TOP STORIES:

ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್


ನಿರಂತರ ಸಮಾಜಮುಖಿ ಕಾರ್ಯಗಳೊಂದಿಗೆ ಸಮುದಾಯ ಹಾಗು ಸಮಾಜದಲ್ಲಿರುವ ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್. ಮೂರು ವರ್ಷದ ಪಯಣದಲ್ಲಿ ಹಲವಾರು‌ ಸೇವಾ ಕಾರ್ಯವನ್ನು ನೀಡಿರುವ ಸಂಸ್ಥೆ ಈ ಬಾರಿ ವಿಶಿಷ್ಟ ಸೇವಾ ಯೋಜನೆಯೊಂದನ್ನು ಪೂರ್ಣಗೊಳಿಸಿ ಸಮಾಜಕ್ಕರ್ಪಿಸಿದೆ.ಕಡೇಶಿವಾಲಯ ದ ನೆತ್ತರ ಜೇರಾ ಎಂಬಲ್ಲಿನ ನಿವಾಸಿ ಶೇಖರ ಪೂಜಾರಿ ಜೇರಾ , ಕೂಲಿ ಕೆಲಸ ಮಾಡಿಕೊಂಡು ದಿನ‌ಸಾಗಿಸುತ್ತಿದ್ದು, ಪತ್ನಿ ಹಾಗು ಎರಡು ಪುಟ್ಟ ಮಕ್ಕಳ ಸಂಸಾರದ ಭಾರ ಇವರ ಮೇಲಿತ್ತು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬಕ್ಕೆ ಸಣ್ಣದಾದರೂ ಸ್ವಂತ ಸೂರೊಂದು ಬೇಕೆಂಬ ಕನಸು ಹಲವಾರು ವರ್ಷಗಳಿಂದ‌ ಮನದಾಳದಲ್ಲಿತ್ತು. ಈ ನಿಟ್ಟಿನಲ್ಲಿ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾದರೂ ತೀವ್ರ ಆರ್ಥಿಕ ಅಡಚಣೆಯಿಂದಾಗಿ ಮನೆ ನಿರ್ಮಾಣದ 20% ಕೆಲಸವನ್ನೂ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ, ವರ್ಷಗಳೇ ಉರುಳಿದರು ಕನಸು ಕೈಗೂಡದೇ ಕೈಚೆಲ್ಲಿ ಕುಳಿತಿತ್ತು ಈ ಬಡ ಕುಟುಂಬ.

ಈ ಸಂಧರ್ಭ ಈ ಕುಟುಂಬಕ್ಕೆ ಆಶಾ ಕಿರಣವಾಗಿ‌ ಕಂಡದ್ದು ಬಿರುವೆರ್ ಕಡೇಶಿವಾಲಯ. ಕನಸು‌ ಕೈಚೆಲ್ಲಿ ಕುಳಿತಿದ್ದ ಕುಟುಂಬಕ್ಕೆ‌ ಸಂಸ್ಥೆ ಸಹಕಾರ ಮಾಡಲು‌ ನಿರ್ಧರಿಸಿತು. 3 ವರ್ಷದ ಪಯಣದಲ್ಲಿ ನಾಲ್ಕನೇ ಮನೆ ನಿರ್ಮಾಣ ಯೋಜನೆಗೆ ಕೈ ಹಾಕಿತು.

ಸರ್ವ ಸದಸ್ಯರ ಸಹಕಾರದೊಂದಗೆ, ಲಾಕ್ ಡೌನ್ ಸಂಧರ್ಭದ ಸಮಯವನ್ನು ಸದುಪಯೋಗಿಸಿಕೊಂಡ ಸಂಸ್ಥೆ ಹಲವಾರು ಶ್ರಮದಾನಗಳನ್ನು ನಡೆಸಿ ಹಾಗೂ ಟ್ರಸ್ಟ್ ನ ಸದಸ್ಯರ ಮೂಲಕವೇ ಎಲ್ಲಾ ಕೆಲಸಗಳನ್ನು ಮಾಡಿಸಿ ಸುಸಜ್ಜಿತ ಮನೆಯನ್ನು ನಿರ್ಮಿಸಿಯೇ ಬಿಟ್ಟಿತು.

ಶ್ರಮದಾನಗಳನ್ನು ಹೊರತುಪಡುಸಿ ಸುಮಾರು 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ದಿ.23/08/2020 ರಂದು ಸರಳ ಸಮಾರಂಭವೊಂದನ್ನು ನಡೆಸಿ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಈ ಮನೆಯನ್ನು ಹಸ್ತಾಂತರಿಸಲಾಯಿತು.

ಈ ಸಂಧರ್ಭ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಉಧ್ಯಮಿಗಳು ಆದ ಶ್ರೀ. ಯಶವಂತ ಪೂಜಾರಿ ದೇರಾಜೆಗುತ್ತು. ಯುವ ನಾಯಕ, ಯುವ ಉಧ್ಯಮಿ ಶ್ರೀ. ಯತಿನ್ ಕುಮಾರ್ ಕಲ್ಲಡ್ಕ, ಹಾಗು ಶ್ರೀ ಕ್ಷೇತ್ರ ಬಾಕಿಲ ಇಲ್ಲಿನ ಪ್ರಮುಖರಾದ ಶ್ರೀ.ವಸಂತ ಪೂಜಾರಿ ಬಾಕಿಲಗುತ್ತು ಇವರು ಪಾಲ್ಗೊಂಡಿದ್ದರು.ಈ ಸಂಧರ್ಭ ವೇದಿಕೆಯಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ಶ್ರೀ. ಸಂಜೀವ ಪೂಜಾರಿ ದಾಸಕೋಡಿ, ಅಧ್ಯಕ್ಷರಾದ ಶ್ರೀ. ಲೋಕನಾಥ ಪೂಜಾರಿ ತಿಮರಾಜೆ ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ಯುವ ಬರಹಗಾರ ಶೈಲು ಬಿರ್ವ ಅಗತ್ತಾಡಿ, ನಿಶಿ ಪೂಜಾರಿ ಬಾಕಿಲ, ಯುವ ಉಧ್ಯಮಿ ಶ್ರೀ. ಚಿತ್ತರಂಜನ್ ಹೊಸಕಟ್ಟ, ಟ್ರಸ್ಟ್ ನ ಸಂಚಾಲಕರಾದ ಶ್ರೀ.ವಿದ್ಯಾಧರ ಪೂಜಾರಿ ಅಣ್ಣೆಂಗಳ, ಹಿರಿಯರಾದ ಶ್ರೀ. ಸಾಂತಪ್ಪ ಪೂಜಾರಿ ಪಚ್ಚಡಿಬೈಲು ಹಾಗು ಟ್ರಸ್ಟ್ ನ ಟ್ರಸ್ಟಿಗಳು, ಸದಸ್ಯರು, ಮಹಿಳಾ ಘಟಕ, ವಿದ್ಯಾರ್ಥಿ ಘಟಕದ ಸದಸ್ಯರು ಉಪಸ್ಥತರಿದ್ದರು.

ಈ ಯೋಜನೆಯ ಯಶಸ್ಸನಲ್ಲಿ ಕೈಜೋಡಿಸಿದ ಎಲ್ಲಾ ಬಂಧು ಮಿತ್ರರಿಗೂ ಟ್ರಸ್ಟ್ ನ ವತಿಯಿಂದ ಹೃದಯಾಂತರಾಳದ ಧನ್ಯವಾದಗಳು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »