TOP STORIES:

ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್


ನಿರಂತರ ಸಮಾಜಮುಖಿ ಕಾರ್ಯಗಳೊಂದಿಗೆ ಸಮುದಾಯ ಹಾಗು ಸಮಾಜದಲ್ಲಿರುವ ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್. ಮೂರು ವರ್ಷದ ಪಯಣದಲ್ಲಿ ಹಲವಾರು‌ ಸೇವಾ ಕಾರ್ಯವನ್ನು ನೀಡಿರುವ ಸಂಸ್ಥೆ ಈ ಬಾರಿ ವಿಶಿಷ್ಟ ಸೇವಾ ಯೋಜನೆಯೊಂದನ್ನು ಪೂರ್ಣಗೊಳಿಸಿ ಸಮಾಜಕ್ಕರ್ಪಿಸಿದೆ.ಕಡೇಶಿವಾಲಯ ದ ನೆತ್ತರ ಜೇರಾ ಎಂಬಲ್ಲಿನ ನಿವಾಸಿ ಶೇಖರ ಪೂಜಾರಿ ಜೇರಾ , ಕೂಲಿ ಕೆಲಸ ಮಾಡಿಕೊಂಡು ದಿನ‌ಸಾಗಿಸುತ್ತಿದ್ದು, ಪತ್ನಿ ಹಾಗು ಎರಡು ಪುಟ್ಟ ಮಕ್ಕಳ ಸಂಸಾರದ ಭಾರ ಇವರ ಮೇಲಿತ್ತು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬಕ್ಕೆ ಸಣ್ಣದಾದರೂ ಸ್ವಂತ ಸೂರೊಂದು ಬೇಕೆಂಬ ಕನಸು ಹಲವಾರು ವರ್ಷಗಳಿಂದ‌ ಮನದಾಳದಲ್ಲಿತ್ತು. ಈ ನಿಟ್ಟಿನಲ್ಲಿ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾದರೂ ತೀವ್ರ ಆರ್ಥಿಕ ಅಡಚಣೆಯಿಂದಾಗಿ ಮನೆ ನಿರ್ಮಾಣದ 20% ಕೆಲಸವನ್ನೂ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ, ವರ್ಷಗಳೇ ಉರುಳಿದರು ಕನಸು ಕೈಗೂಡದೇ ಕೈಚೆಲ್ಲಿ ಕುಳಿತಿತ್ತು ಈ ಬಡ ಕುಟುಂಬ.

ಈ ಸಂಧರ್ಭ ಈ ಕುಟುಂಬಕ್ಕೆ ಆಶಾ ಕಿರಣವಾಗಿ‌ ಕಂಡದ್ದು ಬಿರುವೆರ್ ಕಡೇಶಿವಾಲಯ. ಕನಸು‌ ಕೈಚೆಲ್ಲಿ ಕುಳಿತಿದ್ದ ಕುಟುಂಬಕ್ಕೆ‌ ಸಂಸ್ಥೆ ಸಹಕಾರ ಮಾಡಲು‌ ನಿರ್ಧರಿಸಿತು. 3 ವರ್ಷದ ಪಯಣದಲ್ಲಿ ನಾಲ್ಕನೇ ಮನೆ ನಿರ್ಮಾಣ ಯೋಜನೆಗೆ ಕೈ ಹಾಕಿತು.

ಸರ್ವ ಸದಸ್ಯರ ಸಹಕಾರದೊಂದಗೆ, ಲಾಕ್ ಡೌನ್ ಸಂಧರ್ಭದ ಸಮಯವನ್ನು ಸದುಪಯೋಗಿಸಿಕೊಂಡ ಸಂಸ್ಥೆ ಹಲವಾರು ಶ್ರಮದಾನಗಳನ್ನು ನಡೆಸಿ ಹಾಗೂ ಟ್ರಸ್ಟ್ ನ ಸದಸ್ಯರ ಮೂಲಕವೇ ಎಲ್ಲಾ ಕೆಲಸಗಳನ್ನು ಮಾಡಿಸಿ ಸುಸಜ್ಜಿತ ಮನೆಯನ್ನು ನಿರ್ಮಿಸಿಯೇ ಬಿಟ್ಟಿತು.

ಶ್ರಮದಾನಗಳನ್ನು ಹೊರತುಪಡುಸಿ ಸುಮಾರು 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ದಿ.23/08/2020 ರಂದು ಸರಳ ಸಮಾರಂಭವೊಂದನ್ನು ನಡೆಸಿ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಈ ಮನೆಯನ್ನು ಹಸ್ತಾಂತರಿಸಲಾಯಿತು.

ಈ ಸಂಧರ್ಭ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಉಧ್ಯಮಿಗಳು ಆದ ಶ್ರೀ. ಯಶವಂತ ಪೂಜಾರಿ ದೇರಾಜೆಗುತ್ತು. ಯುವ ನಾಯಕ, ಯುವ ಉಧ್ಯಮಿ ಶ್ರೀ. ಯತಿನ್ ಕುಮಾರ್ ಕಲ್ಲಡ್ಕ, ಹಾಗು ಶ್ರೀ ಕ್ಷೇತ್ರ ಬಾಕಿಲ ಇಲ್ಲಿನ ಪ್ರಮುಖರಾದ ಶ್ರೀ.ವಸಂತ ಪೂಜಾರಿ ಬಾಕಿಲಗುತ್ತು ಇವರು ಪಾಲ್ಗೊಂಡಿದ್ದರು.ಈ ಸಂಧರ್ಭ ವೇದಿಕೆಯಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ಶ್ರೀ. ಸಂಜೀವ ಪೂಜಾರಿ ದಾಸಕೋಡಿ, ಅಧ್ಯಕ್ಷರಾದ ಶ್ರೀ. ಲೋಕನಾಥ ಪೂಜಾರಿ ತಿಮರಾಜೆ ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ಯುವ ಬರಹಗಾರ ಶೈಲು ಬಿರ್ವ ಅಗತ್ತಾಡಿ, ನಿಶಿ ಪೂಜಾರಿ ಬಾಕಿಲ, ಯುವ ಉಧ್ಯಮಿ ಶ್ರೀ. ಚಿತ್ತರಂಜನ್ ಹೊಸಕಟ್ಟ, ಟ್ರಸ್ಟ್ ನ ಸಂಚಾಲಕರಾದ ಶ್ರೀ.ವಿದ್ಯಾಧರ ಪೂಜಾರಿ ಅಣ್ಣೆಂಗಳ, ಹಿರಿಯರಾದ ಶ್ರೀ. ಸಾಂತಪ್ಪ ಪೂಜಾರಿ ಪಚ್ಚಡಿಬೈಲು ಹಾಗು ಟ್ರಸ್ಟ್ ನ ಟ್ರಸ್ಟಿಗಳು, ಸದಸ್ಯರು, ಮಹಿಳಾ ಘಟಕ, ವಿದ್ಯಾರ್ಥಿ ಘಟಕದ ಸದಸ್ಯರು ಉಪಸ್ಥತರಿದ್ದರು.

ಈ ಯೋಜನೆಯ ಯಶಸ್ಸನಲ್ಲಿ ಕೈಜೋಡಿಸಿದ ಎಲ್ಲಾ ಬಂಧು ಮಿತ್ರರಿಗೂ ಟ್ರಸ್ಟ್ ನ ವತಿಯಿಂದ ಹೃದಯಾಂತರಾಳದ ಧನ್ಯವಾದಗಳು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »