TOP STORIES:

ದಿಢೀರ್‌ ಕೋವಿಡ್‌ ಹೆಚ್ಚಳ : ಸಮಾರಂಭಗಳಿಗೆ ಏನಿದೆ ಹೊಸ ರೂಲ್ಸ್..?


ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ.‌ ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್‌ ಗಳು ಅನ್ವಯವಾಗುತ್ತದೆ.

ಹಾಗಿದ್ದಾರೆ ಯಾವೆಲ್ಲ ಕಡೆಗಳಲ್ಲಿ ಎಷ್ಟ ಜನರು ಸೇರಬಹುದು ಇಲ್ಲಿದೆ ಮಾಹಿತಿ..

ಮದುವೆ ಸಮಾರಂಭಕ್ಕೂ ನಿರ್ಬಂಧ: ಹೊಸ ವರ್ಷದಲ್ಲಿ ಮದುವೆಯಾಗಬೇಕೆಂದುಕೊಂಡವರು ಈ ರೂಲ್ಸ್‌ ಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಹೋರಾಂಗಣದಲ್ಲಿ ಆಗುವ ಮದುವೆಗಳಿಗೆ 200 ಜನರ ಮಿತಿಯನ್ನು ವಿಧಿಸಲಾಗಿದೆ. ಒಳಾಂಗಣದಲ್ಲಿ ನಡೆಯುವಂತಹ ಮದುವೆಗಳಿಗೆ 100 ಜನರ ಮಿತಿ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೂಡಾ ಎರಡು ಡೋಸ್ ಕೋವಿಡ್‌ ಲಸಿಕೆ ಪೂರ್ಣಗೊಂಡಿರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಲ್ಲಿ ಸದ್ಯ ಮದುವೆ ಸೀಜನ್ ಆರಂಭವಾಗುತ್ತಿದ್ದು, ಹೆಚ್ಚಿನ ಜನ ಸೇರುವುದರಿಂದ ಹೆಚ್ಚಿನ ಜನ ಸೇರುತ್ತಾರೆ.
ಈ ನಿಟ್ಟಿನಲ್ಲಿ ಮದುವೆಗಳ ಮೇಲೆ ಸರ್ಕಾರ ವಿಶೇಷ ನಿಗಾ ವಹಿಸಿ ನಿಯಂತ್ರಣಕ್ಕೆ ಸೂಚಿಸಿದೆ.

ದೇವಸ್ಥಾನಗಳಿಗೂ ನಿರ್ಬಂಧ:

ಇನ್ನು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ ಪುನಸ್ಕಾರ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಅಲ್ಲಿನ ಸೇವೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಾತ್ರೆಗಳನ್ನು ನಡೆಸುವಂತಿಲ್ಲ:

ಜಾತ್ರೆ ಮತ್ತು ಉತ್ಸವಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಜನಜಂಗುಳಿ ಸೇರುವಂತಹ ಜಾತ್ರೆ ಮತ್ತುಉತ್ಸವಗಳನ್ನು ಈ ಕೂಡಲೇ ರದ್ದು ಮಾಡುವಂತೆ ಎಲ್ಲ ಜಿಲ್ಲೆಗಳಿಗೂ ಸೂಚಿಸಲಾಗಿದೆ. ಕೇವಲ ಸಾಂಪ್ರದಾಯಿಕ ಆಚರಣೆಗಳು ಮಾತ್ರ ನಡೆಯಬಹುದು. ಆದರೆ, ಜನ ಗುಂಪಾಗಿ ಉತ್ಸವಗಳನ್ನು ನಡೆಸುವುದು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್‌ ಹರಡುವಿಕೆಯ ತೀವ್ರತೆ ಹೆಚ್ಚಾಗುತ್ತಿರೋದ್ರಿಂದ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಸಮಾರಂಭಗಳಲ್ಲೂ ಕೊರೊನಾ ಎಚ್ಚರಿಕೆ ಕ್ರಮಗಳನ್ನು ಪಾಲಿಸೋದು ನಿಮ್ಮ ಆರೋಗ್ಯ ದೃಷ್ಠಿಯಿಂದ ಪಾಲಿಸೋದು ಅತ್ಯಗತ್ಯ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »