TOP STORIES:

FOLLOW US

ದುಬಾಯಿ ಉದ್ಯಮಿ ಸತೀಶ್ ಪೂಜಾರಿ ಬಡವರ ಪಾಲಿನ ಸಂಜೀವಿನಿ


ಉಡುಪಿಯ ಬೆಳಪು ಸೂರು ಪೂಜಾರಿ- ಪದ್ಮ ಪೂಜಾರಿ ದಂಪತಿಗಳ ಪುತ್ರರಾಗಿ 1962ರಲ್ಲಿ ಜನಿಸಿದ ಸತೀಶ್ ಪೂಜಾರಿ ಅವರು 1986ರಲ್ಲಿ ದುಬಾಯಿಗೆ ಆಗಮಿಸಿ ಪಯೋನಿರ್ ಇನ್ಸೂರೆನ್ಸ್ ಸಂಸ್ಥೆಯ ಟೆಕ್ನಿಕಲ್ ಮೇನೆಜರ್ ಆಗಿ ಉದ್ಯೋಗ ನಿರ್ವಹಿಸ ತೊಡಗಿಕೊಂಡಿದ್ದು ಇದೀಗ ಜನರಲ್ ಮೇನೆಜರ್ ಆಗಿ ಭಡ್ತಿ ಹೊಂದಿ ಸಂಸ್ಥೆಯ ಉನ್ನತಿಗೆ ಕಾರಣೀಭೂತ ರಾಗಿದ್ದಾರೆ.

ಕೊಲ್ಲಿ ರಾಷ್ಟ್ರದ ಇದೀಗಾ ತಮ್ಮದೇ ಸ್ವಂತವಾದ ಹೋಟೆಲ್ ಉದ್ಯಮವನ್ನು‌ ಸ್ಥಾಪಿಸಿದರು. ಅ ಮೂಲಕ ಊರಿನ ಹಲವರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದರು.

ಇವರು ಮುಲ್ಕಿ ವಿಜಯ ಕಾಲೇಜಿನಲ್ಲಿ ಬಿ.ಎ.ಪದವಿ ಶಿಕ್ಷಣ ಪಡೆದಿರುವ ಸತೀಶ್ ಪೂಜಾರಿ ಮುಂಬಯಿಯ ಮಿಥಿಬಾಯಿ ಕಾಲೇಜಿನಲ್ಲಿ ಕಾನೂನು ವ್ಯಾಸಂಗ ಹಾಗೂ ಇನ್ಸೂರೆನ್ಸ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯದ ಡಿಪ್ಲೊಮಾ ಪದವಿ ಗಳಿಸಿಕೊಂಡಿದ್ದಾರೆ.ಸತೀಶ್ ಪೂಜಾರಿ ಅವರು ಬಾಲ್ಯ ಕಾಲದಿಂದಲೇ ಕಲೆ -ಸಾಂಸ್ಕೃತಿಕ ರಂಗದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು, ನಾಟಕ-ಯಕ್ಷಗಾನದಂತಹ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿ ಕೊಂಡರು. ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಸತೀಶ್ ಪೂಜಾರಿ ಅವರು ಕರ್ನಾಟಕ ಸಂಘ ಶಾರ್ಜ ಇದರ ಅಧ್ಯಕ್ಷ, ಬಿಲ್ಲವಾಸ್ ಫ್ಯಾಮಿಲಿ ದುಬಾಯಿ ಇದರ ಅಧ್ಯಕ್ಷ, ಇನ್ಸೂರೆನ್ಸ್ ಇಂಡಿಯಾದ ಗೌರವ ಸದಸ್ಯ,ಕೆನರಾ ಎಂಟರ್ ಪ್ರೈಸಸ್ ದುಬಾಯಿ ಇದರ ಸದಸ್ಯ,ನಮ್ಮ ತುಳುವೆರ್ ದುಬಾಯಿ ಯ ಸ್ಥಾಪಕ ಸದಸ್ಯ, ಯುಎಇ ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಸದಸ್ಯ, ಧ್ವನಿ ಪ್ರತಿಷ್ಠಾನದ ಸದಸ್ಯತ್ವ ಹೀಗೆ ಸಂಘಟನಾತ್ಮಕವಾಗಿ ತೊಡಗಿಸಿಕೊಂಡಿದ್ದಾರೆ. ಗಲ್ಫ್ ನಾಡಿನಲ್ಲಿ ಕಲೆ, ಸಾಹಿತ್ಯ, ಕ್ರೀಡೆಗಳ ಪ್ರೋತ್ಸಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ರಕ್ತದಾನ, ಶಿಕ್ಷಣ ಸಹಾಯ, ಚಿಕಿತ್ಸಾ ಸಹಾಯ, ಬಡ ಹೆಣ್ಮಕ್ಕಳ ವಿವಾಹ ಸಹಾಯ ಮೊದಲಾದ ಸಮಾಜ ಸೇವೆಯಲ್ಲೂ ಇವರ ಕೊಡುಗೆ ಅಪಾರ ಬಡವರ ಪಾಲಿನ ಸಂಜೀವಿನಿ ಯಾಗಿದ್ದಾರೆ.

ಇವರ ಜೀವಮಾನದ ಸಾಧನೆಯನ್ನು ಗುರುತಿಸಿ ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ ಲಭಿಸಿದರ ಜೊತೆಗೆ ಶಾರ್ಜ ಕರ್ನಾಟಕ ಸಂಘದ ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಹಾಗೂ ಧ್ವನಿ ಪ್ರತಿಷ್ಠಾನ ಯುಎಇ, ಬಿಲ್ಲವಾಸ್ ದುಬೈ ಎಂಡ್ ನಾರ್ಥನ್ ಎಮಿರೇಟ್ಸ್, ಬಿಲ್ಲವರ ಬಳಗ ಅಬುಧಾಬಿ, ಕನ್ಯಾಡಿ ರಾಮಕ್ಷೇತ್ರ, ಬಿಲ್ಲವರ ಸಂಘ ಮುಂಬಯಿ, ಉಡುಪಿ ಮೊದಲಾದೆಡೆಯ ಸನ್ಮಾನಗಳು ಸಂದಿದೆ.ಇವರ ಧರ್ಮಪತ್ನಿಯಾದ ಶ್ರೀಮತಿ ಸುವರ್ಣ ಸತೀಶ್ ಪೂಜಾರಿ ಪತಿಯ ಸಾಮಾಜಿಕ, ಸಾಂಸ್ಕೃತಿಕ ರಂಗದ ಸೇವೆಗೂ ಸಾಥ್ ನೀಡುತ್ತಿದ್ದಾರೆ, ಶ್ರೀಮತಿ ಸುವರ್ಣ ಸತೀಶ್ ಪೂಜಾರಿ ಅವರು ಕೂಡ ಚಲನಚಿತ್ರ ಅಭಿನಯದಲ್ಲೂ ಸೈ ಎನಿಸಿದ್ದಾರೆ.

ಇಂತಃ ಸೇವಾ ಮನೋಭಾವದ ನಮ್ಮ ಬಿಲ್ಲವ ಸಮಾಜದ ಹಾಗೂ ತುಳುನಾಡಿನ ಹೆಮ್ಮೆಯ ಸಮಾಜ ಸೇವಕ ಸತೀಶ್ ಪೂಜಾರಿ, ತಾಯ್ನಾಡಿನ ಜನರ ಬಗ್ಗೆ ಇರುವ ಕಾಳಜಿ, ಜನರ ಕಷ್ಟಗಳನ್ನು ಆಲಿಸುತ್ತಾ ತನ್ನ ಕೈಯಲ್ಲಾದ ಸಹಾಯ ಮಾಡುತ್ತಾ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಬರಹ: ಪುಷ್ಪರಾಜ್ ಪೂಜಾರಿ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »