TOP STORIES:

FOLLOW US

ದಿನನಿತ್ಯ ದಾಳಿಂಬೆ ತಿಂದರೆ ಹೀಗೆ ಆಗುವುದು ಕಂಡಿತ…


ನಾವು ದಿನನಿತ್ಯ ಉಪಯೋಗಿಸುವ ಹಣ್ಣುಹಂಪಲುಗಳಲ್ಲಿ ದಾಳಿಂಬೆ ವಿಭಿನ್ನ ಮತ್ತು ವಿಶಿಷ್ಟ ಹಣ್ಣಾಗಿದ್ದು ನಾಲಿಗೆ ರುಚಿ ಮಾತ್ರವಲ್ಲದೆ ದೇಹಕ್ಕೆ ಶಕ್ತಿಕೊಡುವ ಗುಣವನ್ನು ಹೊಂದಿದೆ ಎಂದರೆ ತಪ್ಪಾಗಲಾರದು.

ಇದನ್ನು ಹಣ್ಣಿನ ರೂಪದ ತಿನಿಸಾಗಿ ಮಾತ್ರವಲ್ಲದೆ, ಸಂಬಾರ ಪದಾರ್ಥಗಳಲ್ಲಿಯೂ ಉಪಯೋಗಿಸಲಾಗುತ್ತದೆ. ದಾಳಿಂಬೆಯು ಹಲವಷ್ಟು ಔಷಧೀಯ ಗುಣಗಳನ್ನು ಹೊಂದಿದ್ದು, ಸೇವನೆಗೆ ಉಪಯುಕ್ತವಾಗಿದೆ. ಮಾರುಕಟ್ಟೆಯಲ್ಲಿ ದೊರೆಯುವ ದಾಳಿಂಬೆಗೆ ಬಹಳಷ್ಟು ಬೇಡಿಕೆಯಿದ್ದು, ಇದನ್ನು ಎಲ್ಲ ಕಡೆಗಳಲ್ಲಿ ಬೆಳೆಯುವುದು ಸಾಧ್ಯವಾಗದ ಮಾತು. ಸಮಶೀತೋಷ್ಣ ವಾತಾವರಣ ಶೀತವಲಯಗಳಲ್ಲಿ ಇದು ಚೆನ್ನಾಗಿ ಬೆಳೆಯುತ್ತದೆ. ಹಿಮಾಚಲಪ್ರದೇಶ, ಜಮ್ಮು ಇಲ್ಲಿನ ಕಾಡುಗಳಲ್ಲಿ ಕಾಡು ದಾಳಿಂಬೆಗಳು ಹೆಚ್ಚಾಗಿ ಕಂಡು ಬರುತ್ತವೆ.

ಈಗಾಗಲೇ ಹಲವು ರೈತರು ದಾಳಿಂಬೆ ಬೆಳೆದು ಬದುಕು ಕಂಡುಕೊಂಡಿದ್ದಾರೆ. ಇತ್ತೀಚೆಗೆ ಹಲವು ತಳಿಗಳು ಬಂದಿವೆ. ಬಹಳಷ್ಟು ಕಡೆಗಳಲ್ಲಿ ತಮ್ಮ ಮನೆಯ ಹಿತ್ತಲಲ್ಲಿ ಗಿಡನೆಟ್ಟು ಬೆಳೆಸುವುದು ಕೂಡ ಕಾಣಸಿಗುತ್ತದೆ. ದಾಳಿಂಬೆ ವಾಣಿಜ್ಯಿಕವಾಗಿ ಆದಾಯ ತರುವುದನ್ನು ಆಚೆಗಿಟ್ಟು ಆರೋಗ್ಯದ ದೃಷ್ಠಿಯಿಂದ ಸಿಗುವ ಲಾಭವನ್ನು ಅರಿತರೆ ಮನೆ ಪಕ್ಕದಲ್ಲೊಂದು ಗಿಡನೆಡೋಣ ಎಂದೆನಿಸದಿರದು. ಕಾರಣ ಇದರ ಹಣ್ಣು ಮಾತ್ರವಲ್ಲದೆ, ಮರದ ಬೇರಿನಿಂದ ಹಿಡಿದು ತೊಗಟೆ, ಹೂ, ಬೀಜ ಎಲ್ಲವೂ ಔಷಧೀಯ ಗುಣಗಳಿಂದ ಕೂಡಿದ್ದು ಬಹು ಉಪಯುಕ್ತವಾಗಿವೆ.

ದಾಳಿಂಬೆ ರಸವನ್ನು ಸೇವಿಸುವುದರಿಂದ ಅಮಶಂಕೆಯನ್ನು ತಡೆಯಬಹುದಾಗಿದೆ. ಗಿಡದ ತೊಗಟೆಯ ಕಷಾಯಕ್ಕೆ ಚಿಟಿಕೆ ಉಪ್ಪು ಬೆರೆಸಿ ಮುಕ್ಕಳಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ. ಇದರ ಚಿಗುರು ಎಲೆಗಳನ್ನು ಬಾಯಲ್ಲಿ ಹಾಕಿಕೊಂಡು ಅಗೆಯುವುದರಿಂದ ವಸಡಿನಿಂದ ರಕ್ತ ಬರುವುದನ್ನು ತಡೆಯಲು ಸಾಧ್ಯವಿದೆ. ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಚೆನ್ನಾಗಿ ಪುಡಿ ಮಾಡಿ ಅದರೊಂದಿಗೆ ಸ್ವಲ್ಪ ಕರಿಮೆಣಸು, ಉಪ್ಪು ಬೆರೆಸಿ ನುಣ್ಣಗೆ ಪುಡಿ ಮಾಡಿ ಆ ಪುಡಿಯಿಂದ ಹಲ್ಲು ಉಜ್ಜಿದರೆ ಹಲ್ಲು ಹೊಳಪು ಬರುತ್ತದೆ. ಜತೆಗೆ ದೃಢತ್ವ ಹೊಂದುತ್ತದೆ.

ದಾಳಿಂಬೆ ಹಣ್ಣು ಸೇವಿಸುವುದರಿಂದ ವಿಷಮ ಶೀತ ಜ್ವರ, ಅಸ್ತಮಾ, ಮಾನಸಿಕ ಒತ್ತಡ ಹಾಗೂ ನರಗಳ ದೌರ್ಬಲ್ಯದಿಂದ ಉಂಟಾಗುವ ತಲೆನೋವು ಕಡಿಮೆಯಾಗುತ್ತದೆ. ಇದು ಪಿತ್ತಶಮನ ಗುಣ ಹೊಂದಿದ್ದು, ಬಾಯಾರಿಕೆಯನ್ನು ನೀಗಿಸುವಲ್ಲಿ ಮತ್ತು ದೇಹಕ್ಕೆ ಶಕ್ತಿ ನೀಡುವಲ್ಲಿ ಸಹಕಾರಿಯಾಗಿದೆ. ರಸದೊಂದಿಗೆ ಅಷ್ಟೇ ಪ್ರಮಾಣದ ಜೇನು ಬೆರೆಸಿ ಸೇವಿಸಿದ್ದೇ ಆದಲ್ಲಿ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಬೇಸಿಗೆಯಲ್ಲಿ ಆಗುವ ಬಾಯಾರಿಕೆ ತಡೆಗೆ ದಾಳಿಂಬೆ ರಸದಿಂದ ಮಾಡಿದ ಪಾನೀಯ ಉತ್ತಮವಾಗಿದ್ದು, ಬಾಯಾರಿಕೆ ನೀಗಿಸಿ ದೇಹವನ್ನು ತಂಪಾಗಿಡುವಲ್ಲಿ ಸಹಾಯ ಮಾಡುತ್ತದೆ.

ದಾಳಿಂಬೆಯ ಬೀಜದಲ್ಲಿ ಜಠರೋತ್ತೇಜಕ ಗುಣವಿದ್ದು, ಬೀಜದ ಪುಡಿಯೊಂದಿಗೆ ಸ್ವಲ್ಪ ಜೇನು ಸೇರಿಸಿ ಸೇವಿಸಿದರೆ ಅತಿಸಾರವನ್ನು ನಿಯಂತ್ರಿಸಬಹುದು. ಒಂದು ಚಮಚದಷ್ಟು ಹಣ್ಣಿನ ಬೀಜಗಳನ್ನು ತೆಗೆದುಕೊಂಡು ಚೆನ್ನಾಗಿ ಅರೆದು ನಂತರ ಒಂದು ಲೋಟದ ತುಂಬಾ ಹುರುಳಿ ಕಾಳಿನ ಸೂಪ್ ನ್ನು ತೆಗೆದುಕೊಂಡು ಎರಡನ್ನು ಬೆರೆಸಿ ಕುಡಿಯುವುದರಿಂದ ಮೂತ್ರಕೋಶದ ಮತ್ತು ಮೂತ್ರ ಜನಕಾಂಗಗಳಲ್ಲಿ ಸಿಕ್ಕಿ ಹಾಕಿಕೊಂಡ ಕಲ್ಲುಗಳು ಕರಗುತ್ತವೆ ಎನ್ನಲಾಗಿದೆ.

ಇನ್ನು ದಾಳಿಂಬೆ ಹಣ್ಣಿನ ಒಳಗಡೆ ರಸ ತುಂಬಿದ ಕೆಂಪು ಗುಲಾಬಿ ಹಳದಿ ಬಿಳಿಯ ಸಿಹಿ ಒಗರು ಹುಳಿ ರುಚಿಯ ತಿರುಳಿನ ಬೀಜಗಳನ್ನು ಒಣಗಿಸಿ ಅನಾರ್ ದಾನ್ ತಯಾರಿಸುತ್ತಾರೆ ಇದು ರುಚಿಕಾರಕ ಗುಣ ಹೊಂದಿದ್ದು, ಉತ್ತರ ಭಾರತದಲ್ಲಿ ಹೆಚ್ಚಾಗಿ ಅಡುಗೆಗಳಿಗೆ ಹುಳಿಯ ರುಚಿ ಕೊಡಲು ಬಳಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ದಾಳಿಂಬೆ ಆರೋಗ್ಯದ ದೃಷ್ಠಿಯಿಂದ ಹಲವು ರೀತಿಯಲ್ಲಿ ಉಪಕಾರಿಯಾಗಿದ್ದು, ಅದನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಜಾಣತನವಾಗಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »