TOP STORIES:

ದೆಹಲಿಯಲ್ಲಿ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದಾಗ


ನನಗೆ ದೆಹಲಿಗೆ ಹೋಗುವ ಅವಕಾಶ ಸಿಕ್ಕಿತು 2006 ರಲ್ಲಿ. ಆಗ ನಾನು ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸದಸ್ಯನಾಗಿದ್ದೆ. ಅಮೇರಿಕದ ಸಾಂಸ್ಕೃತಿಕ ಸಂಘದವರಿಗೆ ನಮ್ಮ ದೈವಾರಾಧನೆ ಕುರಿತು ತಿಳಿಸುವ ಜವಾಬ್ದಾರಿಯಿತ್ತು. ಅದಕ್ಕಾಗಿ ತುಳುನಾಡಿನಕೋಲ ಹೇಗಿರುತ್ತದೆ ಎನ್ನುವುದನ್ನು ಮನವರಿಕೆ ಮಾಡಿಕೊಡುವ ಉದ್ದೇಶ. ಅದಕ್ಕಾಗಿ ತುಳು ಸಾಹಿತ್ಯ ಅಕಾಡೆಮಿಯಿಂದ ತಂಡವನ್ನುದೆಹಲಿಗೆ ಒಯ್ಯುವ ಹೊಣೆ ನನಗೆ. ಸರಿ ನನ್ನೊಂದಿಗೆ ನಾಲ್ಕು ಜನರ ತಂಡವಿತ್ತು. ನಾವು ದೆಹಲಿ ತಲುಪಿ ಕರ್ನಾಟಕ ಸಂಘದಲ್ಲಿಉಳಿದುಕೊಂಡಿದ್ದೆ.

ಒಂದು ದಿನ ಮುಂಜಾನೆ ನಾನು ಕುತೂಹಲಕ್ಕಾಗಿ ದೆಹಲಿಯಲ್ಲಿದ್ದ ಮತ್ತು ಆಗ ರಾಜ್ಯ ಸಭಾ ಸದಸ್ಯರಾಗಿದ್ದ ಬಿ.ಜನಾರ್ಧನಪೂಜಾರಿಯವರಿಗೆ ಫೋನ್ ಮಾಡಿದೆ. ಆಕಡೆಯಿಂದ ದೂರವಾಣಿ ಕರೆ ತೆಗೆದುಕೊಂಡರು. ‘ಸಾರ್ ನಾನು ಚಿದಂಬರಎಂದೆ. ‘ ಹೋಎಲ್ಲಿದ್ದೀರಿಪ್ರಶ್ನೆ ಬಂತು. ‘ನಾನು ದೆಹಲಿಗೆ ಬಂದೆಎಂದೆ. ‘ಯಾವಾಗ ಬಂದಿರಿಎಂದರು. ‘ ಸಾರ್ ಮೂರು ದಿನವಾಯ್ತುಎಂದೆ. ‘ಛೇ ಛೇ ಮೂರು ದಿನವಾದರೂ ಯಾಕೆ ನನಗೆ ಹೇಳಲಿಲ್ಲ ?, ಯಾವಾಗ ಹೋಗುತ್ತೀರಿ ?’ ಮತ್ತೆ ಪ್ರಶ್ನೆ. ‘ಇಲ್ಲ ಸಾರ್ ನಾಳೆಹೋಗುತ್ತೀನಿ’. ‘ ಹಾಗಾದರೆ ಈಗಲೇ ಬನ್ನಿ ನನ್ನ ಮನೆಗೆಎಂದವರೇ ಮನೆಯ ವಿಳಾಸ ಹೇಳಿದರು.‘ ಏನಾದರೂ ಸಮಸ್ಯೆಯಾದರೆಫೋನ್ ಮಾಡಿ, ಕಾಯುತ್ತೇನೆಎಂದು ಫೋನ್ ಇಟ್ಟರು.

ಈಗ ನನಗೆ ಸಮಸ್ಯೆ, ಅಲ್ಲಿಗೆ ಹೋಗುವುದು ಹೇಗೆಂದು. ಸರಿ ನಾನು ನನ್ನ ಗೆಳೆಯ ಡಾ. ಪುರುಷೋತ್ತಮ ಬಿಳಿಮಲೆ (ದೆಹಲಿಯಕರ್ನಾಟಕ ಸಂಘದ ಅಧ್ಯಕ್ಷ)ಯನ್ನು ಕೇಳಿ ವಿಳಾಸ ತಿಳಿಸಿದೆ. ಅವರು ಹೇಳಿದಂತೆ ಟ್ಯಾಕ್ಸಿ ಮಾಡಿಕೊಳ್ಳುವುದು ಅನಿವಾರ್ಯವಾಗಿತ್ತು. ಅವರಿಗೇ ಹೇಳಿದೆ ಟ್ಯಾಕ್ಸಿ ಮಾಡಿಕೊಡಿ ಯಾಕೆಂದರೆ ನಾನು ಕೇಳಿದರೆ ಬಾಡಿಗೆ ದುಬಾರಿ ಹೇಳಬಹುದೆಂದೆ. ಅವರೇ ತಕ್ಷಣ ಒಂದುಟ್ಯಾಕ್ಸಿಗೆ ಫೋನ್ ಮಾಡಿ ಬರಲು ಹೇಳಿದರು. ಟ್ಯಾಕ್ಸಿ ಬಂತು.

ನಾನು ಬಿ.ಜನಾರ್ಧನ ಪೂಜಾರಿ ಮನೆಗೆ ಹೋಗಬೇಕು ಪೂಜಾರಿಜೀ ಯೇ ಬಹುತ್ ಅಚ್ಛಾ ಆಧ್ಮಿ, ವೋ ತೋತೋ ಸಬ್ಕೋಮಾಲೂಮ್ ಹೈಎಂದ ಟ್ಯಾಕ್ಸಿ ಡ್ರೈವರ್. ನನಗೆ ಅಚ್ಚರಿ. ಜನಾರ್ಧನ ಪೂಜಾರಿ ಮನುಷ್ಯನಿಗೂ ಪರಿಚಯವಲ್ಲಾ ಎಂದು.

ಟ್ಯಾಕ್ಸಿ ಹೊರಟಿತು ಪೂಜಾರಿ ಮನೆಗೆ. ಟ್ಯಾಕ್ಸಿ ಡ್ರೈವರ್ ಗೂ ಯಾಕೋ ಸಂಶವಾಯಿತು. ಅಲ್ಲಿದ್ದವರನ್ನು ವಿಚಾರಿಸಿದ. ಆತ ಬಂದಜಾಗ ಸರಿಯಾಗಿತ್ತು. ಮತ್ತೆ ಆತ ನನಗೆ ಹೇಳಿದ ನಾನು ತುಂಬಾ ದಿನವಾಯ್ತು ಬಂದು. ಅದಕಾಗಿಯೇ ಅಲ್ಲೇ ಇದ್ದಾರೋ ಬದಲಾಗಿಬೇರೆ ಎಲ್ಲಿಗಾದರೂ ಹೋಗಿದ್ದಾರೋ ಎಂದು ಕೇಳಿದೆ, ನಿಮಗೆ ತೊಂದರೆಯಾಗಲಿಲ್ಲ ತಾನೇ ಕೇಳಿದ. ನಾನು ಇಲ್ಲ ಎಂದೆ. ಟ್ಯಾಕ್ಸಿಯನ್ನು ಸರಿಯಾಗಿ ಪೂಜಾರಿಯವರಿದ್ದ ಮನೆಯ ಮುಂದೆ ನಿಲ್ಲಿಸಿ ಗೇಟ್ ತೆಗೆದು ಹೋಗಿ ಎಂದ.

ನಾನು ಅಳುಕುತ್ತಲೇ ನಿಧಾನವಾಗಿ ಗೇಟ್ ತೆಗೆದುಕೊಂಡು ಹೋದೆ. ಅದು ದೊಡ್ಡ ಮನೆ. ನಾಲ್ಕು ಸುತ್ತಲೂ ಕಾಂಪೌಂಡ್. ವಿಶಾಲವಾದ ಜಾಗದಲ್ಲಿತ್ತು ಮನೆ. ಹೊರಗಿನಿಂದ ಗಲಾಟೆ, ಜನಜಂಗುಳಿಯಿಲ್ಲ, ಪ್ರಶಾಂತವಾದ ವಾತಾವರಣ. ಸಮಯ ಬೆಳಿಗ್ಗೆ 11 ಗಂಟೆಯಾಗಿತ್ತು. ನಾನು ಮನೆಯ ಕಾಲಿಂಗ್ ಬೆಲ್ ಒತ್ತಿದೆ. ಸ್ವಲ್ಪ ಸಮಯದಲ್ಲಿ ಬಾಗಿಲು ತೆರೆದುಕೊಂಡಿತು. ‘ಕ್ಯಾ ಚಾಯಿಯೇಪ್ರಶ್ನೆಓರ್ವ ಅಪರಿಚಿತ ವ್ಯಕ್ತಿಯಿಂದ. ನಾನು ಬಿ.ಜನಾರ್ಧನ ಪೂಜಾರಿ ಕೋ ಮಿಲ್ನೇಕೇಲಿಯೇ ಆಯೇಎಂದೆ. ತಕ್ಷಣ ಒಳಗೆ ಬರಲುಹೇಳಿದರು. ಅವರು ಸ್ನಾನ ಮಾಡುತ್ತಿದ್ದಾರೆ, ಕೂತುಕೊಳ್ಳಿ ಎಂದು ಒಳಗೆ ಹೋದರು. ಸ್ವಲ್ಪ ಹೊತ್ತಲ್ಲಿ ಬಂದುಚಹಾ, ಕಾಫಿ ಏನುತೆಗೆದುಕೊಳ್ಳುತ್ತೀರಿಎಂದರು. ಬೇಡಾ ಬಿಡಿ ಎಂದೆ, ಆದರೂ ಒತ್ತಾಯ ಮಾಡಿದಾಗ ಚಹಾ ಎಂದೆ. ಸ್ವಲ್ಪಹೊತ್ತಲ್ಲಿ ಚಹಾ ಬಂತು. ಕುಡಿದು ಅಲ್ಲಿದ್ದ ಪೇಪರ್ ನೋಡುತ್ತಾ ಕುಳಿತೆ.

ಸ್ವಲ್ಪ ಸಮಯದ ಬಳಿಕ ಬಿ.ಜನಾರ್ಧನ ಪೂಜಾರಿ ಬಂದರು . ಶುದ್ಧ ಬಿಳಿ ಪ್ಯಾಂಟ್, ಬಿಳಿ ಅಂಗಿ ಧರಿಸಿದ್ದರು. ಕನ್ನಡವನ್ನುಬಟ್ಟೆಯಿಂದ ಉಜ್ಜಿಕೊಂಡು ನಗುತ್ತಲೇ ಬಂದರು. ‘ದಾನೆಗೇ ಬರಿಯೆರೆ ಕಷ್ಟ ಆಂಡ್’ (ಏನಂತೆ ಬರಲು ಕಷ್ಟವಾಯಿತೇ). ನಾನುಇಲ್ಲವೆಂದೆ. ಆಮೇಲೆ ಪೂಜಾರಿಯವರಿಂದ ಚಹಾ ಕುಡಿಯಲು ಒತ್ತಾಯ. ನಾನು ಕುಡಿದೆ ಎಂದರು ಒಪ್ಪಲಿಲ್ಲ ಮತ್ತೆ ಕುಡಿಯಿರಿಎಂದು ಚಹಾ ತರಿಸಿದರು.

ಹಾಗೆ ಮಾತಾಡುತ್ತಾ ಕುಳಿತೆವು. ಸ್ಥಳೀಯ ರಾಜಕೀಯದ ಕುರಿತೇ ಮಾತು. ನಾವಿಬ್ಬರೇ ಕುಳಿತುಕೊಂಡಿದ್ದೆವು, ಅಲ್ಲಿಗೆ ಬೇರೆ ಯಾರೂಬರಲಿಲ್ಲ. ಸದ್ದುಗದ್ದಲವಿಲ್ಲದೆ ಮಾತನಾಡಿದೆವು. ಪೂಜಾರಿ ಮಕ್ಕಳ ಕುರಿತು ವಿಚಾರಿಸಿದರು. ಯಾಕೆ ಬಂದದ್ದು ಪ್ರಶ್ನೆಗೆ ವಿವರಿಸಿದೆ. ಸುಮಾರು ಒಂದು ಗಂಟೆ ಕಾಲ ಮಾತನಾಡಿದೆವು. ನಾನು ಹೊರಟು ನಿಂತೆ. ಪೂಜಾರಿಯವರು ಊಟ ಮಾಡಿಕೊಂಡು ಹೋಗಲುಒತ್ತಾಯಿಸಿದರು. ನಾನು ಬೇಡವೆಂದು ಹೇಳಿ ಮತ್ತೆ ಅಮೇರಿಕಾ ತಂಡವನ್ನು ಭೇಟಿ ಮಾಡುವ ನೆಪಕೊಟ್ಟು ಹೊರಡಲು ಬಯಸಿದೆ.

ಸರಿ ಪೂಜಾರಿಯವರು ಸಮ್ಮತಿಸಿದರು. ನಾನಿನ್ನು ಬರ್ತ್ತೇನೆ ಎಂದು ಕೈಮುಗಿದೆ. ‘ಇಲ್ಲಾ ಇಲ್ಲಾ ಬನ್ನಿಎನ್ನುತ್ತಾ ನನ್ನೊಂದಿಗೆ ಗೇಟ್ವರೆಗೂ ಬರಲು ಸಜ್ಜಾದರು. ನಾನುಬೇಡ ಸಾರ್ ನಾನು ಹೊಗ್ತೇನೆಎಂದರು ಕೇಳಲಿಲ್ಲ. ‘ನೀವು ನನ್ನ ಗೆಸ್ಟ್ ಬನ್ನಿಎನ್ನುತ್ತಾನಡೆದುಕೊಂಡು ಬಂದು ಅವರೇ ಗೇಟ್ ತೆಗೆದು ಟ್ಯಾಕ್ಸಿ ತನಕ ಬಂದು ನನ್ನ ಟ್ಯಾಕ್ಸಿ ಅಲ್ಲಿಂದ ಹೊರಟ ಮೇಲೆ ಗೇಟ್ ಹಾಕಿಕೊಂಡರು.

ಒಬ್ಬ ಕೇಂದ್ರ ಸಚಿವರಾಗಿದ್ದವರು ಹೇಗೆ ನಡೆದುಕೊಂಡರು ಎನ್ನುವುದನ್ನು ತಿಳಿಸಲು ಇಷ್ಟೆಲ್ಲಾ ಹೇಳಬೇಕಾಯಿತು. ಪೂಜಾರಿಯವರುಮುಂಗೋಪಿ, ಸಿಡುಕಿನವರು ಎನ್ನುವ ಅಭಿಪ್ರಾಯ ಎಷ್ಟು ಸಹಜ ಮತ್ತು ಎಷ್ಟು ಸುಳ್ಳು ಎನ್ನುವುದೇ ನನಗೆ ಅರ್ಥವಾಗಲಿಲ್ಲ. ಸಿಡುಕಿನ ವ್ಯಕ್ತಿಯಲ್ಲೂ ಎಂಥ ಗುಣಗಳಿರುತ್ತವೆ, ಎಷ್ಟು ಮನುಷ್ಯತ್ವ ಇರುತ್ತದೆ ಅಂದುಕೊಂಡೆ. ನನ್ನನ್ನು ಮನೆಯಿಂದ ಬೀಳ್ಕೊಟ್ಟಾಗನನ್ನೊಂದಿಗೆ ಬಂದ ಬಿ.ಜನಾರ್ಧನ ಪೂಜಾರಿಯವರಲ್ಲೂ ಇಷ್ಟೊಂದು ಸೌಜನ್ಯವಿದೆಯಲ್ಲ ಎಂದುಕೊಂಡೆ.

ಚಿದಂಬರ ಬೈಕಂಪಾಡಿ


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »