TOP STORIES:

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ


ದೇಶಪ್ರೇಮ ಎಂಬುವುದು ಪ್ರತಿಯೊಬ್ಬ ಭಾರತೀಯನ ಎದೆಯ ಬಡಿತದಲ್ಲೂ ಇದೆ. ಅತೀ ಚಿಕ್ಕ ವಯಸ್ಸಿನಲ್ಲೇ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ ರವರ ದೇಶಪ್ರೇಮ ಅಪಾರವಾದದ್ದು. ತನ್ನ ಪ್ರಾಣವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟ ಯೋಧರ ದೇಶಪ್ರೇಮ.

ಹಗಲು-ರಾತ್ರಿ ಎನ್ನದೆ, ಬೆವರು ಸುರಿಸಿ ದುಡಿದು ದೇಶಕ್ಕೆ ಅನ್ನವನ್ನು ನೀಡುವ ರೈತನ ದೇಶಪ್ರೇಮ. ಗಡಿಯಲ್ಲಿ ವೀರ ಯೋಧ ನಾಡಿನಲ್ಲಿ ಖಾಕಿ ಯೋಧ ಎನ್ನುವ ಹಾಗೆ ಪೋಲಿಸ್ ರ ದೇಶಪ್ರೇಮ.

ಹೀಗೆಯೇ ಪ್ರತಿಯೊಬ್ಬ ಭಾರತೀಯನಲ್ಲೂ ದೇಶಪ್ರೇಮವು ಅಚಲವಾಗಿದೆ. ಓಟ್ಟೊಟ್ಟಿಗೆ ದೇಶವು ಇನ್ನಷ್ಟು ಬಲಿಷ್ಠವಾಗಬೇಕಿದೆ. ಹೀಗೆ ದೇಶವು ಬಲಿಷ್ಠ ಆಗಬೇಕಾದರೆ ನಾವು ಸ್ವತಂತ್ರರಾಗಬೇಕು,ಸ್ವವಲಂಭಿಯಾಗಬೇಕು. ನಾವು ಸ್ವತಃ ಸ್ವವಲಂಬಿಯಾದರೆ ದೇಶವನ್ನು ಬಲಿಷ್ಠಗೊಳಿಸಬಹುದು ಮತ್ತು ಆಗ ಮಾತ್ರ ಆತ್ಮರ್ನಿಭರತೆಯ ಕನಸು ನನಸಾಗಲು ಸಾಧ್ಯ.

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ ಕುರಿತಾದ ಹಾಗೂ ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಇನ್ಫಾರ್ಮೇಷನ್ ರವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಶಾರ್ಟ್ ಫಿಲ್ಮ್ ಸ್ಪರ್ಧೆಯಲ್ಲಿ ಭಾಗವಹಿಸಿದ ಕಿರುಚಿತ್ರ.

ಇದೆ ಪರಿಕಲ್ಪನೆಯನ್ನು ಇಟ್ಟುಕೊಂಡು ಯುವವಾಹಿನಿ ಮಾಣಿ ಘಟಕದ ಅರ್ಪಿಸುವ, ರಾಜೇಶ್ ಎಸ್ ಬಲ್ಯ ರವರ ಕಥೆ-ಚಿತ್ರಕಥೆ-ನಿರ್ದೇಶನದ ಈ ಕಿರುಚಿತ್ರಕ್ಕೆ ಶಿವರಾಜ್ ಪಿ.ಆರ್ ರವರು ಕೂಡ ಚಿತ್ರ ಕಥೆ ಜೊಡಿಸಿದ್ದಾರೆ. ಕಿರುಚಿತ್ರಕ್ಕೆ ಸಂಭಾಷಣೆಯನ್ನು ಪ್ರಶಾಂತ್ ಅನಂತಾಡಿ ಬರೆದಿದ್ದಾರೆ. ಪ್ರವೀಣ್ ಸಾಲ್ಯಾನ್ ಮತ್ತು ವಿಕ್ರಮ್ ಬಿಳಿಯೂರು ಅವರು ಇಡೀ ಕಿರುಚಿತ್ರದ ಕಣ್ಣುಗಳಂತೆ ಶೂಟಿಂಗ್ ಮಾಡಿದ್ದಾರೆ. ಸಂಕಲನವನ್ನು ದೀಕ್ಷಿತ್ ಮತ್ತು ಪೋಸ್ಟರ್ ಡಿಸೈನ್ ನ್ನು ಚರಣ್ ಅನಂತಾಡಿ ಮಾಡಿದ್ದು, ಮಿತುನ್ ರಾಜ್ ವಿದ್ಯಾಪುರ ಕಿರುಚಿತ್ರಕ್ಕೆ ಅಧ್ಬುತ ಸಂಗೀತ ಸಂಯೋಜಿಸಿದ್ದಾರೆ. ಮತ್ತು ಈ ಕಿರುಚಿತ್ರಕ್ಕೆ ರಮೇಶ್ ಪೂಜಾರಿ ಮುಜಲ,ಹರೀಶ್ ಪೂಜಾರಿ ಬಾಕಿಲ ಮತ್ತು ಶಿವರಾಜ್ ಪಿ.ಆರ್ ರವರು ನಿರ್ಮಾಪಕರಾಗಿದ್ದಾರೆ.

ತುಳುಚಿತ್ರರಂಗ ಹಾಗೂ ಕನ್ನಡ ಸಿನಿಮಾರಂಗದಿಂದಲೂ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ ಸಿಕ್ಕಿದೆ. ಆಗೋಸ್ಟ್ 22 ರಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳಲಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »