TOP STORIES:

ದಿಢೀರ್‌ ಕೋವಿಡ್‌ ಹೆಚ್ಚಳ : ಸಮಾರಂಭಗಳಿಗೆ ಏನಿದೆ ಹೊಸ ರೂಲ್ಸ್..?


ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ.‌ ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್‌ ಗಳು ಅನ್ವಯವಾಗುತ್ತದೆ.

ಹಾಗಿದ್ದಾರೆ ಯಾವೆಲ್ಲ ಕಡೆಗಳಲ್ಲಿ ಎಷ್ಟ ಜನರು ಸೇರಬಹುದು ಇಲ್ಲಿದೆ ಮಾಹಿತಿ..

ಮದುವೆ ಸಮಾರಂಭಕ್ಕೂ ನಿರ್ಬಂಧ: ಹೊಸ ವರ್ಷದಲ್ಲಿ ಮದುವೆಯಾಗಬೇಕೆಂದುಕೊಂಡವರು ಈ ರೂಲ್ಸ್‌ ಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಹೋರಾಂಗಣದಲ್ಲಿ ಆಗುವ ಮದುವೆಗಳಿಗೆ 200 ಜನರ ಮಿತಿಯನ್ನು ವಿಧಿಸಲಾಗಿದೆ. ಒಳಾಂಗಣದಲ್ಲಿ ನಡೆಯುವಂತಹ ಮದುವೆಗಳಿಗೆ 100 ಜನರ ಮಿತಿ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೂಡಾ ಎರಡು ಡೋಸ್ ಕೋವಿಡ್‌ ಲಸಿಕೆ ಪೂರ್ಣಗೊಂಡಿರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಲ್ಲಿ ಸದ್ಯ ಮದುವೆ ಸೀಜನ್ ಆರಂಭವಾಗುತ್ತಿದ್ದು, ಹೆಚ್ಚಿನ ಜನ ಸೇರುವುದರಿಂದ ಹೆಚ್ಚಿನ ಜನ ಸೇರುತ್ತಾರೆ.
ಈ ನಿಟ್ಟಿನಲ್ಲಿ ಮದುವೆಗಳ ಮೇಲೆ ಸರ್ಕಾರ ವಿಶೇಷ ನಿಗಾ ವಹಿಸಿ ನಿಯಂತ್ರಣಕ್ಕೆ ಸೂಚಿಸಿದೆ.

ದೇವಸ್ಥಾನಗಳಿಗೂ ನಿರ್ಬಂಧ:

ಇನ್ನು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ ಪುನಸ್ಕಾರ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಅಲ್ಲಿನ ಸೇವೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಾತ್ರೆಗಳನ್ನು ನಡೆಸುವಂತಿಲ್ಲ:

ಜಾತ್ರೆ ಮತ್ತು ಉತ್ಸವಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಜನಜಂಗುಳಿ ಸೇರುವಂತಹ ಜಾತ್ರೆ ಮತ್ತುಉತ್ಸವಗಳನ್ನು ಈ ಕೂಡಲೇ ರದ್ದು ಮಾಡುವಂತೆ ಎಲ್ಲ ಜಿಲ್ಲೆಗಳಿಗೂ ಸೂಚಿಸಲಾಗಿದೆ. ಕೇವಲ ಸಾಂಪ್ರದಾಯಿಕ ಆಚರಣೆಗಳು ಮಾತ್ರ ನಡೆಯಬಹುದು. ಆದರೆ, ಜನ ಗುಂಪಾಗಿ ಉತ್ಸವಗಳನ್ನು ನಡೆಸುವುದು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್‌ ಹರಡುವಿಕೆಯ ತೀವ್ರತೆ ಹೆಚ್ಚಾಗುತ್ತಿರೋದ್ರಿಂದ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಸಮಾರಂಭಗಳಲ್ಲೂ ಕೊರೊನಾ ಎಚ್ಚರಿಕೆ ಕ್ರಮಗಳನ್ನು ಪಾಲಿಸೋದು ನಿಮ್ಮ ಆರೋಗ್ಯ ದೃಷ್ಠಿಯಿಂದ ಪಾಲಿಸೋದು ಅತ್ಯಗತ್ಯ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »