TOP STORIES:

ದೇವಸ್ಥಾನದ ಆಡಳಿತ ಮಂಡಳಿಯನ್ನು ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ ಶಂಕರ್ ಶಾಂತಿ


ಬ್ರಹ್ಮಾವರ,ಮಾ.6; ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಅರೋಪವೆಂದು ಬಲವಾಗಿ ಖಂಡಿಸಿದ್ದು, ಇವಾಗ ಅವರು ಉಡುಪಿ ದಕ್ಷಿಣ ಕನ್ನಡದ ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ್ದಾರೆ.

ಕಚ್ಚೂರು ಕಾಳಿಕಾಂಬಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಮಾಹಿತಿ ಹಕ್ಕು ಕಾರ್ಯಕರ್ತ ಶಂಕರ್ ಶಾಂತಿ ಯವರಿಗೆ ಕಾಳಿಕಾಂಬಾ ದೇವಸ್ಥಾನದೊಳಗೆ ಹಲ್ಲೆಯಾಗಿದೆ ಎನ್ನುವ ವಿಚಾರ ಹರಿದಾಡುತ್ತಿದ್ದು ಇದು ಆಧಾರರಹಿತವಾಗಿದೆ. ಈ ಘಟನೆಗೂ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ, ಅನಾವಶ್ಯಕವಾಗಿ ವಿಶ್ವಕರ್ಮ ಸಮಾಜದ ಮೇಲೆ ಆರೋಪ ಮಾಡುತ್ತಿರುವುದು, ನಮ್ಮ ಸಮಾಜದ ಯುವಕರ ಮೇಲೆ ಕೇಸು ದಾಖಲಿಸಿರುವುದು ಸರಿಯಲ್ಲ ಎಂದು ದೇವಸ್ತಾನದ ಆಡಳಿತ ಮೊಕ್ತೇಸರ ವಡೇರಹೋಬಳಿ ಶ್ರೀಧರ ಆಚಾರ್ಯ ಅವರು ಮಾ.5, ರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಈ ಬಗ್ಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಗಂಭೀರ ಸ್ವರೂಪದ ಗಾಯಾಳಾಗಿ ಚಿಕಿತ್ಸೆ ಪಡೆಯುತ್ತಿರುವ, ಸಾಮಾಜಿಕ ಕಾರ್ಯಕರ್ತ ಶಂಕರಶಾಂತಿ ಅವರು, ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಹಲ್ಲೆ ನಡೆಸಿ,ನಮ್ಮ ದೇವಸ್ಥಾನದಲ್ಲಿ ಯಾವುದೇ ಘಟನೆ ನಡೆದಿಲ್ಲ ಎಂದು ದೇವಸ್ಥಾನದ ಒಂದನೇ ಹಾಗೂ 3 ನೇ ಆಡಳಿತ ಮೊಕ್ತೇಸರ ಸುಳ್ಳು ಹೇಳಿಕೆ ಪತ್ರಿಕೆಗೆ ನೀಡಿರುತ್ತಾರೆ. ಈ ವಿಷಯದಲ್ಲಿ ಧರ್ಮಸ್ಥಳ ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮಂಡಳಿಯನ್ನು ಸತ್ಯ ಪ್ರಮಾಣಕ್ಕೆ ಕರೆಯುತಿದ್ದೇನೆ, ಕಾಳಿಕಾಂಬೆ ಹಾಗೂ ಕಲ್ಕುಡ ಸನ್ನಿದಿಯಲ್ಲಿ ಸತ್ಯ ಪ್ರಮಾಣ ನಡೆಯಲಿ, ತಾವು ಬಾರದೆ ಇದ್ದಲ್ಲಿ ಧರ್ಮಸ್ಥಳ ಶ್ರೀಕ್ಷೇತ್ರದಲ್ಲಿ ಹಾಗೂ ಶಂಕರನಾರಾಯಣ ಕಲ್ಕುಡ ದೈವದಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ವಿರುದ್ಧ ಹುಯಿಲು (ದೂರು)ಕೊಡುತ್ತೇನೆಂದು ಹೇಳಿದ್ದಾರೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »