TOP STORIES:

ದೇವಸ್ಥಾನದ ಆಡಳಿತ ಮಂಡಳಿಯನ್ನು ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ ಶಂಕರ್ ಶಾಂತಿ


ಬ್ರಹ್ಮಾವರ,ಮಾ.6; ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಅರೋಪವೆಂದು ಬಲವಾಗಿ ಖಂಡಿಸಿದ್ದು, ಇವಾಗ ಅವರು ಉಡುಪಿ ದಕ್ಷಿಣ ಕನ್ನಡದ ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ್ದಾರೆ.

ಕಚ್ಚೂರು ಕಾಳಿಕಾಂಬಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಮಾಹಿತಿ ಹಕ್ಕು ಕಾರ್ಯಕರ್ತ ಶಂಕರ್ ಶಾಂತಿ ಯವರಿಗೆ ಕಾಳಿಕಾಂಬಾ ದೇವಸ್ಥಾನದೊಳಗೆ ಹಲ್ಲೆಯಾಗಿದೆ ಎನ್ನುವ ವಿಚಾರ ಹರಿದಾಡುತ್ತಿದ್ದು ಇದು ಆಧಾರರಹಿತವಾಗಿದೆ. ಈ ಘಟನೆಗೂ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ, ಅನಾವಶ್ಯಕವಾಗಿ ವಿಶ್ವಕರ್ಮ ಸಮಾಜದ ಮೇಲೆ ಆರೋಪ ಮಾಡುತ್ತಿರುವುದು, ನಮ್ಮ ಸಮಾಜದ ಯುವಕರ ಮೇಲೆ ಕೇಸು ದಾಖಲಿಸಿರುವುದು ಸರಿಯಲ್ಲ ಎಂದು ದೇವಸ್ತಾನದ ಆಡಳಿತ ಮೊಕ್ತೇಸರ ವಡೇರಹೋಬಳಿ ಶ್ರೀಧರ ಆಚಾರ್ಯ ಅವರು ಮಾ.5, ರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಈ ಬಗ್ಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಗಂಭೀರ ಸ್ವರೂಪದ ಗಾಯಾಳಾಗಿ ಚಿಕಿತ್ಸೆ ಪಡೆಯುತ್ತಿರುವ, ಸಾಮಾಜಿಕ ಕಾರ್ಯಕರ್ತ ಶಂಕರಶಾಂತಿ ಅವರು, ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಹಲ್ಲೆ ನಡೆಸಿ,ನಮ್ಮ ದೇವಸ್ಥಾನದಲ್ಲಿ ಯಾವುದೇ ಘಟನೆ ನಡೆದಿಲ್ಲ ಎಂದು ದೇವಸ್ಥಾನದ ಒಂದನೇ ಹಾಗೂ 3 ನೇ ಆಡಳಿತ ಮೊಕ್ತೇಸರ ಸುಳ್ಳು ಹೇಳಿಕೆ ಪತ್ರಿಕೆಗೆ ನೀಡಿರುತ್ತಾರೆ. ಈ ವಿಷಯದಲ್ಲಿ ಧರ್ಮಸ್ಥಳ ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮಂಡಳಿಯನ್ನು ಸತ್ಯ ಪ್ರಮಾಣಕ್ಕೆ ಕರೆಯುತಿದ್ದೇನೆ, ಕಾಳಿಕಾಂಬೆ ಹಾಗೂ ಕಲ್ಕುಡ ಸನ್ನಿದಿಯಲ್ಲಿ ಸತ್ಯ ಪ್ರಮಾಣ ನಡೆಯಲಿ, ತಾವು ಬಾರದೆ ಇದ್ದಲ್ಲಿ ಧರ್ಮಸ್ಥಳ ಶ್ರೀಕ್ಷೇತ್ರದಲ್ಲಿ ಹಾಗೂ ಶಂಕರನಾರಾಯಣ ಕಲ್ಕುಡ ದೈವದಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ವಿರುದ್ಧ ಹುಯಿಲು (ದೂರು)ಕೊಡುತ್ತೇನೆಂದು ಹೇಳಿದ್ದಾರೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »