TOP STORIES:

ದೇವಸ್ಥಾನದಲ್ಲಿ ದೇವರ ಪ್ರಭಾವಳಿಯಲ್ಲಿರುವ ರಾಕ್ಷಸ ಮುಖದ ಹಿಂದಿದೆ ಅದ್ಭುತ ಜೀವನ ರಹಸ್ಯ..!


ದೇವಸ್ಥಾನದಲ್ಲಿ ದೇವರ ಪ್ರಭಾವಳಿಯಲ್ಲಿರುವ ರಾಕ್ಷಸ ಮುಖದ ಹಿಂದಿದೆ ಅದ್ಭುತ ಜೀವನ ರಹಸ್ಯ..!

ಯಾವುದೇ ದೇಗುಲಕ್ಕೆ ಹೋಗಿ. ಗರ್ಭಗುಡಿಯಲ್ಲಿ ದೇವರ ಹಿಂಬದಿಯ ಪ್ರಭಾವಳಿಯಲ್ಲಿ ವಿಚಿತ್ರವಾದ ರಾಕ್ಷಸ ಮುಖವೊಂದನ್ನುನೀವು ಕಾಣಬಹುದು. ಕೋರೆ ದಾಡೆ ಹಾಗೂ ನಾಲಿಗೆಯನ್ನ ಚಾಚಿದ ಭಯಂಕರ ದೈತ್ಯ ಮುಖ ಅದು. ಗರ್ಭಗುಡಿಗಳಲ್ಲಿಮಾತ್ರವಲ್ಲ, ಕೆಲವು ಪ್ರಾಚೀನ ದೇವಾಲಯಗಳ ವಾಸ್ತು ಹಾಗೂ ಶಿಲ್ಪಶಾಸ್ತ್ರದ ಭಾಗವಾಗಿ ಗೋಪುರಗಳಲ್ಲಿ ರಾಕ್ಷಸ ಮುಖವನ್ನುಅಲಂಕಾರಿಕ ವಸ್ತುವಾಗಿ ಬಳಸಿರುವುದನ್ನು ನೋಡಬಹುದು. ರಾಕ್ಷಸ ಮುಖವನ್ನು ನಮ್ಮ ಸಂಸ್ಕೃತಿಯಲ್ಲಿ ‘‘ಕೀರ್ತಿಮುಖ’’ ಎಂಬಅದ್ಭುತ ಹೆಸರಿನಿಂದ ಕರೆಯಲಾಗಿದೆ. ಹಾಗೆ ನೋಡಿದರೆ ಭಾರತೀಯರ ದೇಗುಲಗಳಿಗೆ ಕೀರ್ತಿಮುಖ ಹೊಸದೇನೂ ಅಲ್ಲ. ಇಂಥದೊಂದು ವಿಚಿತ್ರ ಮುಖದ ಹಿಂದೆ ಬಹುದೊಡ್ಡ ಪರಂಪರೆ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತ ಜೀವನ ಪಾಠವಿದೆ.

ರಕ್ಕಸನೊಬ್ಬನ ಮುಖ, ದೇಗುಲಗಳ ಗೋಡೆ ಹಾಗೂ ಗರ್ಭಗುಡಿಯ ಪ್ರಭಾವಳಿಯಲ್ಲಿ ಸ್ಥಾನ ಪಡೆದಿದ್ದರ ಹಿಂದೆ ಒಂದುಕುತೂಹಲಕಾರಿ ಕಥೆಯೂ ಇದೆ.

ನಾವೆಲ್ಲ ಶಿವಪುರಾಣದಲ್ಲಿ ಬರುವ ಅಸುರರ ರಾಜ ಜಲಂಧರನ ಕಥೆಯನ್ನು ಓದಿರಬಹುದು. ರಾಕ್ಷಸರ ಗುರು ಶುಕ್ರಾಚಾರ್ಯರಪರಮ ಶಿಷ್ಯ ಆತ. ಸ್ವತಃ ಪಾರ್ವತಿಯನ್ನೇ ಮೋಹಿಸಲು ಮುಂದಾಗಿದ್ದ ಹಠಮಾರಿ ಅಸುರ ರಾಜ ಆತ. ಅದೊಂದು ದಿನ, ಅಸುರರಾಜ, ಶಿವನ ತಲೆಯ ಮೇಲೆ ಸದಾ ತಂಪು ಸೂಸುವ ಚಂದ್ರ ಮೇಲೆ ಕಣ್ಣು ಹಾಕುತ್ತಾನೆ. ಪರಮಶಿವನ ಆಭರಣವೇ ಆಗಿರುವ ಚಂದ್ರಮನನ್ನು ಕಿತ್ತು ತರುವಂತೆ ತನ್ನ ಪರಮ ಸ್ನೇಹಿತನಾಗಿದ್ದ ರಾಹುವಿಗೆ ಆದೇಶಿಸುತ್ತಾನೆ.

ಜಲಂಧರನ ಆಜ್ಞೆಯಂತೆಚಂದ್ರನನ್ನು ತರಲು ಕೈಲಾಸಕ್ಕೆ ಹೊರಟ ರಾಹು, ಅದೇ ಚಂದ್ರನ ಬೆಳಕಿನಲ್ಲಿ ಧ್ಯಾನಸ್ಥನಾಗಿದ್ದಪರಮಶಿವನನ್ನು ನೋಡುತ್ತಾನೆ. ಶಿವನ ತಲೆಯ ಮೇಲಿರುವ ಚಂದ್ರನನ್ನು ಕಿತ್ತುಕೊಳ್ಳುವ ಅವಸರದಲ್ಲಿ ಶಿವನ ಧ್ಯಾನಕ್ಕೆಭಂಗವುಂಟುಮಾಡುತ್ತಾನೆ. ತನ್ನ ತಪೋಭಂಗಗೊಳಿಸಿದ ರಾಹುವಿನ ಕುಚೇಷ್ಟೆಗಳಿಂದ ಕುಪಿತನಾದ ಶಿವ, ತನ್ನ 3ನೇ ಕಣ್ಣಿನಿಂದಅಗ್ನಿಜ್ವಾಲೆಗಳನ್ನ ಸ್ಫೋಟಿಸಿಬಿಡುತ್ತಾನೆ. ಶಿವ ಸ್ಫೋಟಿಸಿದ ಅಗ್ನಿಜ್ವಾಲೆಗಳಿಂದ ಸಿಂಹಮುಖಿ ಎಂಬ ಭಯಾನಕ ರಕ್ಕಸನೊಬ್ಬಹುಟ್ಟಿಕೊಳ್ಳುತ್ತಾನೆ. ಆಗ ಶಿವ, ತನ್ನ ತಪಸ್ಸಿಗೆ ಭಂಗ ತಂದ ರಾಹುವನ್ನು ನುಂಗಿಹಾಕುವಂತೆ ಸಿಂಹಮುಖಿ ರಕ್ಕಸನಿಗೆಆದೇಶಿಸುತ್ತಾನೆ.

ಇದರಿಂದ ನಡುಗಿ ಹೋದ ರಾಹು, ತನ್ನಿಂದಾದ ಪ್ರಮಾದವನ್ನ ಕ್ಷಮಿಸುವಂತೆ ಶಿವನನ್ನು ಪರಿಪರಿಯಾಗಿ ಬೇಡಿಕೊಳ್ಳುತ್ತಾನೆ. ಶಿವನಿಂದಸೃಷ್ಟಿಯಾದ ಸಿಂಹಮುಖಿ ರಕ್ಕಸನಿಂದಲೂ ತನ್ನನ್ನು ರಕ್ಷಿಸುವಂತೆ ಕೇಳುತ್ತಾನೆ. ರಾಹುವಿನ ಕ್ಷಮಾಯಾಚನೆಯಿಂದ ತಣ್ಣಗಾದ ಶಿವ, ಆತನನ್ನು ಬಿಟ್ಟುಬಿಡುವಂತೆ ಸಿಂಹಮುಖಿಗೆ ಹೇಳುತ್ತಾನೆ. ಆದರೆ ಹೊತ್ತಿಗಾಗಲೇ ಭಯಾನಕ ಹಸಿವಿನಿಂದ ಕುದ್ದುಹೋಗಿದ್ದ ಸಿಂಹಮುಖಿ, ತನ್ನ ಹಸಿವು ನೀಗಿಸಿದರೆ ಮಾತ್ರ ರಾಹುವನ್ನು ಬಿಡುವುದಾಗಿ ಹೇಳುತ್ತಾನೆ. ಆಗ ಪರಶಿವ, ‘‘ನಿನ್ನನ್ನೇ ನೀನು ತಿಂದುಹಸಿವು ನೀಗಿಸಿಕೋ..!’’ ಎನ್ನುತ್ತಾನೆ. ಶಿವನ ಆಜ್ಞೆಯಂತೆ ಸಿಂಹಮುಖಿ ಕಾಲಿನ ಭಾಗದಿಂದ ತನ್ನನ್ನು ತಾನೇ ತಿನ್ನಲುಆರಂಭಿಸುತ್ತಾನೆ. ಮೊದಲು ಕಾಲು, ಆನಂತ್ರ ಹೊಟ್ಟೆ, ಎದೆಯ ಭಾಗ.. ಹೀಗೆ ಒಂದೊಂದಾಗಿ ತನ್ನೆಲ್ಲ ಅವಯವಗಳನ್ನು ತಾನೇ ತಿಂದುಮುಗಿಸಿದ ಸಿಂಹಮುಖಿ, ಕೊನೆಗೆ ಉಳಿದಿದ್ದ ತನ್ನೆರಡು ಕೈಗಳನ್ನೂ ತಿನ್ನೋದಕ್ಕೆ ಶುರುವಿಟ್ಟುಕೊಳ್ಳುತ್ತಾನೆ. ಇನ್ನೇನು ರಕ್ಕಸತನ್ನೆರಡು ಕೈಗಳನ್ನು ತಿಂದು ಮುಗಿಸಬೇಕು ಎನ್ನುವಷ್ಟರಲ್ಲಿ ಶಿವ, ರಕ್ಕಸನಿಗೆ ತಿನ್ನೋದನ್ನು ನಿಲ್ಲಿಸುವಂತೆ ಸೂಚಿಸಿಸುತ್ತಾನೆ.

ಕೊನೆಗೆ ತಿನ್ನದೇ ಉಳಿದಿದ್ದು ಸಿಂಹಮುಖಿ ರಕ್ಕಸನ ಮುಖ ಮಾತ್ರ. ಸಿಂಹಮುಖಿ ತಿನ್ನದೇ ಉಳಿಸಿದ ಆತನದ್ದೇ ಮುಖಕ್ಕೆ ಪರಶಿವ, ಕೀರ್ತಿಮುಖ ಅನ್ನೋ ಬಿರುದನ್ನು ನೀಡುತ್ತಾನೆ. ತನ್ನನ್ನು ತಾನು ಇಲ್ಲವಾಗಿಸಿಕೊಂಡ ರಕ್ಕಸನ ಮುಖ ದೇಗುಲಗಳಲ್ಲಿಕೀರ್ತಿಮುಖವಾಗಿ ವಿರಾಜಿಸಲಿ ಎಂದು ಆಶೀರ್ವದಿಸಿದನಂತೆ ಪರಶಿವ. ಇದು ಶಿವಪುರಾಣದಲ್ಲಿ ವರ್ಣಸಲ್ಪಟ್ಟಿರುವ ಕೀರ್ತಿಮುಖದಕಥೆ.

ಗರ್ಭಗುಡಿಯ ಪ್ರಭಾವಳಿಯಲ್ಲಿ ರಾಕ್ಷಸ ಮುಖವನ್ನು ಕೇವಲ ಅಲಂಕಾರಕ್ಕಾಗಿ ಮಾಡಿದ್ದಲ್ಲ. ಕೀರ್ತಿಮುಖದ ಮೂಲಕ ನಮ್ಮಹಿರಿಯರು ಅದ್ಭುತ ಜೀವನ ಪಾಠವನ್ನು ಹೇಳೋದಕ್ಕೆ ಯತ್ನಿಸಿದ್ದಾರೆ.

{ ಮನುಷ್ಯನ ಆತ್ಮೋನ್ನತಿಯಾಗಬೇಕಾದ್ರೆ, ತನ್ನೊಳಗಿರೋ ಅಹಂ ಇಲ್ಲವಾಗಿಸಿಕೊಳ್ಳಬೇಕು. ತನ್ನ  ದೇಹವನ್ನು ತಾನೇ  ತಿಂದು  ಮುಗಿಸಿದ  ಅಸುರನಂತೆ  ನಮ್ಮೊಳಗಿನ  ಅಹಂ ನೀಗಿಸಿಕೊಳ್ಳಬೇಕು.  ಆಗ  ಮಾತ್ರವೇ ಆತ್ಮೋತ್ನತಿ  ಸಾಧ್ಯ  ಎಂಬುದು  ಕೀರ್ತಿಮುಖ  ಹಿಂದಿರುವ  ರಹಸ್ಯ  ಮತ್ತು  ಸಂದೇಶ }.

ಇಂಥ ಅದ್ಬುತ ಜೀವನ ಸಂದೇಶ ನೀಡುವ ಕೀರ್ತಿಮುಖ, ದೇಗುಲಗಳ ಗೋಡೆಯನ್ನ ಅಲಂಕರಿಸಿದ್ದು ಗುಪ್ತರ ಕಾಲದಲ್ಲಿ. ಸುಮಾರು 2500 ವರ್ಷಗಳ ಹಿಂದೆ. ಭಾರತೀಯ ವಾಸ್ತುಶಿಲ್ಪ ಮಾತ್ರವಲ್ಲ, ಬೌದ್ಧರ ವಾಸ್ತುಶೈಲಿಯಲ್ಲೂ ಕೀರ್ತಿಮುಖವನ್ನುಬಳಸಲಾಗಿದೆ. ಚೀನಾದಿಂದ ಹಿಡಿದು ದಕ್ಷಿಣ ಏಷ್ಯಾದ ಹಲವು ರಾಷ್ಟ್ರಗಳಲ್ಲೂ ಕೀರ್ತಿಮುಖ, ದೇಗುಲಗಳ ವಾಸ್ತುವಿನ್ಯಾಸದಒಂದು ಭಾಗವಾಗಿ ಬಳಕೆಯಾಗಿದೆ. ಕೀರ್ತಿಮುಖವನ್ನ ಕಲ್ಯಾಣಿ ಚಾಲುಕ್ಯರು ತಾವು ನಿರ್ಮಿಸಿದ ದೇಗುಲಗಳಲ್ಲಿ ವಾಸ್ತು ಹಾಗೂಅಲಂಕಾರಿಕ ಭಾಗವಾಗಿ ಬಳಸೋದಕ್ಕೆ ಆರಂಭಿಸಿದರು. ಕೀರ್ತಿಮುಖದ ಹಿಂದಿರುವ ಪೌರಾಣಿಕ ಕಥೆಗಳು ಅದೇನೇ ಇರಲಿ, ಆದರೆಇದು ನೀಡುವ ಅದ್ಭುತ ಜೀವನ ಸಂದೇಶವನ್ನು ಜನರಿಗೆ ತಲುಪಿಸೋದೇ ನಮ್ಮ ಹಿರಿಯರ ಉದ್ದೇಶವಾಗಿತ್ತು. “ಕೀರ್ತಿಮುಖ ಕೈಗಳು ಕಾಣುತ್ತಿಲ್ಲ. ಶಿಲ್ಪ ರಚನೆಯು ಕರಾವಳಿಯ (ದೇವರ ಮಂದಿರ=) ದೇವಸ್ಥಾನ ; ಹಾಗೂ (ದೈವ,ಭೂತ, ಇತ್ಯಾದಿಗಳಮಂದಿರ=) ದೈವಸ್ಥಾನಗಳ ಗರ್ಭಗುಡಿ ಪ್ರವೇಶ ಆಗುವ (“ಆನೆಬಾಗಿಲುಎಂಬ ರಚನೆ ಇರುತ್ತವೆ. ಅಲ್ಲೇ ಕೆಳಗೆ)  ಗರ್ಭಗುಡಿಯಮೆಟ್ಟಲುಗಳು  ಇರುವುದು. ಮೆಟ್ಟಿಲು ಇರುವಲ್ಲೇ ಮೇಲೆ ಕೀರ್ತಿ ಮುಖ , ಹಾಗೂ ಅವನೆರಡೂ ಕೈಗಳು ಏನನ್ನೋ ಕೆಳಗಿನಿಂದಮೇಲಕ್ಕೆ ಬಾಚಿ ಎತ್ತಿಕೊಳ್ಳಲು ತಯಾರಾದ ನಮೂನೆಯಲ್ಲೇ ಕಾಣಸಿಗುತ್ತವೆ. ಆದರೆ ಇದು ಸ್ಪಷ್ಟವಾಗಿ ನೆಲೆಯಲ್ಲಿ ನಿಂತರೆನೋಡಲಾಗುವುದಿಲ್ಲ. ಅವುಗಳನ್ನು   ನೋಡಲು ಮೆಟ್ಟಲು , ಅಲ್ಲೇ ಮೇಲ್ಭಾಗ ಎಲ್ಲ ಕಾಣುವ ಹಾಗೆ ಸ್ವಲ್ಪ ದೂರ ( ಮಂದಿರದಎದುರುಗಡೆಯೇ) ಹೋಗಿ ನಿಂತು ನೋಡಿದರೆ ಸ್ಪಷ್ಟ ಗೋಚರವಾಗುತ್ತವೆ. ನೆನಪಿರಲಿ: ಇಷ್ಟೂ ರಚನೆ ಮರದಿಂದಲೇ ಕೆತ್ತಿರುತ್ತಾರೆ. ಕೀರ್ತಿಮುಖ, ಎರಡೂ ಕೈಗಳಿಗೆ   ತಾಕತ್ತಿಗನುಗುಣವಾಗಿ  ತಾಮ್ರ , ಹಿತ್ತಾಳೆ , ಚಿನ್ನ ಎಂಬ ಲೋಹಗಳ ಕವಚ ಹಾಕಿಸಿರುತ್ತಾರೆ.


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »