TOP STORIES:

FOLLOW US

” ದೀಪಾವಳಿ ಮಾಂಕಾಳಿ ಕುಣಿತ “


ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಹಾಗು ಉಡುಪಿ ತಾಲೂಕುಗಳಲ್ಲಿ ಮಾತ್ರ ಹೆಚ್ಚಾಗಿ ಈ ಕುಣಿತ ಕಂಡು ಬರುತ್ತದೆ. ದೀಪಾವಳಿ ಪಾಡ್ಯದಿಂದ ಮೊದಲ್ಗೊಂಡು ಪ್ರತೀ ಹಗಲಲ್ಲಿ ನಲಿಕೆ (ಪಾಣ) ಜನಾಂಗದವರು ಈ ಕುಣಿತವನ್ನು ನಡೆಸುತ್ತಾರೆ. ಗ್ರಾಮದ ಗುತ್ತು ಅಥವಾ ಗೂಡಿನ ಮನೆಯಿಂದ ಆರಂಭಿಸಿ ಎಲ್ಲಾ ಮನೆಗಳಿಗೂ ಹೋಗುತ್ತಾರೆ. ಇವರಿಗೆ ಸಂಭಾವನೆಯಾಗಿ ಮನೆಮನೆಯಿಂದ ಹಣ ಸಿಗುವುದಿಲ್ಲ. ಬದಲಿಗೆ ಅಕ್ಕಿ, ಎಣ್ಣೆ, ಉಪ್ಪು, ಮೆಣಸು ದೊರೆಯುತ್ತದೆ.ಮಾಂಕಾಳಿ ಕುಣಿತದಲ್ಲಿ ಒಬ್ಬ ನರ್ತಕ ಇರುತ್ತಾನೆ. ಈತ ಕಂಗಿನ ಹಾಳೆಯಿಂದ ತಯಾರಿಸಿದ ಮುಖವಾಡವನ್ನು ಮುಖಕ್ಕೆ ಹಿಡಿದುಕೊಳ್ಳುತ್ತಾನೆ. ಮುಖವಾಡವೆಂದರೆ ಕಣ್ಣು, ಮೂಗು, ತೆರೆದ ಬಾಯಿ, ಚಾಚಿದ ನಾಲಿಗೆಯನ್ನು ಬಿಳಿ, ಹಳದಿ, ಕಪ್ಪು, ಹಸಿರು, ಕೆಂಪು ಬಣ್ಣಗಳಿಂದ ತಯಾರಿಸುತ್ತಾರೆ. ಕುಣಿಯುವವ ಸೀರೆಯನ್ನು ನೆರಿಗೆ ಹಾಕಿ ಒಂದರ ಮೇಲೊಂದರಂತೆ ಹಂತಹಂತವಾಗಿ ಹಾಕಿ ಸೊಂಟಕ್ಕೆ ಕಟ್ಟಿಕೊಳ್ಳುತ್ತಾನೆ. ಕಾಲಿಗೆ ಗಗ್ಗರ ಕಟ್ಟಿ ಮೈಯನ್ನು ದೊಗಲೆ ಅಂಗಿಯಿಂದ ಮುಚ್ಚಿಕೊಳ್ಳುತ್ತಾನೆ. ಮುಖವಾಡದ ಹಿಂದಿನಿಂದ ಒಂದು ಸೀರೆಯನ್ನು ಇಳಿ ಬಿಟ್ಟಿರುತ್ತಾನೆ. ಇದು ಮುಖವಾಡ ಇಟ್ಟುಕೊಂಡ ವ್ಯಕ್ತಿಯ ಬೆನ್ನನ್ನು ಆವರಿಸುತ್ತದೆ. ಮುಖವಾಡವನ್ನು ಮುಖಕ್ಕೆ ಕಟ್ಟಿಕೊಳ್ಳುವುದಿಲ್ಲ. ಬದಲಿಗೆ ಎರಡು ಕೈಗಳಿಂದ ಮುಖದೆದುರು ಹಿಡಿದುಕೊಳ್ಳುತ್ತಾರೆ.

Watch Video is here:  https://www.facebook.com/watch/?v=698187894157792

ಹಾಡು ಹೇಳುವಾತ ತೆಂಬರೆಯನ್ನು ಬಡಿದು ಹಾಡು ಹೇಳುತ್ತಿದ್ದಂತೆ ಇದರ ಲಯಕ್ಕನುಗುಣವಾಗಿ ನರ್ತಕ ಸಣ್ಣ ಹೆಜ್ಜೆಗಳನ್ನಿಟ್ಟು ಸುತ್ತು ಬರುತ್ತಾನೆ. ತೆಂಬರೆಯ ಬಡಿತ ನಿಧಾನವಾಗಿರುತ್ತದೆ. ಕೈಗಳಲ್ಲಿ ಮುಖವಾಡವನ್ನು ಮುಖಕ್ಕೆ ಎದುರಾಗಿ ಹಿಡಿದುಕೊಂಡಿರುವುದರಿಂದ ಕೈಗಳಲ್ಲಿ ಯಾವುದೇ ಭಂಗಿಯನ್ನು ಅಭಿನಯಿಸುವಂತಿಲ್ಲ. ಮುಖವಾಡವನ್ನೆತ್ತಿ ಕುಣಿತಗಾರ ನೆಲವನ್ನು ನೋಡಬೇಕಾಗಿರುವುದರಿಂದ ಕುಣಿತದಲ್ಲಿ ವೇಗ ಇರುವುದಿಲ್ಲ. ಈ ಸಂದರ್ಭದಲ್ಲಿ ಹೇಳುವ ಹಾಡು ತುಳು ಭಾಷೆಯಲ್ಲಿರುತ್ತದೆ. ಊರಿನ ರೋಗ ರುಜಿನಗಳನ್ನು ಹೋಗಲಾಡಿಸಲು ಘಟ್ಟದಿಂದ ಇಳಿದು ಮಾಂಕಾಳಿ ಬರುತ್ತಾಳೆ ಎಂಬ ನಂಬಿಕೆ ಜನಪದರಲ್ಲಿದೆ. ತುಳು ನಾಡಿನಲ್ಲಿ ಆಚರಣೆಯಲ್ಲಿರುವ ಅಟಿಕಳಿಂಜನು ಊರಿನ ಮಾರಿಯನ್ನು ನಿವಾರಿಸುವುದಕ್ಕಾಗಿ ಆಷಾಢ ಮಾಸದಲ್ಲಿ ವರ್ಷಕ್ಕೆ ಒಂದಾವರ್ತಿ ಗ್ರಾಮದಲ್ಲಿ ಬರುವುದು. ತುಳಸಿ ಪೂಜೆಯ ದಿನ ಮಾಂಕಾಳಿ ಕುಣಿತದ ಅಂತ್ಯ ಪೂಜೆ. ಆ ದಿನ ಸಂಭಾವನೆಯಾಗಿ ದೊರೆತ ಭತ್ತ, ಅಕ್ಕಿ, ತೆಂಗಿನಕಾಯಿ, ಉಪ್ಪು, ಹುಳಿ, ಮಸಿ, ಮೆಣಸುಗಳನ್ನು ಸರಳೀ ಎಲೆಯಲ್ಲಿ ಸಾಂಕೇತಿಕವಾಗಿ ಮನೆಯ ಪಕ್ಕದಲ್ಲಿ ಬಡಿಸಿಡುತ್ತಾರೆ, ಅದರ ಎದುರು ಮಾಂಕಾಳಿಯ ಮುಖವಾಡವನ್ನಿಟ್ಟು ಊರಿನ ಮಾರಿಯನ್ನು ಕಳೆಯುವಂತೆ ಪ್ರಾರ್ಥಿಸುತ್ತಾರೆ, ಹಾಗೂ ಮುಖವಾಡವನ್ನು ತೆಗೆದು ಹೊಳೆಯಲ್ಲಿ ಬಿಡುತ್ತಾರೆ. ಈ ಮೂಲಕವಾಗಿ ಊರಿನ ಮಾರಿಯನ್ನು ಹೊಳೆ ದಾಟಿಸುವ ಆಶಯವನ್ನು ಕಾಣಬಹುದಾಗಿದೆ.

(ಸಂಪಾದಕರು: ಪ್ರೊ. ಹಿ. ಚಿ. ಬೋರಲಿಗಯ್ಯ, ಕರ್ನಾಟಕ ಜನಪದ ಕಲೆಗಳ ಕೋಶ. ಪುಟ ೨೬.)

Credits: Beauty of Tulunad  facebook page


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »