TOP STORIES:

FOLLOW US

ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್


ನಿರಂತರ ಸಮಾಜಮುಖಿ ಕಾರ್ಯಗಳೊಂದಿಗೆ ಸಮುದಾಯ ಹಾಗು ಸಮಾಜದಲ್ಲಿರುವ ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್. ಮೂರು ವರ್ಷದ ಪಯಣದಲ್ಲಿ ಹಲವಾರು‌ ಸೇವಾ ಕಾರ್ಯವನ್ನು ನೀಡಿರುವ ಸಂಸ್ಥೆ ಈ ಬಾರಿ ವಿಶಿಷ್ಟ ಸೇವಾ ಯೋಜನೆಯೊಂದನ್ನು ಪೂರ್ಣಗೊಳಿಸಿ ಸಮಾಜಕ್ಕರ್ಪಿಸಿದೆ.ಕಡೇಶಿವಾಲಯ ದ ನೆತ್ತರ ಜೇರಾ ಎಂಬಲ್ಲಿನ ನಿವಾಸಿ ಶೇಖರ ಪೂಜಾರಿ ಜೇರಾ , ಕೂಲಿ ಕೆಲಸ ಮಾಡಿಕೊಂಡು ದಿನ‌ಸಾಗಿಸುತ್ತಿದ್ದು, ಪತ್ನಿ ಹಾಗು ಎರಡು ಪುಟ್ಟ ಮಕ್ಕಳ ಸಂಸಾರದ ಭಾರ ಇವರ ಮೇಲಿತ್ತು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬಕ್ಕೆ ಸಣ್ಣದಾದರೂ ಸ್ವಂತ ಸೂರೊಂದು ಬೇಕೆಂಬ ಕನಸು ಹಲವಾರು ವರ್ಷಗಳಿಂದ‌ ಮನದಾಳದಲ್ಲಿತ್ತು. ಈ ನಿಟ್ಟಿನಲ್ಲಿ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾದರೂ ತೀವ್ರ ಆರ್ಥಿಕ ಅಡಚಣೆಯಿಂದಾಗಿ ಮನೆ ನಿರ್ಮಾಣದ 20% ಕೆಲಸವನ್ನೂ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ, ವರ್ಷಗಳೇ ಉರುಳಿದರು ಕನಸು ಕೈಗೂಡದೇ ಕೈಚೆಲ್ಲಿ ಕುಳಿತಿತ್ತು ಈ ಬಡ ಕುಟುಂಬ.

ಈ ಸಂಧರ್ಭ ಈ ಕುಟುಂಬಕ್ಕೆ ಆಶಾ ಕಿರಣವಾಗಿ‌ ಕಂಡದ್ದು ಬಿರುವೆರ್ ಕಡೇಶಿವಾಲಯ. ಕನಸು‌ ಕೈಚೆಲ್ಲಿ ಕುಳಿತಿದ್ದ ಕುಟುಂಬಕ್ಕೆ‌ ಸಂಸ್ಥೆ ಸಹಕಾರ ಮಾಡಲು‌ ನಿರ್ಧರಿಸಿತು. 3 ವರ್ಷದ ಪಯಣದಲ್ಲಿ ನಾಲ್ಕನೇ ಮನೆ ನಿರ್ಮಾಣ ಯೋಜನೆಗೆ ಕೈ ಹಾಕಿತು.

ಸರ್ವ ಸದಸ್ಯರ ಸಹಕಾರದೊಂದಗೆ, ಲಾಕ್ ಡೌನ್ ಸಂಧರ್ಭದ ಸಮಯವನ್ನು ಸದುಪಯೋಗಿಸಿಕೊಂಡ ಸಂಸ್ಥೆ ಹಲವಾರು ಶ್ರಮದಾನಗಳನ್ನು ನಡೆಸಿ ಹಾಗೂ ಟ್ರಸ್ಟ್ ನ ಸದಸ್ಯರ ಮೂಲಕವೇ ಎಲ್ಲಾ ಕೆಲಸಗಳನ್ನು ಮಾಡಿಸಿ ಸುಸಜ್ಜಿತ ಮನೆಯನ್ನು ನಿರ್ಮಿಸಿಯೇ ಬಿಟ್ಟಿತು.

ಶ್ರಮದಾನಗಳನ್ನು ಹೊರತುಪಡುಸಿ ಸುಮಾರು 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ದಿ.23/08/2020 ರಂದು ಸರಳ ಸಮಾರಂಭವೊಂದನ್ನು ನಡೆಸಿ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಈ ಮನೆಯನ್ನು ಹಸ್ತಾಂತರಿಸಲಾಯಿತು.

ಈ ಸಂಧರ್ಭ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಉಧ್ಯಮಿಗಳು ಆದ ಶ್ರೀ. ಯಶವಂತ ಪೂಜಾರಿ ದೇರಾಜೆಗುತ್ತು. ಯುವ ನಾಯಕ, ಯುವ ಉಧ್ಯಮಿ ಶ್ರೀ. ಯತಿನ್ ಕುಮಾರ್ ಕಲ್ಲಡ್ಕ, ಹಾಗು ಶ್ರೀ ಕ್ಷೇತ್ರ ಬಾಕಿಲ ಇಲ್ಲಿನ ಪ್ರಮುಖರಾದ ಶ್ರೀ.ವಸಂತ ಪೂಜಾರಿ ಬಾಕಿಲಗುತ್ತು ಇವರು ಪಾಲ್ಗೊಂಡಿದ್ದರು.ಈ ಸಂಧರ್ಭ ವೇದಿಕೆಯಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ಶ್ರೀ. ಸಂಜೀವ ಪೂಜಾರಿ ದಾಸಕೋಡಿ, ಅಧ್ಯಕ್ಷರಾದ ಶ್ರೀ. ಲೋಕನಾಥ ಪೂಜಾರಿ ತಿಮರಾಜೆ ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ಯುವ ಬರಹಗಾರ ಶೈಲು ಬಿರ್ವ ಅಗತ್ತಾಡಿ, ನಿಶಿ ಪೂಜಾರಿ ಬಾಕಿಲ, ಯುವ ಉಧ್ಯಮಿ ಶ್ರೀ. ಚಿತ್ತರಂಜನ್ ಹೊಸಕಟ್ಟ, ಟ್ರಸ್ಟ್ ನ ಸಂಚಾಲಕರಾದ ಶ್ರೀ.ವಿದ್ಯಾಧರ ಪೂಜಾರಿ ಅಣ್ಣೆಂಗಳ, ಹಿರಿಯರಾದ ಶ್ರೀ. ಸಾಂತಪ್ಪ ಪೂಜಾರಿ ಪಚ್ಚಡಿಬೈಲು ಹಾಗು ಟ್ರಸ್ಟ್ ನ ಟ್ರಸ್ಟಿಗಳು, ಸದಸ್ಯರು, ಮಹಿಳಾ ಘಟಕ, ವಿದ್ಯಾರ್ಥಿ ಘಟಕದ ಸದಸ್ಯರು ಉಪಸ್ಥತರಿದ್ದರು.

ಈ ಯೋಜನೆಯ ಯಶಸ್ಸನಲ್ಲಿ ಕೈಜೋಡಿಸಿದ ಎಲ್ಲಾ ಬಂಧು ಮಿತ್ರರಿಗೂ ಟ್ರಸ್ಟ್ ನ ವತಿಯಿಂದ ಹೃದಯಾಂತರಾಳದ ಧನ್ಯವಾದಗಳು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »