TOP STORIES:

FOLLOW US

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ


ಹಿಂದೆ ಜನರು ಕಬ್ಬಿಣದ ಪಾತ್ರೆಗಳನ್ನು ಹೆಚ್ಚು ಬಳಸುತ್ತಿದ್ದರು. ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಾರುಕಟ್ಟೆಗೆ, ಉಕ್ಕು, ನಾನ್ ಸ್ಟಿಕ್ ಸೇರಿದಂತೆ ನಾನಾ ಬಗೆಯ ಪಾತ್ರೆಗಳು ಲಗ್ಗೆಯಿಟ್ಟಿವೆ. ಆದ್ರೆ ಹಿಂದಿನ ಕಾಲದಲ್ಲಿ ಬಳಸ್ತಿದ್ದ ಕಬ್ಬಿಣದ ಪಾತ್ರೆಯಷ್ಟು ಉತ್ತಮವಾದ ಪಾತ್ರೆ ಯಾವುದೂ ಇಲ್ಲ.


ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಕಬ್ಬಿಣದ ಪಾತ್ರೆಗಳಲ್ಲಿ ಆಹಾರವನ್ನು ಬೇಯಿಸಿ ತಿಂದರೆ, ದೇಹದಲ್ಲಿ ಕಬ್ಬಿಣದ ಸಮಸ್ಯೆ ಎದುರಾಗುವುದಿಲ್ಲ. ಇದು ಆರೋಗ್ಯ ವೃದ್ಧಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ. ಕಬ್ಬಿಣದ ಪಾತ್ರೆಯನ್ನು ಅಡುಗೆಯಲ್ಲಿ ಸರಿಯಾಗಿ ಬಳಸಿದರೆ, ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಕಾಪಾಡಬಹುದೆಂದು ವರದಿಯಲ್ಲಿ ಹೇಳಲಾಗಿದೆ.

ಕಬ್ಬಿಣದ ಪಾತ್ರೆಯಲ್ಲಿ ಯಾವುದೇ ಆಹಾರವನ್ನು ನೀವು ತಯಾರಿಸಬಹುದು. ಹೆಚ್ಚು ಹುಳಿ ಪದಾರ್ಥಗಳನ್ನು ಬೇಯಿಸಬಾರದು. ಕಬ್ಬಿಣದ ತವಾದಲ್ಲಿ ರೊಟ್ಟಿ, ಚಪಾತಿ, ದೋಸೆಯನ್ನು ಬೇಯಿಸಿ ಸೇವನೆ ಮಾಡಬಹುದು. ಇದು ಆಹಾರದಲ್ಲಿ ಕಬ್ಬಿಣದ ಗುಣಗಳನ್ನು ಹೆಚ್ಚಿಸುವುದಲ್ಲದೆ, ಸುವಾಸನೆಯನ್ನು ಹೆಚ್ಚಿಸುತ್ತದೆ.

ನೀರು ಅಥವಾ ಯಾವುದೇ ಇತರ ಪಾನೀಯವನ್ನು ಕಬ್ಬಿಣದ ಪಾತ್ರೆಗಳಲ್ಲಿ ಇಡಬಾರದು. ಕಬ್ಬಿಣವು ತೇವಾಂಶದೊಂದಿಗೆ ಪ್ರತಿಕ್ರಿಯಿಸಿ, ತುಕ್ಕನ್ನು ಉತ್ಪಾದಿಸುತ್ತದೆ.

ಕಬ್ಬಿಣದ ಪಾತ್ರೆಗಳಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ತಕ್ಷಣವೇ ಬೇರೆ ಯಾವುದೇ ಪಾತ್ರೆಗೆ, ವಿಶೇಷವಾಗಿ ಗಾಜಿನ ಪಾತ್ರೆಗೆ ವರ್ಗಾಯಿಸಬೇಕು.

ಹುಳಿ ಅಥವಾ ಆಮ್ಲೀಯ ಆಹಾರಗಳು ಕಬ್ಬಿಣದೊಂದಿಗೆ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕ್ರಿಯೆ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ, ಕಬ್ಬಿಣದ ಪಾತ್ರೆಯಲ್ಲಿ ಕರಿ, ರಸಂ, ಸಾಂಬಾರ್, ಟೊಮೆಟೊಗಳಿಂದ ಮಾಡಿದ ಆಹಾರವನ್ನು ತಯಾರಿಸಬಾರದು.

ಕಬ್ಬಿಣದ ಪಾತ್ರೆಗಳನ್ನು ತೊಳೆದು ತಕ್ಷಣ ಒರೆಸಬೇಕು. ಒರಟಾದ ಸ್ಕ್ರಬ್ಬರ್ ಬಳಸಬೇಡಿ. ಪಾತ್ರೆಗಳನ್ನು ಯಾವಾಗಲೂ ಸ್ವಚ್ಛ ಮತ್ತು ಶುಷ್ಕ ಸ್ಥಳದಲ್ಲಿ ಇರಿಸಿ.


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »