TOP STORIES:

FOLLOW US

ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್


ನಿರಂತರ ಸಮಾಜಮುಖಿ ಕಾರ್ಯಗಳೊಂದಿಗೆ ಸಮುದಾಯ ಹಾಗು ಸಮಾಜದಲ್ಲಿರುವ ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್. ಮೂರು ವರ್ಷದ ಪಯಣದಲ್ಲಿ ಹಲವಾರು‌ ಸೇವಾ ಕಾರ್ಯವನ್ನು ನೀಡಿರುವ ಸಂಸ್ಥೆ ಈ ಬಾರಿ ವಿಶಿಷ್ಟ ಸೇವಾ ಯೋಜನೆಯೊಂದನ್ನು ಪೂರ್ಣಗೊಳಿಸಿ ಸಮಾಜಕ್ಕರ್ಪಿಸಿದೆ.ಕಡೇಶಿವಾಲಯ ದ ನೆತ್ತರ ಜೇರಾ ಎಂಬಲ್ಲಿನ ನಿವಾಸಿ ಶೇಖರ ಪೂಜಾರಿ ಜೇರಾ , ಕೂಲಿ ಕೆಲಸ ಮಾಡಿಕೊಂಡು ದಿನ‌ಸಾಗಿಸುತ್ತಿದ್ದು, ಪತ್ನಿ ಹಾಗು ಎರಡು ಪುಟ್ಟ ಮಕ್ಕಳ ಸಂಸಾರದ ಭಾರ ಇವರ ಮೇಲಿತ್ತು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬಕ್ಕೆ ಸಣ್ಣದಾದರೂ ಸ್ವಂತ ಸೂರೊಂದು ಬೇಕೆಂಬ ಕನಸು ಹಲವಾರು ವರ್ಷಗಳಿಂದ‌ ಮನದಾಳದಲ್ಲಿತ್ತು. ಈ ನಿಟ್ಟಿನಲ್ಲಿ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾದರೂ ತೀವ್ರ ಆರ್ಥಿಕ ಅಡಚಣೆಯಿಂದಾಗಿ ಮನೆ ನಿರ್ಮಾಣದ 20% ಕೆಲಸವನ್ನೂ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ, ವರ್ಷಗಳೇ ಉರುಳಿದರು ಕನಸು ಕೈಗೂಡದೇ ಕೈಚೆಲ್ಲಿ ಕುಳಿತಿತ್ತು ಈ ಬಡ ಕುಟುಂಬ.

ಈ ಸಂಧರ್ಭ ಈ ಕುಟುಂಬಕ್ಕೆ ಆಶಾ ಕಿರಣವಾಗಿ‌ ಕಂಡದ್ದು ಬಿರುವೆರ್ ಕಡೇಶಿವಾಲಯ. ಕನಸು‌ ಕೈಚೆಲ್ಲಿ ಕುಳಿತಿದ್ದ ಕುಟುಂಬಕ್ಕೆ‌ ಸಂಸ್ಥೆ ಸಹಕಾರ ಮಾಡಲು‌ ನಿರ್ಧರಿಸಿತು. 3 ವರ್ಷದ ಪಯಣದಲ್ಲಿ ನಾಲ್ಕನೇ ಮನೆ ನಿರ್ಮಾಣ ಯೋಜನೆಗೆ ಕೈ ಹಾಕಿತು.

ಸರ್ವ ಸದಸ್ಯರ ಸಹಕಾರದೊಂದಗೆ, ಲಾಕ್ ಡೌನ್ ಸಂಧರ್ಭದ ಸಮಯವನ್ನು ಸದುಪಯೋಗಿಸಿಕೊಂಡ ಸಂಸ್ಥೆ ಹಲವಾರು ಶ್ರಮದಾನಗಳನ್ನು ನಡೆಸಿ ಹಾಗೂ ಟ್ರಸ್ಟ್ ನ ಸದಸ್ಯರ ಮೂಲಕವೇ ಎಲ್ಲಾ ಕೆಲಸಗಳನ್ನು ಮಾಡಿಸಿ ಸುಸಜ್ಜಿತ ಮನೆಯನ್ನು ನಿರ್ಮಿಸಿಯೇ ಬಿಟ್ಟಿತು.

ಶ್ರಮದಾನಗಳನ್ನು ಹೊರತುಪಡುಸಿ ಸುಮಾರು 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ದಿ.23/08/2020 ರಂದು ಸರಳ ಸಮಾರಂಭವೊಂದನ್ನು ನಡೆಸಿ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಈ ಮನೆಯನ್ನು ಹಸ್ತಾಂತರಿಸಲಾಯಿತು.

ಈ ಸಂಧರ್ಭ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಉಧ್ಯಮಿಗಳು ಆದ ಶ್ರೀ. ಯಶವಂತ ಪೂಜಾರಿ ದೇರಾಜೆಗುತ್ತು. ಯುವ ನಾಯಕ, ಯುವ ಉಧ್ಯಮಿ ಶ್ರೀ. ಯತಿನ್ ಕುಮಾರ್ ಕಲ್ಲಡ್ಕ, ಹಾಗು ಶ್ರೀ ಕ್ಷೇತ್ರ ಬಾಕಿಲ ಇಲ್ಲಿನ ಪ್ರಮುಖರಾದ ಶ್ರೀ.ವಸಂತ ಪೂಜಾರಿ ಬಾಕಿಲಗುತ್ತು ಇವರು ಪಾಲ್ಗೊಂಡಿದ್ದರು.ಈ ಸಂಧರ್ಭ ವೇದಿಕೆಯಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ಶ್ರೀ. ಸಂಜೀವ ಪೂಜಾರಿ ದಾಸಕೋಡಿ, ಅಧ್ಯಕ್ಷರಾದ ಶ್ರೀ. ಲೋಕನಾಥ ಪೂಜಾರಿ ತಿಮರಾಜೆ ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ಯುವ ಬರಹಗಾರ ಶೈಲು ಬಿರ್ವ ಅಗತ್ತಾಡಿ, ನಿಶಿ ಪೂಜಾರಿ ಬಾಕಿಲ, ಯುವ ಉಧ್ಯಮಿ ಶ್ರೀ. ಚಿತ್ತರಂಜನ್ ಹೊಸಕಟ್ಟ, ಟ್ರಸ್ಟ್ ನ ಸಂಚಾಲಕರಾದ ಶ್ರೀ.ವಿದ್ಯಾಧರ ಪೂಜಾರಿ ಅಣ್ಣೆಂಗಳ, ಹಿರಿಯರಾದ ಶ್ರೀ. ಸಾಂತಪ್ಪ ಪೂಜಾರಿ ಪಚ್ಚಡಿಬೈಲು ಹಾಗು ಟ್ರಸ್ಟ್ ನ ಟ್ರಸ್ಟಿಗಳು, ಸದಸ್ಯರು, ಮಹಿಳಾ ಘಟಕ, ವಿದ್ಯಾರ್ಥಿ ಘಟಕದ ಸದಸ್ಯರು ಉಪಸ್ಥತರಿದ್ದರು.

ಈ ಯೋಜನೆಯ ಯಶಸ್ಸನಲ್ಲಿ ಕೈಜೋಡಿಸಿದ ಎಲ್ಲಾ ಬಂಧು ಮಿತ್ರರಿಗೂ ಟ್ರಸ್ಟ್ ನ ವತಿಯಿಂದ ಹೃದಯಾಂತರಾಳದ ಧನ್ಯವಾದಗಳು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »