TOP STORIES:

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ


ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ ಯು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಇಲ್ಲಿ ನೆರವೇರಿತು.

ಯುವವಾಹಿನಿ (ರಿ.)ಕೊಲ್ಯ ಘಟಕವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 167 ನೇ ಜನ್ಮ ಜಯಂತಿಯ ಅಂಗವಾಗಿ ಅಂತರ್ಜಾಲದಲ್ಲಿ ಏಪರ್ಡಿಸಿದ ಗುರುಶ್ಲೋಕ ಕಂಠಪಾಠ,ಗಾಯನ ಸ್ಪರ್ಧೆ “ಶ್ರೀ ಗುರುಶೃತಿ-2021” ಇದರ ಬಹುಮಾನ ವಿತರಣಾ ಸಮಾರಂಭವು ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.

ಸಭಾಕಾರ್ಯಕ್ರಮ ವನ್ನು ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಇವರು ಉದ್ಘಾಟಿಸಿ ಮಾತನಾಡಿದರು ಹಾಗೂ ಸಭಾಧ್ಯಕ್ಷತೆಯನ್ನು ಯುವವಾಹಿನಿ(ರಿ.)ಕೊಲ್ಯ ಘಟಕದ ಅಧ್ಯಕ್ಷರಾದ ಮೋಹನ್ ಮಾಡೂರು ವಹಿಸಿದ್ದರು.

ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಜಗದೀಶ್ಚಂದ್ರ ಡಿ.ಕೆ ಮೂಡುಬಿದಿರೆ ಮತ್ತು ಯುವಸಿಂಚನ ಪತ್ರಿಕೆಯ ಸಂಪಾದಕ ದೇವರಾಜ್ ಅಮೀನ್ ಬಜ್ಪೆ ಅತಿಥಿಗಳಾಗಿ ಭಾಗವಹಿಸಿದ್ದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆನಂದ ಮಲಯಾಳಕೋಡಿ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ, ಸಮಿತಿಯ ಅಧ್ಯಕ್ಷರು ಪದ್ಮನಾಭ ಕೊಲ್ಯ,ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಶ್ರೀಮತಿ ಅರ್ಚನಾ.ಎಂ.ಬಂಗೇರ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕುಸುಮ ಭರತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

“ಗುರುಶೃತಿ-2021” ಸ್ಪರ್ಧೆಯು ಕ್ರಮವಾಗಿ ಮೂರು ವಿಭಾಗಗಳಲ್ಲಿ ಆಯೋಜನೆಗೊಂಡಿದ್ದು ವಿವಿಧ ಸಮಾಜದ ಬಂಧುಗಳು ಜಾತಿ ಮತ ಭೇದವಿಲ್ಲದೆ ಭಾಗವಹಿಸಿ, ದೂರದ ಊರು ಶಿವಮೊಗ್ಗ, ವಿರಾಜ್ ಪೇಟೆ ಹಾಗೂ ನಮ್ಮೂರಿನ ಪ್ರತಿಭೆಗಳು ಈ ಸ್ಪರ್ಧೆಯಲ್ಲಿ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು.

ಸ್ಪರ್ಧೆಯಲ್ಲಿ ನ್ಯಾಯಯುತ ತೀರ್ಪು ನೀಡಿ ಸಹಕರಿಸಿದ ಯುವ ಸಾಹಿತಿ ಡಾ.ಅರುಣ್ ಉಳ್ಳಾಲ್ ಮತ್ತು ಶಿಕ್ಷಕಿ,ಸಾಹಿತಿ ವಿಜಯಲಕ್ಷ್ಮಿ ಕಟೀಲು ಹಾಗೂ ಸಾಹಿತಿ ರಮಾನಾಥ ಕೋಟೆಕಾರು ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಹಲವು ವರ್ಷಗಳಿಂದ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಪೂಜಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಪುರುಷೋತ್ತಮ ಅಡ್ಕ,,,ಗೋಪಾಲ ಕೊಂಡಾಣ ಹಾಗೂ ಮಾಧವ ಪರ್ಯತ್ತೂರು ಇವರನ್ನು ಗುರುತಿಸಿ ವೇದಿಕೆಯಲ್ಲಿ ಗಣ್ಯರ ಸಮಕ್ಷಮದಲ್ಲಿ ಘಟಕದ ವತಿಯಿಂದ ಗೌರವಿಸಲಾಯಿತು.

ಶ್ರೀಮತಿ ವತ್ಸಲಾ ರಘುರಾಮ್ ಶ್ರೀಮತಿ ವಿನುತ ಬಾಲಕೃಷ್ಣ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುಂದರ ಸುವರ್ಣ ಸ್ವಾಗತಿಸಿ,ಪ್ರಾಸ್ತಾವಿಸಿದರು.
ಕಾರ್ಯದರ್ಶಿ ಶಿರಲ್ ಕೊಲ್ಯ ವಂದಿಸಿದರು.ಸುಧಾ ಸುರೇಶ್ ಕೊಲ್ಯ,ಲತೀಶ್ ಎಂ.ಸಂಕೊಳಿಗೆ,ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »