TOP STORIES:

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ


ಹಿಂದೆ ಜನರು ಕಬ್ಬಿಣದ ಪಾತ್ರೆಗಳನ್ನು ಹೆಚ್ಚು ಬಳಸುತ್ತಿದ್ದರು. ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಾರುಕಟ್ಟೆಗೆ, ಉಕ್ಕು, ನಾನ್ ಸ್ಟಿಕ್ ಸೇರಿದಂತೆ ನಾನಾ ಬಗೆಯ ಪಾತ್ರೆಗಳು ಲಗ್ಗೆಯಿಟ್ಟಿವೆ. ಆದ್ರೆ ಹಿಂದಿನ ಕಾಲದಲ್ಲಿ ಬಳಸ್ತಿದ್ದ ಕಬ್ಬಿಣದ ಪಾತ್ರೆಯಷ್ಟು ಉತ್ತಮವಾದ ಪಾತ್ರೆ ಯಾವುದೂ ಇಲ್ಲ.


ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಕಬ್ಬಿಣದ ಪಾತ್ರೆಗಳಲ್ಲಿ ಆಹಾರವನ್ನು ಬೇಯಿಸಿ ತಿಂದರೆ, ದೇಹದಲ್ಲಿ ಕಬ್ಬಿಣದ ಸಮಸ್ಯೆ ಎದುರಾಗುವುದಿಲ್ಲ. ಇದು ಆರೋಗ್ಯ ವೃದ್ಧಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ. ಕಬ್ಬಿಣದ ಪಾತ್ರೆಯನ್ನು ಅಡುಗೆಯಲ್ಲಿ ಸರಿಯಾಗಿ ಬಳಸಿದರೆ, ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಕಾಪಾಡಬಹುದೆಂದು ವರದಿಯಲ್ಲಿ ಹೇಳಲಾಗಿದೆ.

ಕಬ್ಬಿಣದ ಪಾತ್ರೆಯಲ್ಲಿ ಯಾವುದೇ ಆಹಾರವನ್ನು ನೀವು ತಯಾರಿಸಬಹುದು. ಹೆಚ್ಚು ಹುಳಿ ಪದಾರ್ಥಗಳನ್ನು ಬೇಯಿಸಬಾರದು. ಕಬ್ಬಿಣದ ತವಾದಲ್ಲಿ ರೊಟ್ಟಿ, ಚಪಾತಿ, ದೋಸೆಯನ್ನು ಬೇಯಿಸಿ ಸೇವನೆ ಮಾಡಬಹುದು. ಇದು ಆಹಾರದಲ್ಲಿ ಕಬ್ಬಿಣದ ಗುಣಗಳನ್ನು ಹೆಚ್ಚಿಸುವುದಲ್ಲದೆ, ಸುವಾಸನೆಯನ್ನು ಹೆಚ್ಚಿಸುತ್ತದೆ.

ನೀರು ಅಥವಾ ಯಾವುದೇ ಇತರ ಪಾನೀಯವನ್ನು ಕಬ್ಬಿಣದ ಪಾತ್ರೆಗಳಲ್ಲಿ ಇಡಬಾರದು. ಕಬ್ಬಿಣವು ತೇವಾಂಶದೊಂದಿಗೆ ಪ್ರತಿಕ್ರಿಯಿಸಿ, ತುಕ್ಕನ್ನು ಉತ್ಪಾದಿಸುತ್ತದೆ.

ಕಬ್ಬಿಣದ ಪಾತ್ರೆಗಳಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ತಕ್ಷಣವೇ ಬೇರೆ ಯಾವುದೇ ಪಾತ್ರೆಗೆ, ವಿಶೇಷವಾಗಿ ಗಾಜಿನ ಪಾತ್ರೆಗೆ ವರ್ಗಾಯಿಸಬೇಕು.

ಹುಳಿ ಅಥವಾ ಆಮ್ಲೀಯ ಆಹಾರಗಳು ಕಬ್ಬಿಣದೊಂದಿಗೆ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕ್ರಿಯೆ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ, ಕಬ್ಬಿಣದ ಪಾತ್ರೆಯಲ್ಲಿ ಕರಿ, ರಸಂ, ಸಾಂಬಾರ್, ಟೊಮೆಟೊಗಳಿಂದ ಮಾಡಿದ ಆಹಾರವನ್ನು ತಯಾರಿಸಬಾರದು.

ಕಬ್ಬಿಣದ ಪಾತ್ರೆಗಳನ್ನು ತೊಳೆದು ತಕ್ಷಣ ಒರೆಸಬೇಕು. ಒರಟಾದ ಸ್ಕ್ರಬ್ಬರ್ ಬಳಸಬೇಡಿ. ಪಾತ್ರೆಗಳನ್ನು ಯಾವಾಗಲೂ ಸ್ವಚ್ಛ ಮತ್ತು ಶುಷ್ಕ ಸ್ಥಳದಲ್ಲಿ ಇರಿಸಿ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »