TOP STORIES:

FOLLOW US

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಬಡವರ ಬಂಧು ಶ್ರೀ ಪಿ. ಸೇಸಪ್ಪ ಟೈಲರ್ ಆಯ್ಕೆ


2020-21ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿರುವ ಸಮಾಜ ಸೇವಕ, ಬಡವರ ಬಂಧು ಅಜಾತ ಶತ್ರು ಶ್ರೀ ಪಿ. ಸೇಸಪ್ಪ ಟೈಲರ್ ಸುದರ್ಶನ ನಗರ ಪಜೀರು ಇವರಿಗೆ ತುಂಬು ಹೃದಯದ ಅಭಿನಂದನೆಗಳು.

ಶ್ರೀ ಸೇಸಪ್ಪ ಪೂಜಾರಿಯವರ ಜೀವನ ಪರಿಚಯ

ದಿ| ಗುರುವ ಪೂಜಾರಿ ಹಾಗೂ ಶ್ರೀಮತಿ ಗಂಗಾ ಪೂಜಾರ್ತಿ ದಂಪತಿಗಳಿಗೆ ಮೂರನೇ ಮಗನಾಗಿ ಪಜೀರು ಗ್ರಾಮದ ತಂಜರೆ ಎಂಬಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ, ಪಜೀರು ಇಲ್ಲಿ ಪೂರೈಸಿರುತ್ತಾರೆ. ಕಾರಣಾಂತರಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದೆ ಟೈಲರಿಂಗ್ ವೃತ್ತಿಯನ್ನು ಪ್ರಾರಂಭಿಸಿದರು. ವೃತ್ತಿಯಲ್ಲಿ ಟೈಲರ್ ಆಗಿದ್ದರೂ, ತಾವು ಪ್ರವೃತ್ತಿಯಲ್ಲಿ ರಾಜಕೀಯ ಮತ್ತು ಸಾಮಾಜಿಕ ಕಾರ್ಯವನ್ನು ಮಾಡಿರುತ್ತಾರೆ.

‌ಶ್ರೀ ಕೃಷ್ಣ ಭಜನಾ ಮಂದಿರ, ಪಜೀರು ಇದರ ಸ್ಥಾಪಕ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಹಾಗೂ ನೂತನ ಕಟ್ಟಡದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿ, ಮಂದಿರದ ಜೀರ್ಣೋದ್ಧಾರಕ್ಕೆ ಅವಿರತವಾಗಿ ಶ್ರಮ ಪಟ್ಟಿರುತ್ತಾರೆ. ‘ಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಛಾವಡಿ’ ಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿಯೂ ಅನನ್ಯ ಸೇವೆ ಸಲ್ಲಿಸಿದ ಇವರು, ಮಂದಿರದ ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ನಾರಾಯಣಗುರು ಮಂದಿರವನ್ನು ನಿರ್ಮಿಸುವಲ್ಲಿ ಕಾರಣೀಕರ್ತರಾಗಿದ್ದಾರೆ.

ಅಮ್ಮೆಂಜಳ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ 3 ಅವಧಿಗೆ ನಿರ್ದೇಶಕರಾಗಿ, ಒಂದನೇ ದರ್ಜೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ‘ಸಾರ್ವಜನಿಕ ಹಿಂದೂ ರುದ್ರಭೂಮಿ, ಪಜೀರು.’ ಇದರ ಕಾರ್ಯದರ್ಶಿಯಾಗಿ ರುದ್ರಭೂಮಿ ನಿರ್ಮಿಸುವಲ್ಲಿ ಅವಿರತ ಪ್ರಯತ್ನ ಪಟ್ಟಿರುತ್ತಾರೆ. 1967 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿಯೂ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ.

ಪಜೀರು ಗ್ರಾಮ ಪಂಚಾಯತ್ ನಲ್ಲಿ 13 ವರ್ಷ ಸೇವೆ ಸಲ್ಲಿಸಿದ ಇವರು ಉಪಾಧ್ಯಕ್ಷರಾಗಿ, ಪ್ರಭಾರ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಾರೆ. ಹಾಗೂ ತಾಲೂಕು ಪಂಚಾಯತ್ ನಲ್ಲಿ 5 ವರ್ಷ ಕ್ರಿಯಾಶೀಲ ಸದಸ್ಯರಾಗಿ ಸಾರ್ವಜನಿಕ ಸೇವೆ ಸಲ್ಲಿಸಿರುತ್ತಾರೆ. ಪಜೀರು ಗ್ರಾಮದ ಪ್ರತಿಯೊಂದು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಇವರು, ಗ್ರಾಮದ ಸರ್ವಜನಾಂಗದವರ ಪ್ರೀತಿಗೆ ಪಾತ್ರರಾಗಿರುತ್ತಾರೆ. ಸರ್ವೋದಯ ಯುವಕ ಮಂಡಲ, ಪಜೀರು ಸುದರ್ಶನನಗರ ಇದರ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ‘ಟೈಲರಿಂಗ್ ಅಸೋಸಿಯೇಷನ್’ ನ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.

ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಶ್ರೀ ಕೃಷ್ಣ ಯಕ್ಷಗಾನ ಸಂಘದ ಪೋಷಕರಾಗಿ, ಊರಿನ ಮತ್ತು ಹತ್ತಿರದ ಗ್ರಾಮಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ನಿರಂತರ ಸಂಪರ್ಕವಿರಿಸಿಕೊಂಡಂತಹ ಇವರು, ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಜನರಿಗೆ ಟೈಲರಿಂಗ್ ತರಬೇತಿ ನೀಡಿ ಅವರ ಜೀವನದ ದಾರಿದೀಪವಾಗಿದ್ದಾರೆ.‌ ಎಲ್ಲರ ಬಳಿ ಬಹಳ ಪ್ರೀತಿಯಿಂದಲೇ ಮಾತನಾಡಿಸುವ ಇವರ ಬಳಿ, ಯಾರೇ ಬಂದರೂ ಬಂದವರ ಮನೆ ಭಾಷೆಯಲ್ಲೇ ಆತ್ಮೀಯವಾಗಿ ಮಾತನಾಡುವರು. ತುಳು, ಬ್ಯಾರಿ, ಕೊಂಕಣಿ, ಮಲಯಾಳಂ ಹೀಗೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡುವ ಜಾಣ್ಮೆ ಇವರದು. ಇವರ ಪತ್ನಿ, ತಾಲೂಕು ಪಂಚಾಯತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂದಿಗೂ ಇವರು ಹಾಗೂ ಇವರ ಪತ್ನಿ ಇಬ್ಬರೂ ಟೈಲರಿಂಗ್ ವೃತ್ತಿ ನಡೆಸಿ ಜೀವನ ಸಾಗಿಸುತ್ತಿದ್ದಾರೆ. 5 ಗ್ರಾಮಗಳಲ್ಲಿ ಚಿರಪರಿಚಿತರಾಗಿ, ‘ಬಡವರ ಬಂಧು’ ಎಂದು ಗುರುತಿಸಿಕೊಂಡಿರುವ ಪಜೀರು ಗ್ರಾಮದ ಶ್ರೀ ಸೇಸಪ್ಪ ಪೂಜಾರಿ ಇವರಿಗೆ ಗೌರವಪೂರ್ವಕವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಅವರಿಗೆ ತುಂಬು ಹೃದಯದ ಅಭಿನಂದನೆಗಳು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »