TOP STORIES:

FOLLOW US

ದೇವಸ್ಥಾನದ ಆಡಳಿತ ಮಂಡಳಿಯನ್ನು ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ ಶಂಕರ್ ಶಾಂತಿ


ಬ್ರಹ್ಮಾವರ,ಮಾ.6; ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಅರೋಪವೆಂದು ಬಲವಾಗಿ ಖಂಡಿಸಿದ್ದು, ಇವಾಗ ಅವರು ಉಡುಪಿ ದಕ್ಷಿಣ ಕನ್ನಡದ ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ್ದಾರೆ.

ಕಚ್ಚೂರು ಕಾಳಿಕಾಂಬಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಮಾಹಿತಿ ಹಕ್ಕು ಕಾರ್ಯಕರ್ತ ಶಂಕರ್ ಶಾಂತಿ ಯವರಿಗೆ ಕಾಳಿಕಾಂಬಾ ದೇವಸ್ಥಾನದೊಳಗೆ ಹಲ್ಲೆಯಾಗಿದೆ ಎನ್ನುವ ವಿಚಾರ ಹರಿದಾಡುತ್ತಿದ್ದು ಇದು ಆಧಾರರಹಿತವಾಗಿದೆ. ಈ ಘಟನೆಗೂ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ, ಅನಾವಶ್ಯಕವಾಗಿ ವಿಶ್ವಕರ್ಮ ಸಮಾಜದ ಮೇಲೆ ಆರೋಪ ಮಾಡುತ್ತಿರುವುದು, ನಮ್ಮ ಸಮಾಜದ ಯುವಕರ ಮೇಲೆ ಕೇಸು ದಾಖಲಿಸಿರುವುದು ಸರಿಯಲ್ಲ ಎಂದು ದೇವಸ್ತಾನದ ಆಡಳಿತ ಮೊಕ್ತೇಸರ ವಡೇರಹೋಬಳಿ ಶ್ರೀಧರ ಆಚಾರ್ಯ ಅವರು ಮಾ.5, ರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಈ ಬಗ್ಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಗಂಭೀರ ಸ್ವರೂಪದ ಗಾಯಾಳಾಗಿ ಚಿಕಿತ್ಸೆ ಪಡೆಯುತ್ತಿರುವ, ಸಾಮಾಜಿಕ ಕಾರ್ಯಕರ್ತ ಶಂಕರಶಾಂತಿ ಅವರು, ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಹಲ್ಲೆ ನಡೆಸಿ,ನಮ್ಮ ದೇವಸ್ಥಾನದಲ್ಲಿ ಯಾವುದೇ ಘಟನೆ ನಡೆದಿಲ್ಲ ಎಂದು ದೇವಸ್ಥಾನದ ಒಂದನೇ ಹಾಗೂ 3 ನೇ ಆಡಳಿತ ಮೊಕ್ತೇಸರ ಸುಳ್ಳು ಹೇಳಿಕೆ ಪತ್ರಿಕೆಗೆ ನೀಡಿರುತ್ತಾರೆ. ಈ ವಿಷಯದಲ್ಲಿ ಧರ್ಮಸ್ಥಳ ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮಂಡಳಿಯನ್ನು ಸತ್ಯ ಪ್ರಮಾಣಕ್ಕೆ ಕರೆಯುತಿದ್ದೇನೆ, ಕಾಳಿಕಾಂಬೆ ಹಾಗೂ ಕಲ್ಕುಡ ಸನ್ನಿದಿಯಲ್ಲಿ ಸತ್ಯ ಪ್ರಮಾಣ ನಡೆಯಲಿ, ತಾವು ಬಾರದೆ ಇದ್ದಲ್ಲಿ ಧರ್ಮಸ್ಥಳ ಶ್ರೀಕ್ಷೇತ್ರದಲ್ಲಿ ಹಾಗೂ ಶಂಕರನಾರಾಯಣ ಕಲ್ಕುಡ ದೈವದಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ವಿರುದ್ಧ ಹುಯಿಲು (ದೂರು)ಕೊಡುತ್ತೇನೆಂದು ಹೇಳಿದ್ದಾರೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »