TOP STORIES:

ದೇವಸ್ಥಾನದ ಆಡಳಿತ ಮಂಡಳಿಯನ್ನು ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ ಶಂಕರ್ ಶಾಂತಿ


ಬ್ರಹ್ಮಾವರ,ಮಾ.6; ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಅರೋಪವೆಂದು ಬಲವಾಗಿ ಖಂಡಿಸಿದ್ದು, ಇವಾಗ ಅವರು ಉಡುಪಿ ದಕ್ಷಿಣ ಕನ್ನಡದ ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ್ದಾರೆ.

ಕಚ್ಚೂರು ಕಾಳಿಕಾಂಬಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಮಾಹಿತಿ ಹಕ್ಕು ಕಾರ್ಯಕರ್ತ ಶಂಕರ್ ಶಾಂತಿ ಯವರಿಗೆ ಕಾಳಿಕಾಂಬಾ ದೇವಸ್ಥಾನದೊಳಗೆ ಹಲ್ಲೆಯಾಗಿದೆ ಎನ್ನುವ ವಿಚಾರ ಹರಿದಾಡುತ್ತಿದ್ದು ಇದು ಆಧಾರರಹಿತವಾಗಿದೆ. ಈ ಘಟನೆಗೂ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ, ಅನಾವಶ್ಯಕವಾಗಿ ವಿಶ್ವಕರ್ಮ ಸಮಾಜದ ಮೇಲೆ ಆರೋಪ ಮಾಡುತ್ತಿರುವುದು, ನಮ್ಮ ಸಮಾಜದ ಯುವಕರ ಮೇಲೆ ಕೇಸು ದಾಖಲಿಸಿರುವುದು ಸರಿಯಲ್ಲ ಎಂದು ದೇವಸ್ತಾನದ ಆಡಳಿತ ಮೊಕ್ತೇಸರ ವಡೇರಹೋಬಳಿ ಶ್ರೀಧರ ಆಚಾರ್ಯ ಅವರು ಮಾ.5, ರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಈ ಬಗ್ಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಗಂಭೀರ ಸ್ವರೂಪದ ಗಾಯಾಳಾಗಿ ಚಿಕಿತ್ಸೆ ಪಡೆಯುತ್ತಿರುವ, ಸಾಮಾಜಿಕ ಕಾರ್ಯಕರ್ತ ಶಂಕರಶಾಂತಿ ಅವರು, ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಹಲ್ಲೆ ನಡೆಸಿ,ನಮ್ಮ ದೇವಸ್ಥಾನದಲ್ಲಿ ಯಾವುದೇ ಘಟನೆ ನಡೆದಿಲ್ಲ ಎಂದು ದೇವಸ್ಥಾನದ ಒಂದನೇ ಹಾಗೂ 3 ನೇ ಆಡಳಿತ ಮೊಕ್ತೇಸರ ಸುಳ್ಳು ಹೇಳಿಕೆ ಪತ್ರಿಕೆಗೆ ನೀಡಿರುತ್ತಾರೆ. ಈ ವಿಷಯದಲ್ಲಿ ಧರ್ಮಸ್ಥಳ ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮಂಡಳಿಯನ್ನು ಸತ್ಯ ಪ್ರಮಾಣಕ್ಕೆ ಕರೆಯುತಿದ್ದೇನೆ, ಕಾಳಿಕಾಂಬೆ ಹಾಗೂ ಕಲ್ಕುಡ ಸನ್ನಿದಿಯಲ್ಲಿ ಸತ್ಯ ಪ್ರಮಾಣ ನಡೆಯಲಿ, ತಾವು ಬಾರದೆ ಇದ್ದಲ್ಲಿ ಧರ್ಮಸ್ಥಳ ಶ್ರೀಕ್ಷೇತ್ರದಲ್ಲಿ ಹಾಗೂ ಶಂಕರನಾರಾಯಣ ಕಲ್ಕುಡ ದೈವದಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ವಿರುದ್ಧ ಹುಯಿಲು (ದೂರು)ಕೊಡುತ್ತೇನೆಂದು ಹೇಳಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »