TOP STORIES:

FOLLOW US

ದೆಹಲಿಯಲ್ಲಿ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದಾಗ


ನನಗೆ ದೆಹಲಿಗೆ ಹೋಗುವ ಅವಕಾಶ ಸಿಕ್ಕಿತು 2006 ರಲ್ಲಿ. ಆಗ ನಾನು ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸದಸ್ಯನಾಗಿದ್ದೆ. ಅಮೇರಿಕದ ಸಾಂಸ್ಕೃತಿಕ ಸಂಘದವರಿಗೆ ನಮ್ಮ ದೈವಾರಾಧನೆ ಕುರಿತು ತಿಳಿಸುವ ಜವಾಬ್ದಾರಿಯಿತ್ತು. ಅದಕ್ಕಾಗಿ ತುಳುನಾಡಿನಕೋಲ ಹೇಗಿರುತ್ತದೆ ಎನ್ನುವುದನ್ನು ಮನವರಿಕೆ ಮಾಡಿಕೊಡುವ ಉದ್ದೇಶ. ಅದಕ್ಕಾಗಿ ತುಳು ಸಾಹಿತ್ಯ ಅಕಾಡೆಮಿಯಿಂದ ತಂಡವನ್ನುದೆಹಲಿಗೆ ಒಯ್ಯುವ ಹೊಣೆ ನನಗೆ. ಸರಿ ನನ್ನೊಂದಿಗೆ ನಾಲ್ಕು ಜನರ ತಂಡವಿತ್ತು. ನಾವು ದೆಹಲಿ ತಲುಪಿ ಕರ್ನಾಟಕ ಸಂಘದಲ್ಲಿಉಳಿದುಕೊಂಡಿದ್ದೆ.

ಒಂದು ದಿನ ಮುಂಜಾನೆ ನಾನು ಕುತೂಹಲಕ್ಕಾಗಿ ದೆಹಲಿಯಲ್ಲಿದ್ದ ಮತ್ತು ಆಗ ರಾಜ್ಯ ಸಭಾ ಸದಸ್ಯರಾಗಿದ್ದ ಬಿ.ಜನಾರ್ಧನಪೂಜಾರಿಯವರಿಗೆ ಫೋನ್ ಮಾಡಿದೆ. ಆಕಡೆಯಿಂದ ದೂರವಾಣಿ ಕರೆ ತೆಗೆದುಕೊಂಡರು. ‘ಸಾರ್ ನಾನು ಚಿದಂಬರಎಂದೆ. ‘ ಹೋಎಲ್ಲಿದ್ದೀರಿಪ್ರಶ್ನೆ ಬಂತು. ‘ನಾನು ದೆಹಲಿಗೆ ಬಂದೆಎಂದೆ. ‘ಯಾವಾಗ ಬಂದಿರಿಎಂದರು. ‘ ಸಾರ್ ಮೂರು ದಿನವಾಯ್ತುಎಂದೆ. ‘ಛೇ ಛೇ ಮೂರು ದಿನವಾದರೂ ಯಾಕೆ ನನಗೆ ಹೇಳಲಿಲ್ಲ ?, ಯಾವಾಗ ಹೋಗುತ್ತೀರಿ ?’ ಮತ್ತೆ ಪ್ರಶ್ನೆ. ‘ಇಲ್ಲ ಸಾರ್ ನಾಳೆಹೋಗುತ್ತೀನಿ’. ‘ ಹಾಗಾದರೆ ಈಗಲೇ ಬನ್ನಿ ನನ್ನ ಮನೆಗೆಎಂದವರೇ ಮನೆಯ ವಿಳಾಸ ಹೇಳಿದರು.‘ ಏನಾದರೂ ಸಮಸ್ಯೆಯಾದರೆಫೋನ್ ಮಾಡಿ, ಕಾಯುತ್ತೇನೆಎಂದು ಫೋನ್ ಇಟ್ಟರು.

ಈಗ ನನಗೆ ಸಮಸ್ಯೆ, ಅಲ್ಲಿಗೆ ಹೋಗುವುದು ಹೇಗೆಂದು. ಸರಿ ನಾನು ನನ್ನ ಗೆಳೆಯ ಡಾ. ಪುರುಷೋತ್ತಮ ಬಿಳಿಮಲೆ (ದೆಹಲಿಯಕರ್ನಾಟಕ ಸಂಘದ ಅಧ್ಯಕ್ಷ)ಯನ್ನು ಕೇಳಿ ವಿಳಾಸ ತಿಳಿಸಿದೆ. ಅವರು ಹೇಳಿದಂತೆ ಟ್ಯಾಕ್ಸಿ ಮಾಡಿಕೊಳ್ಳುವುದು ಅನಿವಾರ್ಯವಾಗಿತ್ತು. ಅವರಿಗೇ ಹೇಳಿದೆ ಟ್ಯಾಕ್ಸಿ ಮಾಡಿಕೊಡಿ ಯಾಕೆಂದರೆ ನಾನು ಕೇಳಿದರೆ ಬಾಡಿಗೆ ದುಬಾರಿ ಹೇಳಬಹುದೆಂದೆ. ಅವರೇ ತಕ್ಷಣ ಒಂದುಟ್ಯಾಕ್ಸಿಗೆ ಫೋನ್ ಮಾಡಿ ಬರಲು ಹೇಳಿದರು. ಟ್ಯಾಕ್ಸಿ ಬಂತು.

ನಾನು ಬಿ.ಜನಾರ್ಧನ ಪೂಜಾರಿ ಮನೆಗೆ ಹೋಗಬೇಕು ಪೂಜಾರಿಜೀ ಯೇ ಬಹುತ್ ಅಚ್ಛಾ ಆಧ್ಮಿ, ವೋ ತೋತೋ ಸಬ್ಕೋಮಾಲೂಮ್ ಹೈಎಂದ ಟ್ಯಾಕ್ಸಿ ಡ್ರೈವರ್. ನನಗೆ ಅಚ್ಚರಿ. ಜನಾರ್ಧನ ಪೂಜಾರಿ ಮನುಷ್ಯನಿಗೂ ಪರಿಚಯವಲ್ಲಾ ಎಂದು.

ಟ್ಯಾಕ್ಸಿ ಹೊರಟಿತು ಪೂಜಾರಿ ಮನೆಗೆ. ಟ್ಯಾಕ್ಸಿ ಡ್ರೈವರ್ ಗೂ ಯಾಕೋ ಸಂಶವಾಯಿತು. ಅಲ್ಲಿದ್ದವರನ್ನು ವಿಚಾರಿಸಿದ. ಆತ ಬಂದಜಾಗ ಸರಿಯಾಗಿತ್ತು. ಮತ್ತೆ ಆತ ನನಗೆ ಹೇಳಿದ ನಾನು ತುಂಬಾ ದಿನವಾಯ್ತು ಬಂದು. ಅದಕಾಗಿಯೇ ಅಲ್ಲೇ ಇದ್ದಾರೋ ಬದಲಾಗಿಬೇರೆ ಎಲ್ಲಿಗಾದರೂ ಹೋಗಿದ್ದಾರೋ ಎಂದು ಕೇಳಿದೆ, ನಿಮಗೆ ತೊಂದರೆಯಾಗಲಿಲ್ಲ ತಾನೇ ಕೇಳಿದ. ನಾನು ಇಲ್ಲ ಎಂದೆ. ಟ್ಯಾಕ್ಸಿಯನ್ನು ಸರಿಯಾಗಿ ಪೂಜಾರಿಯವರಿದ್ದ ಮನೆಯ ಮುಂದೆ ನಿಲ್ಲಿಸಿ ಗೇಟ್ ತೆಗೆದು ಹೋಗಿ ಎಂದ.

ನಾನು ಅಳುಕುತ್ತಲೇ ನಿಧಾನವಾಗಿ ಗೇಟ್ ತೆಗೆದುಕೊಂಡು ಹೋದೆ. ಅದು ದೊಡ್ಡ ಮನೆ. ನಾಲ್ಕು ಸುತ್ತಲೂ ಕಾಂಪೌಂಡ್. ವಿಶಾಲವಾದ ಜಾಗದಲ್ಲಿತ್ತು ಮನೆ. ಹೊರಗಿನಿಂದ ಗಲಾಟೆ, ಜನಜಂಗುಳಿಯಿಲ್ಲ, ಪ್ರಶಾಂತವಾದ ವಾತಾವರಣ. ಸಮಯ ಬೆಳಿಗ್ಗೆ 11 ಗಂಟೆಯಾಗಿತ್ತು. ನಾನು ಮನೆಯ ಕಾಲಿಂಗ್ ಬೆಲ್ ಒತ್ತಿದೆ. ಸ್ವಲ್ಪ ಸಮಯದಲ್ಲಿ ಬಾಗಿಲು ತೆರೆದುಕೊಂಡಿತು. ‘ಕ್ಯಾ ಚಾಯಿಯೇಪ್ರಶ್ನೆಓರ್ವ ಅಪರಿಚಿತ ವ್ಯಕ್ತಿಯಿಂದ. ನಾನು ಬಿ.ಜನಾರ್ಧನ ಪೂಜಾರಿ ಕೋ ಮಿಲ್ನೇಕೇಲಿಯೇ ಆಯೇಎಂದೆ. ತಕ್ಷಣ ಒಳಗೆ ಬರಲುಹೇಳಿದರು. ಅವರು ಸ್ನಾನ ಮಾಡುತ್ತಿದ್ದಾರೆ, ಕೂತುಕೊಳ್ಳಿ ಎಂದು ಒಳಗೆ ಹೋದರು. ಸ್ವಲ್ಪ ಹೊತ್ತಲ್ಲಿ ಬಂದುಚಹಾ, ಕಾಫಿ ಏನುತೆಗೆದುಕೊಳ್ಳುತ್ತೀರಿಎಂದರು. ಬೇಡಾ ಬಿಡಿ ಎಂದೆ, ಆದರೂ ಒತ್ತಾಯ ಮಾಡಿದಾಗ ಚಹಾ ಎಂದೆ. ಸ್ವಲ್ಪಹೊತ್ತಲ್ಲಿ ಚಹಾ ಬಂತು. ಕುಡಿದು ಅಲ್ಲಿದ್ದ ಪೇಪರ್ ನೋಡುತ್ತಾ ಕುಳಿತೆ.

ಸ್ವಲ್ಪ ಸಮಯದ ಬಳಿಕ ಬಿ.ಜನಾರ್ಧನ ಪೂಜಾರಿ ಬಂದರು . ಶುದ್ಧ ಬಿಳಿ ಪ್ಯಾಂಟ್, ಬಿಳಿ ಅಂಗಿ ಧರಿಸಿದ್ದರು. ಕನ್ನಡವನ್ನುಬಟ್ಟೆಯಿಂದ ಉಜ್ಜಿಕೊಂಡು ನಗುತ್ತಲೇ ಬಂದರು. ‘ದಾನೆಗೇ ಬರಿಯೆರೆ ಕಷ್ಟ ಆಂಡ್’ (ಏನಂತೆ ಬರಲು ಕಷ್ಟವಾಯಿತೇ). ನಾನುಇಲ್ಲವೆಂದೆ. ಆಮೇಲೆ ಪೂಜಾರಿಯವರಿಂದ ಚಹಾ ಕುಡಿಯಲು ಒತ್ತಾಯ. ನಾನು ಕುಡಿದೆ ಎಂದರು ಒಪ್ಪಲಿಲ್ಲ ಮತ್ತೆ ಕುಡಿಯಿರಿಎಂದು ಚಹಾ ತರಿಸಿದರು.

ಹಾಗೆ ಮಾತಾಡುತ್ತಾ ಕುಳಿತೆವು. ಸ್ಥಳೀಯ ರಾಜಕೀಯದ ಕುರಿತೇ ಮಾತು. ನಾವಿಬ್ಬರೇ ಕುಳಿತುಕೊಂಡಿದ್ದೆವು, ಅಲ್ಲಿಗೆ ಬೇರೆ ಯಾರೂಬರಲಿಲ್ಲ. ಸದ್ದುಗದ್ದಲವಿಲ್ಲದೆ ಮಾತನಾಡಿದೆವು. ಪೂಜಾರಿ ಮಕ್ಕಳ ಕುರಿತು ವಿಚಾರಿಸಿದರು. ಯಾಕೆ ಬಂದದ್ದು ಪ್ರಶ್ನೆಗೆ ವಿವರಿಸಿದೆ. ಸುಮಾರು ಒಂದು ಗಂಟೆ ಕಾಲ ಮಾತನಾಡಿದೆವು. ನಾನು ಹೊರಟು ನಿಂತೆ. ಪೂಜಾರಿಯವರು ಊಟ ಮಾಡಿಕೊಂಡು ಹೋಗಲುಒತ್ತಾಯಿಸಿದರು. ನಾನು ಬೇಡವೆಂದು ಹೇಳಿ ಮತ್ತೆ ಅಮೇರಿಕಾ ತಂಡವನ್ನು ಭೇಟಿ ಮಾಡುವ ನೆಪಕೊಟ್ಟು ಹೊರಡಲು ಬಯಸಿದೆ.

ಸರಿ ಪೂಜಾರಿಯವರು ಸಮ್ಮತಿಸಿದರು. ನಾನಿನ್ನು ಬರ್ತ್ತೇನೆ ಎಂದು ಕೈಮುಗಿದೆ. ‘ಇಲ್ಲಾ ಇಲ್ಲಾ ಬನ್ನಿಎನ್ನುತ್ತಾ ನನ್ನೊಂದಿಗೆ ಗೇಟ್ವರೆಗೂ ಬರಲು ಸಜ್ಜಾದರು. ನಾನುಬೇಡ ಸಾರ್ ನಾನು ಹೊಗ್ತೇನೆಎಂದರು ಕೇಳಲಿಲ್ಲ. ‘ನೀವು ನನ್ನ ಗೆಸ್ಟ್ ಬನ್ನಿಎನ್ನುತ್ತಾನಡೆದುಕೊಂಡು ಬಂದು ಅವರೇ ಗೇಟ್ ತೆಗೆದು ಟ್ಯಾಕ್ಸಿ ತನಕ ಬಂದು ನನ್ನ ಟ್ಯಾಕ್ಸಿ ಅಲ್ಲಿಂದ ಹೊರಟ ಮೇಲೆ ಗೇಟ್ ಹಾಕಿಕೊಂಡರು.

ಒಬ್ಬ ಕೇಂದ್ರ ಸಚಿವರಾಗಿದ್ದವರು ಹೇಗೆ ನಡೆದುಕೊಂಡರು ಎನ್ನುವುದನ್ನು ತಿಳಿಸಲು ಇಷ್ಟೆಲ್ಲಾ ಹೇಳಬೇಕಾಯಿತು. ಪೂಜಾರಿಯವರುಮುಂಗೋಪಿ, ಸಿಡುಕಿನವರು ಎನ್ನುವ ಅಭಿಪ್ರಾಯ ಎಷ್ಟು ಸಹಜ ಮತ್ತು ಎಷ್ಟು ಸುಳ್ಳು ಎನ್ನುವುದೇ ನನಗೆ ಅರ್ಥವಾಗಲಿಲ್ಲ. ಸಿಡುಕಿನ ವ್ಯಕ್ತಿಯಲ್ಲೂ ಎಂಥ ಗುಣಗಳಿರುತ್ತವೆ, ಎಷ್ಟು ಮನುಷ್ಯತ್ವ ಇರುತ್ತದೆ ಅಂದುಕೊಂಡೆ. ನನ್ನನ್ನು ಮನೆಯಿಂದ ಬೀಳ್ಕೊಟ್ಟಾಗನನ್ನೊಂದಿಗೆ ಬಂದ ಬಿ.ಜನಾರ್ಧನ ಪೂಜಾರಿಯವರಲ್ಲೂ ಇಷ್ಟೊಂದು ಸೌಜನ್ಯವಿದೆಯಲ್ಲ ಎಂದುಕೊಂಡೆ.

ಚಿದಂಬರ ಬೈಕಂಪಾಡಿ


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »