TOP STORIES:

FOLLOW US

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ


ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ ಯು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಇಲ್ಲಿ ನೆರವೇರಿತು.

ಯುವವಾಹಿನಿ (ರಿ.)ಕೊಲ್ಯ ಘಟಕವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 167 ನೇ ಜನ್ಮ ಜಯಂತಿಯ ಅಂಗವಾಗಿ ಅಂತರ್ಜಾಲದಲ್ಲಿ ಏಪರ್ಡಿಸಿದ ಗುರುಶ್ಲೋಕ ಕಂಠಪಾಠ,ಗಾಯನ ಸ್ಪರ್ಧೆ “ಶ್ರೀ ಗುರುಶೃತಿ-2021” ಇದರ ಬಹುಮಾನ ವಿತರಣಾ ಸಮಾರಂಭವು ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.

ಸಭಾಕಾರ್ಯಕ್ರಮ ವನ್ನು ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಇವರು ಉದ್ಘಾಟಿಸಿ ಮಾತನಾಡಿದರು ಹಾಗೂ ಸಭಾಧ್ಯಕ್ಷತೆಯನ್ನು ಯುವವಾಹಿನಿ(ರಿ.)ಕೊಲ್ಯ ಘಟಕದ ಅಧ್ಯಕ್ಷರಾದ ಮೋಹನ್ ಮಾಡೂರು ವಹಿಸಿದ್ದರು.

ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಜಗದೀಶ್ಚಂದ್ರ ಡಿ.ಕೆ ಮೂಡುಬಿದಿರೆ ಮತ್ತು ಯುವಸಿಂಚನ ಪತ್ರಿಕೆಯ ಸಂಪಾದಕ ದೇವರಾಜ್ ಅಮೀನ್ ಬಜ್ಪೆ ಅತಿಥಿಗಳಾಗಿ ಭಾಗವಹಿಸಿದ್ದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆನಂದ ಮಲಯಾಳಕೋಡಿ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ, ಸಮಿತಿಯ ಅಧ್ಯಕ್ಷರು ಪದ್ಮನಾಭ ಕೊಲ್ಯ,ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಶ್ರೀಮತಿ ಅರ್ಚನಾ.ಎಂ.ಬಂಗೇರ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕುಸುಮ ಭರತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

“ಗುರುಶೃತಿ-2021” ಸ್ಪರ್ಧೆಯು ಕ್ರಮವಾಗಿ ಮೂರು ವಿಭಾಗಗಳಲ್ಲಿ ಆಯೋಜನೆಗೊಂಡಿದ್ದು ವಿವಿಧ ಸಮಾಜದ ಬಂಧುಗಳು ಜಾತಿ ಮತ ಭೇದವಿಲ್ಲದೆ ಭಾಗವಹಿಸಿ, ದೂರದ ಊರು ಶಿವಮೊಗ್ಗ, ವಿರಾಜ್ ಪೇಟೆ ಹಾಗೂ ನಮ್ಮೂರಿನ ಪ್ರತಿಭೆಗಳು ಈ ಸ್ಪರ್ಧೆಯಲ್ಲಿ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು.

ಸ್ಪರ್ಧೆಯಲ್ಲಿ ನ್ಯಾಯಯುತ ತೀರ್ಪು ನೀಡಿ ಸಹಕರಿಸಿದ ಯುವ ಸಾಹಿತಿ ಡಾ.ಅರುಣ್ ಉಳ್ಳಾಲ್ ಮತ್ತು ಶಿಕ್ಷಕಿ,ಸಾಹಿತಿ ವಿಜಯಲಕ್ಷ್ಮಿ ಕಟೀಲು ಹಾಗೂ ಸಾಹಿತಿ ರಮಾನಾಥ ಕೋಟೆಕಾರು ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಹಲವು ವರ್ಷಗಳಿಂದ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಪೂಜಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಪುರುಷೋತ್ತಮ ಅಡ್ಕ,,,ಗೋಪಾಲ ಕೊಂಡಾಣ ಹಾಗೂ ಮಾಧವ ಪರ್ಯತ್ತೂರು ಇವರನ್ನು ಗುರುತಿಸಿ ವೇದಿಕೆಯಲ್ಲಿ ಗಣ್ಯರ ಸಮಕ್ಷಮದಲ್ಲಿ ಘಟಕದ ವತಿಯಿಂದ ಗೌರವಿಸಲಾಯಿತು.

ಶ್ರೀಮತಿ ವತ್ಸಲಾ ರಘುರಾಮ್ ಶ್ರೀಮತಿ ವಿನುತ ಬಾಲಕೃಷ್ಣ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುಂದರ ಸುವರ್ಣ ಸ್ವಾಗತಿಸಿ,ಪ್ರಾಸ್ತಾವಿಸಿದರು.
ಕಾರ್ಯದರ್ಶಿ ಶಿರಲ್ ಕೊಲ್ಯ ವಂದಿಸಿದರು.ಸುಧಾ ಸುರೇಶ್ ಕೊಲ್ಯ,ಲತೀಶ್ ಎಂ.ಸಂಕೊಳಿಗೆ,ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »