TOP STORIES:

FOLLOW US

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ


ದೇಶಪ್ರೇಮ ಎಂಬುವುದು ಪ್ರತಿಯೊಬ್ಬ ಭಾರತೀಯನ ಎದೆಯ ಬಡಿತದಲ್ಲೂ ಇದೆ. ಅತೀ ಚಿಕ್ಕ ವಯಸ್ಸಿನಲ್ಲೇ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ ರವರ ದೇಶಪ್ರೇಮ ಅಪಾರವಾದದ್ದು. ತನ್ನ ಪ್ರಾಣವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟ ಯೋಧರ ದೇಶಪ್ರೇಮ.

ಹಗಲು-ರಾತ್ರಿ ಎನ್ನದೆ, ಬೆವರು ಸುರಿಸಿ ದುಡಿದು ದೇಶಕ್ಕೆ ಅನ್ನವನ್ನು ನೀಡುವ ರೈತನ ದೇಶಪ್ರೇಮ. ಗಡಿಯಲ್ಲಿ ವೀರ ಯೋಧ ನಾಡಿನಲ್ಲಿ ಖಾಕಿ ಯೋಧ ಎನ್ನುವ ಹಾಗೆ ಪೋಲಿಸ್ ರ ದೇಶಪ್ರೇಮ.

ಹೀಗೆಯೇ ಪ್ರತಿಯೊಬ್ಬ ಭಾರತೀಯನಲ್ಲೂ ದೇಶಪ್ರೇಮವು ಅಚಲವಾಗಿದೆ. ಓಟ್ಟೊಟ್ಟಿಗೆ ದೇಶವು ಇನ್ನಷ್ಟು ಬಲಿಷ್ಠವಾಗಬೇಕಿದೆ. ಹೀಗೆ ದೇಶವು ಬಲಿಷ್ಠ ಆಗಬೇಕಾದರೆ ನಾವು ಸ್ವತಂತ್ರರಾಗಬೇಕು,ಸ್ವವಲಂಭಿಯಾಗಬೇಕು. ನಾವು ಸ್ವತಃ ಸ್ವವಲಂಬಿಯಾದರೆ ದೇಶವನ್ನು ಬಲಿಷ್ಠಗೊಳಿಸಬಹುದು ಮತ್ತು ಆಗ ಮಾತ್ರ ಆತ್ಮರ್ನಿಭರತೆಯ ಕನಸು ನನಸಾಗಲು ಸಾಧ್ಯ.

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ ಕುರಿತಾದ ಹಾಗೂ ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಇನ್ಫಾರ್ಮೇಷನ್ ರವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಶಾರ್ಟ್ ಫಿಲ್ಮ್ ಸ್ಪರ್ಧೆಯಲ್ಲಿ ಭಾಗವಹಿಸಿದ ಕಿರುಚಿತ್ರ.

ಇದೆ ಪರಿಕಲ್ಪನೆಯನ್ನು ಇಟ್ಟುಕೊಂಡು ಯುವವಾಹಿನಿ ಮಾಣಿ ಘಟಕದ ಅರ್ಪಿಸುವ, ರಾಜೇಶ್ ಎಸ್ ಬಲ್ಯ ರವರ ಕಥೆ-ಚಿತ್ರಕಥೆ-ನಿರ್ದೇಶನದ ಈ ಕಿರುಚಿತ್ರಕ್ಕೆ ಶಿವರಾಜ್ ಪಿ.ಆರ್ ರವರು ಕೂಡ ಚಿತ್ರ ಕಥೆ ಜೊಡಿಸಿದ್ದಾರೆ. ಕಿರುಚಿತ್ರಕ್ಕೆ ಸಂಭಾಷಣೆಯನ್ನು ಪ್ರಶಾಂತ್ ಅನಂತಾಡಿ ಬರೆದಿದ್ದಾರೆ. ಪ್ರವೀಣ್ ಸಾಲ್ಯಾನ್ ಮತ್ತು ವಿಕ್ರಮ್ ಬಿಳಿಯೂರು ಅವರು ಇಡೀ ಕಿರುಚಿತ್ರದ ಕಣ್ಣುಗಳಂತೆ ಶೂಟಿಂಗ್ ಮಾಡಿದ್ದಾರೆ. ಸಂಕಲನವನ್ನು ದೀಕ್ಷಿತ್ ಮತ್ತು ಪೋಸ್ಟರ್ ಡಿಸೈನ್ ನ್ನು ಚರಣ್ ಅನಂತಾಡಿ ಮಾಡಿದ್ದು, ಮಿತುನ್ ರಾಜ್ ವಿದ್ಯಾಪುರ ಕಿರುಚಿತ್ರಕ್ಕೆ ಅಧ್ಬುತ ಸಂಗೀತ ಸಂಯೋಜಿಸಿದ್ದಾರೆ. ಮತ್ತು ಈ ಕಿರುಚಿತ್ರಕ್ಕೆ ರಮೇಶ್ ಪೂಜಾರಿ ಮುಜಲ,ಹರೀಶ್ ಪೂಜಾರಿ ಬಾಕಿಲ ಮತ್ತು ಶಿವರಾಜ್ ಪಿ.ಆರ್ ರವರು ನಿರ್ಮಾಪಕರಾಗಿದ್ದಾರೆ.

ತುಳುಚಿತ್ರರಂಗ ಹಾಗೂ ಕನ್ನಡ ಸಿನಿಮಾರಂಗದಿಂದಲೂ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ ಸಿಕ್ಕಿದೆ. ಆಗೋಸ್ಟ್ 22 ರಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳಲಿದೆ.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »