ ಇವರು, ಮಂದಿರದ ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ನಾರಾಯಣಗುರು ಮಂದಿರವನ್ನು ನಿರ್ಮಿಸುವಲ್ಲಿ ಕಾರಣೀಕರ್ತರಾಗಿದ್ದಾರೆ.

ಅಮ್ಮೆಂಜಳ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ 3 ಅವಧಿಗೆ ನಿರ್ದೇಶಕರಾಗಿ, ಒಂದನೇ ದರ್ಜೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ‘ಸಾರ್ವಜನಿಕ ಹಿಂದೂ ರುದ್ರಭೂಮಿ, ಪಜೀರು.’ ಇದರ ಕಾರ್ಯದರ್ಶಿಯಾಗಿ ರುದ್ರಭೂಮಿ ನಿರ್ಮಿಸುವಲ್ಲಿ ಅವಿರತ ಪ್ರಯತ್ನ ಪಟ್ಟಿರುತ್ತಾರೆ. 1967 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿಯೂ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ.

ಪಜೀರು ಗ್ರಾಮ ಪಂಚಾಯತ್ ನಲ್ಲಿ 13 ವರ್ಷ ಸೇವೆ ಸಲ್ಲಿಸಿದ ಇವರು ಉಪಾಧ್ಯಕ್ಷರಾಗಿ, ಪ್ರಭಾರ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಾರೆ. ಹಾಗೂ ತಾಲೂಕು ಪಂಚಾಯತ್ ನಲ್ಲಿ 5 ವರ್ಷ ಕ್ರಿಯಾಶೀಲ ಸದಸ್ಯರಾಗಿ ಸಾರ್ವಜನಿಕ ಸೇವೆ ಸಲ್ಲಿಸಿರುತ್ತಾರೆ. ಪಜೀರು ಗ್ರಾಮದ ಪ್ರತಿಯೊಂದು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಇವರು, ಗ್ರಾಮದ ಸರ್ವಜನಾಂಗದವರ ಪ್ರೀತಿಗೆ ಪಾತ್ರರಾಗಿರುತ್ತಾರೆ. ಸರ್ವೋದಯ ಯುವಕ ಮಂಡಲ, ಪಜೀರು ಸುದರ್ಶನನಗರ ಇದರ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ‘ಟೈಲರಿಂಗ್ ಅಸೋಸಿಯೇಷನ್’ ನ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.

ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಶ್ರೀ ಕೃಷ್ಣ ಯಕ್ಷಗಾನ ಸಂಘದ ಪೋಷಕರಾಗಿ, ಊರಿನ ಮತ್ತು ಹತ್ತಿರದ ಗ್ರಾಮಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ನಿರಂತರ ಸಂಪರ್ಕವಿರಿಸಿಕೊಂಡಂತಹ ಇವರು, ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಜನರಿಗೆ ಟೈಲರಿಂಗ್ ತರಬೇತಿ ನೀಡಿ ಅವರ ಜೀವನದ ದಾರಿದೀಪವಾಗಿದ್ದಾರೆ.‌ ಎಲ್ಲರ ಬಳಿ ಬಹಳ ಪ್ರೀತಿಯಿಂದಲೇ ಮಾತನಾಡಿಸುವ ಇವರ ಬಳಿ, ಯಾರೇ ಬಂದರೂ ಬಂದವರ ಮನೆ ಭಾಷೆಯಲ್ಲೇ ಆತ್ಮೀಯವಾಗಿ ಮಾತನಾಡುವರು. ತುಳು, ಬ್ಯಾರಿ, ಕೊಂಕಣಿ, ಮಲಯಾಳಂ ಹೀಗೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡುವ ಜಾಣ್ಮೆ ಇವರದು. ಇವರ ಪತ್ನಿ, ತಾಲೂಕು ಪಂಚಾಯತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂದಿಗೂ ಇವರು ಹಾಗೂ ಇವರ ಪತ್ನಿ ಇಬ್ಬರೂ ಟೈಲರಿಂಗ್ ವೃತ್ತಿ ನಡೆಸಿ ಜೀವನ ಸಾಗಿಸುತ್ತಿದ್ದಾರೆ. 5 ಗ್ರಾಮಗಳಲ್ಲಿ ಚಿರಪರಿಚಿತರಾಗಿ, ‘ಬಡವರ ಬಂಧು’ ಎಂದು ಗುರುತಿಸಿಕೊಂಡಿರುವ ಪಜೀರು ಗ್ರಾಮದ ಶ್ರೀ ಸೇಸಪ್ಪ ಪೂಜಾರಿ ಇವರಿಗೆ ಗೌರವಪೂರ್ವಕವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಅವರಿಗೆ ತುಂಬು ಹೃದಯದ ಅಭಿನಂದನೆಗಳು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »