TOP STORIES:

FOLLOW US

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ


ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ ಯು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಇಲ್ಲಿ ನೆರವೇರಿತು.

ಯುವವಾಹಿನಿ (ರಿ.)ಕೊಲ್ಯ ಘಟಕವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 167 ನೇ ಜನ್ಮ ಜಯಂತಿಯ ಅಂಗವಾಗಿ ಅಂತರ್ಜಾಲದಲ್ಲಿ ಏಪರ್ಡಿಸಿದ ಗುರುಶ್ಲೋಕ ಕಂಠಪಾಠ,ಗಾಯನ ಸ್ಪರ್ಧೆ “ಶ್ರೀ ಗುರುಶೃತಿ-2021” ಇದರ ಬಹುಮಾನ ವಿತರಣಾ ಸಮಾರಂಭವು ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.

ಸಭಾಕಾರ್ಯಕ್ರಮ ವನ್ನು ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಇವರು ಉದ್ಘಾಟಿಸಿ ಮಾತನಾಡಿದರು ಹಾಗೂ ಸಭಾಧ್ಯಕ್ಷತೆಯನ್ನು ಯುವವಾಹಿನಿ(ರಿ.)ಕೊಲ್ಯ ಘಟಕದ ಅಧ್ಯಕ್ಷರಾದ ಮೋಹನ್ ಮಾಡೂರು ವಹಿಸಿದ್ದರು.

ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಜಗದೀಶ್ಚಂದ್ರ ಡಿ.ಕೆ ಮೂಡುಬಿದಿರೆ ಮತ್ತು ಯುವಸಿಂಚನ ಪತ್ರಿಕೆಯ ಸಂಪಾದಕ ದೇವರಾಜ್ ಅಮೀನ್ ಬಜ್ಪೆ ಅತಿಥಿಗಳಾಗಿ ಭಾಗವಹಿಸಿದ್ದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆನಂದ ಮಲಯಾಳಕೋಡಿ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ, ಸಮಿತಿಯ ಅಧ್ಯಕ್ಷರು ಪದ್ಮನಾಭ ಕೊಲ್ಯ,ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಶ್ರೀಮತಿ ಅರ್ಚನಾ.ಎಂ.ಬಂಗೇರ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕುಸುಮ ಭರತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

“ಗುರುಶೃತಿ-2021” ಸ್ಪರ್ಧೆಯು ಕ್ರಮವಾಗಿ ಮೂರು ವಿಭಾಗಗಳಲ್ಲಿ ಆಯೋಜನೆಗೊಂಡಿದ್ದು ವಿವಿಧ ಸಮಾಜದ ಬಂಧುಗಳು ಜಾತಿ ಮತ ಭೇದವಿಲ್ಲದೆ ಭಾಗವಹಿಸಿ, ದೂರದ ಊರು ಶಿವಮೊಗ್ಗ, ವಿರಾಜ್ ಪೇಟೆ ಹಾಗೂ ನಮ್ಮೂರಿನ ಪ್ರತಿಭೆಗಳು ಈ ಸ್ಪರ್ಧೆಯಲ್ಲಿ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು.

ಸ್ಪರ್ಧೆಯಲ್ಲಿ ನ್ಯಾಯಯುತ ತೀರ್ಪು ನೀಡಿ ಸಹಕರಿಸಿದ ಯುವ ಸಾಹಿತಿ ಡಾ.ಅರುಣ್ ಉಳ್ಳಾಲ್ ಮತ್ತು ಶಿಕ್ಷಕಿ,ಸಾಹಿತಿ ವಿಜಯಲಕ್ಷ್ಮಿ ಕಟೀಲು ಹಾಗೂ ಸಾಹಿತಿ ರಮಾನಾಥ ಕೋಟೆಕಾರು ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಹಲವು ವರ್ಷಗಳಿಂದ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಪೂಜಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಪುರುಷೋತ್ತಮ ಅಡ್ಕ,,,ಗೋಪಾಲ ಕೊಂಡಾಣ ಹಾಗೂ ಮಾಧವ ಪರ್ಯತ್ತೂರು ಇವರನ್ನು ಗುರುತಿಸಿ ವೇದಿಕೆಯಲ್ಲಿ ಗಣ್ಯರ ಸಮಕ್ಷಮದಲ್ಲಿ ಘಟಕದ ವತಿಯಿಂದ ಗೌರವಿಸಲಾಯಿತು.

ಶ್ರೀಮತಿ ವತ್ಸಲಾ ರಘುರಾಮ್ ಶ್ರೀಮತಿ ವಿನುತ ಬಾಲಕೃಷ್ಣ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುಂದರ ಸುವರ್ಣ ಸ್ವಾಗತಿಸಿ,ಪ್ರಾಸ್ತಾವಿಸಿದರು.
ಕಾರ್ಯದರ್ಶಿ ಶಿರಲ್ ಕೊಲ್ಯ ವಂದಿಸಿದರು.ಸುಧಾ ಸುರೇಶ್ ಕೊಲ್ಯ,ಲತೀಶ್ ಎಂ.ಸಂಕೊಳಿಗೆ,ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »