TOP STORIES:

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ


ಹಿಂದೆ ಜನರು ಕಬ್ಬಿಣದ ಪಾತ್ರೆಗಳನ್ನು ಹೆಚ್ಚು ಬಳಸುತ್ತಿದ್ದರು. ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಾರುಕಟ್ಟೆಗೆ, ಉಕ್ಕು, ನಾನ್ ಸ್ಟಿಕ್ ಸೇರಿದಂತೆ ನಾನಾ ಬಗೆಯ ಪಾತ್ರೆಗಳು ಲಗ್ಗೆಯಿಟ್ಟಿವೆ. ಆದ್ರೆ ಹಿಂದಿನ ಕಾಲದಲ್ಲಿ ಬಳಸ್ತಿದ್ದ ಕಬ್ಬಿಣದ ಪಾತ್ರೆಯಷ್ಟು ಉತ್ತಮವಾದ ಪಾತ್ರೆ ಯಾವುದೂ ಇಲ್ಲ.


ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಕಬ್ಬಿಣದ ಪಾತ್ರೆಗಳಲ್ಲಿ ಆಹಾರವನ್ನು ಬೇಯಿಸಿ ತಿಂದರೆ, ದೇಹದಲ್ಲಿ ಕಬ್ಬಿಣದ ಸಮಸ್ಯೆ ಎದುರಾಗುವುದಿಲ್ಲ. ಇದು ಆರೋಗ್ಯ ವೃದ್ಧಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ. ಕಬ್ಬಿಣದ ಪಾತ್ರೆಯನ್ನು ಅಡುಗೆಯಲ್ಲಿ ಸರಿಯಾಗಿ ಬಳಸಿದರೆ, ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಕಾಪಾಡಬಹುದೆಂದು ವರದಿಯಲ್ಲಿ ಹೇಳಲಾಗಿದೆ.

ಕಬ್ಬಿಣದ ಪಾತ್ರೆಯಲ್ಲಿ ಯಾವುದೇ ಆಹಾರವನ್ನು ನೀವು ತಯಾರಿಸಬಹುದು. ಹೆಚ್ಚು ಹುಳಿ ಪದಾರ್ಥಗಳನ್ನು ಬೇಯಿಸಬಾರದು. ಕಬ್ಬಿಣದ ತವಾದಲ್ಲಿ ರೊಟ್ಟಿ, ಚಪಾತಿ, ದೋಸೆಯನ್ನು ಬೇಯಿಸಿ ಸೇವನೆ ಮಾಡಬಹುದು. ಇದು ಆಹಾರದಲ್ಲಿ ಕಬ್ಬಿಣದ ಗುಣಗಳನ್ನು ಹೆಚ್ಚಿಸುವುದಲ್ಲದೆ, ಸುವಾಸನೆಯನ್ನು ಹೆಚ್ಚಿಸುತ್ತದೆ.

ನೀರು ಅಥವಾ ಯಾವುದೇ ಇತರ ಪಾನೀಯವನ್ನು ಕಬ್ಬಿಣದ ಪಾತ್ರೆಗಳಲ್ಲಿ ಇಡಬಾರದು. ಕಬ್ಬಿಣವು ತೇವಾಂಶದೊಂದಿಗೆ ಪ್ರತಿಕ್ರಿಯಿಸಿ, ತುಕ್ಕನ್ನು ಉತ್ಪಾದಿಸುತ್ತದೆ.

ಕಬ್ಬಿಣದ ಪಾತ್ರೆಗಳಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ತಕ್ಷಣವೇ ಬೇರೆ ಯಾವುದೇ ಪಾತ್ರೆಗೆ, ವಿಶೇಷವಾಗಿ ಗಾಜಿನ ಪಾತ್ರೆಗೆ ವರ್ಗಾಯಿಸಬೇಕು.

ಹುಳಿ ಅಥವಾ ಆಮ್ಲೀಯ ಆಹಾರಗಳು ಕಬ್ಬಿಣದೊಂದಿಗೆ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕ್ರಿಯೆ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ, ಕಬ್ಬಿಣದ ಪಾತ್ರೆಯಲ್ಲಿ ಕರಿ, ರಸಂ, ಸಾಂಬಾರ್, ಟೊಮೆಟೊಗಳಿಂದ ಮಾಡಿದ ಆಹಾರವನ್ನು ತಯಾರಿಸಬಾರದು.

ಕಬ್ಬಿಣದ ಪಾತ್ರೆಗಳನ್ನು ತೊಳೆದು ತಕ್ಷಣ ಒರೆಸಬೇಕು. ಒರಟಾದ ಸ್ಕ್ರಬ್ಬರ್ ಬಳಸಬೇಡಿ. ಪಾತ್ರೆಗಳನ್ನು ಯಾವಾಗಲೂ ಸ್ವಚ್ಛ ಮತ್ತು ಶುಷ್ಕ ಸ್ಥಳದಲ್ಲಿ ಇರಿಸಿ.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »