TOP STORIES:

ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್


ನಿರಂತರ ಸಮಾಜಮುಖಿ ಕಾರ್ಯಗಳೊಂದಿಗೆ ಸಮುದಾಯ ಹಾಗು ಸಮಾಜದಲ್ಲಿರುವ ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್. ಮೂರು ವರ್ಷದ ಪಯಣದಲ್ಲಿ ಹಲವಾರು‌ ಸೇವಾ ಕಾರ್ಯವನ್ನು ನೀಡಿರುವ ಸಂಸ್ಥೆ ಈ ಬಾರಿ ವಿಶಿಷ್ಟ ಸೇವಾ ಯೋಜನೆಯೊಂದನ್ನು ಪೂರ್ಣಗೊಳಿಸಿ ಸಮಾಜಕ್ಕರ್ಪಿಸಿದೆ.ಕಡೇಶಿವಾಲಯ ದ ನೆತ್ತರ ಜೇರಾ ಎಂಬಲ್ಲಿನ ನಿವಾಸಿ ಶೇಖರ ಪೂಜಾರಿ ಜೇರಾ , ಕೂಲಿ ಕೆಲಸ ಮಾಡಿಕೊಂಡು ದಿನ‌ಸಾಗಿಸುತ್ತಿದ್ದು, ಪತ್ನಿ ಹಾಗು ಎರಡು ಪುಟ್ಟ ಮಕ್ಕಳ ಸಂಸಾರದ ಭಾರ ಇವರ ಮೇಲಿತ್ತು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬಕ್ಕೆ ಸಣ್ಣದಾದರೂ ಸ್ವಂತ ಸೂರೊಂದು ಬೇಕೆಂಬ ಕನಸು ಹಲವಾರು ವರ್ಷಗಳಿಂದ‌ ಮನದಾಳದಲ್ಲಿತ್ತು. ಈ ನಿಟ್ಟಿನಲ್ಲಿ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾದರೂ ತೀವ್ರ ಆರ್ಥಿಕ ಅಡಚಣೆಯಿಂದಾಗಿ ಮನೆ ನಿರ್ಮಾಣದ 20% ಕೆಲಸವನ್ನೂ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ, ವರ್ಷಗಳೇ ಉರುಳಿದರು ಕನಸು ಕೈಗೂಡದೇ ಕೈಚೆಲ್ಲಿ ಕುಳಿತಿತ್ತು ಈ ಬಡ ಕುಟುಂಬ.

ಈ ಸಂಧರ್ಭ ಈ ಕುಟುಂಬಕ್ಕೆ ಆಶಾ ಕಿರಣವಾಗಿ‌ ಕಂಡದ್ದು ಬಿರುವೆರ್ ಕಡೇಶಿವಾಲಯ. ಕನಸು‌ ಕೈಚೆಲ್ಲಿ ಕುಳಿತಿದ್ದ ಕುಟುಂಬಕ್ಕೆ‌ ಸಂಸ್ಥೆ ಸಹಕಾರ ಮಾಡಲು‌ ನಿರ್ಧರಿಸಿತು. 3 ವರ್ಷದ ಪಯಣದಲ್ಲಿ ನಾಲ್ಕನೇ ಮನೆ ನಿರ್ಮಾಣ ಯೋಜನೆಗೆ ಕೈ ಹಾಕಿತು.

ಸರ್ವ ಸದಸ್ಯರ ಸಹಕಾರದೊಂದಗೆ, ಲಾಕ್ ಡೌನ್ ಸಂಧರ್ಭದ ಸಮಯವನ್ನು ಸದುಪಯೋಗಿಸಿಕೊಂಡ ಸಂಸ್ಥೆ ಹಲವಾರು ಶ್ರಮದಾನಗಳನ್ನು ನಡೆಸಿ ಹಾಗೂ ಟ್ರಸ್ಟ್ ನ ಸದಸ್ಯರ ಮೂಲಕವೇ ಎಲ್ಲಾ ಕೆಲಸಗಳನ್ನು ಮಾಡಿಸಿ ಸುಸಜ್ಜಿತ ಮನೆಯನ್ನು ನಿರ್ಮಿಸಿಯೇ ಬಿಟ್ಟಿತು.

ಶ್ರಮದಾನಗಳನ್ನು ಹೊರತುಪಡುಸಿ ಸುಮಾರು 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ದಿ.23/08/2020 ರಂದು ಸರಳ ಸಮಾರಂಭವೊಂದನ್ನು ನಡೆಸಿ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಈ ಮನೆಯನ್ನು ಹಸ್ತಾಂತರಿಸಲಾಯಿತು.

ಈ ಸಂಧರ್ಭ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಉಧ್ಯಮಿಗಳು ಆದ ಶ್ರೀ. ಯಶವಂತ ಪೂಜಾರಿ ದೇರಾಜೆಗುತ್ತು. ಯುವ ನಾಯಕ, ಯುವ ಉಧ್ಯಮಿ ಶ್ರೀ. ಯತಿನ್ ಕುಮಾರ್ ಕಲ್ಲಡ್ಕ, ಹಾಗು ಶ್ರೀ ಕ್ಷೇತ್ರ ಬಾಕಿಲ ಇಲ್ಲಿನ ಪ್ರಮುಖರಾದ ಶ್ರೀ.ವಸಂತ ಪೂಜಾರಿ ಬಾಕಿಲಗುತ್ತು ಇವರು ಪಾಲ್ಗೊಂಡಿದ್ದರು.ಈ ಸಂಧರ್ಭ ವೇದಿಕೆಯಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ಶ್ರೀ. ಸಂಜೀವ ಪೂಜಾರಿ ದಾಸಕೋಡಿ, ಅಧ್ಯಕ್ಷರಾದ ಶ್ರೀ. ಲೋಕನಾಥ ಪೂಜಾರಿ ತಿಮರಾಜೆ ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ಯುವ ಬರಹಗಾರ ಶೈಲು ಬಿರ್ವ ಅಗತ್ತಾಡಿ, ನಿಶಿ ಪೂಜಾರಿ ಬಾಕಿಲ, ಯುವ ಉಧ್ಯಮಿ ಶ್ರೀ. ಚಿತ್ತರಂಜನ್ ಹೊಸಕಟ್ಟ, ಟ್ರಸ್ಟ್ ನ ಸಂಚಾಲಕರಾದ ಶ್ರೀ.ವಿದ್ಯಾಧರ ಪೂಜಾರಿ ಅಣ್ಣೆಂಗಳ, ಹಿರಿಯರಾದ ಶ್ರೀ. ಸಾಂತಪ್ಪ ಪೂಜಾರಿ ಪಚ್ಚಡಿಬೈಲು ಹಾಗು ಟ್ರಸ್ಟ್ ನ ಟ್ರಸ್ಟಿಗಳು, ಸದಸ್ಯರು, ಮಹಿಳಾ ಘಟಕ, ವಿದ್ಯಾರ್ಥಿ ಘಟಕದ ಸದಸ್ಯರು ಉಪಸ್ಥತರಿದ್ದರು.

ಈ ಯೋಜನೆಯ ಯಶಸ್ಸನಲ್ಲಿ ಕೈಜೋಡಿಸಿದ ಎಲ್ಲಾ ಬಂಧು ಮಿತ್ರರಿಗೂ ಟ್ರಸ್ಟ್ ನ ವತಿಯಿಂದ ಹೃದಯಾಂತರಾಳದ ಧನ್ಯವಾದಗಳು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »