TOP STORIES:

FOLLOW US

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ


ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ ಯು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಇಲ್ಲಿ ನೆರವೇರಿತು.

ಯುವವಾಹಿನಿ (ರಿ.)ಕೊಲ್ಯ ಘಟಕವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 167 ನೇ ಜನ್ಮ ಜಯಂತಿಯ ಅಂಗವಾಗಿ ಅಂತರ್ಜಾಲದಲ್ಲಿ ಏಪರ್ಡಿಸಿದ ಗುರುಶ್ಲೋಕ ಕಂಠಪಾಠ,ಗಾಯನ ಸ್ಪರ್ಧೆ “ಶ್ರೀ ಗುರುಶೃತಿ-2021” ಇದರ ಬಹುಮಾನ ವಿತರಣಾ ಸಮಾರಂಭವು ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.

ಸಭಾಕಾರ್ಯಕ್ರಮ ವನ್ನು ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಇವರು ಉದ್ಘಾಟಿಸಿ ಮಾತನಾಡಿದರು ಹಾಗೂ ಸಭಾಧ್ಯಕ್ಷತೆಯನ್ನು ಯುವವಾಹಿನಿ(ರಿ.)ಕೊಲ್ಯ ಘಟಕದ ಅಧ್ಯಕ್ಷರಾದ ಮೋಹನ್ ಮಾಡೂರು ವಹಿಸಿದ್ದರು.

ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಜಗದೀಶ್ಚಂದ್ರ ಡಿ.ಕೆ ಮೂಡುಬಿದಿರೆ ಮತ್ತು ಯುವಸಿಂಚನ ಪತ್ರಿಕೆಯ ಸಂಪಾದಕ ದೇವರಾಜ್ ಅಮೀನ್ ಬಜ್ಪೆ ಅತಿಥಿಗಳಾಗಿ ಭಾಗವಹಿಸಿದ್ದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆನಂದ ಮಲಯಾಳಕೋಡಿ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ, ಸಮಿತಿಯ ಅಧ್ಯಕ್ಷರು ಪದ್ಮನಾಭ ಕೊಲ್ಯ,ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಶ್ರೀಮತಿ ಅರ್ಚನಾ.ಎಂ.ಬಂಗೇರ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕುಸುಮ ಭರತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

“ಗುರುಶೃತಿ-2021” ಸ್ಪರ್ಧೆಯು ಕ್ರಮವಾಗಿ ಮೂರು ವಿಭಾಗಗಳಲ್ಲಿ ಆಯೋಜನೆಗೊಂಡಿದ್ದು ವಿವಿಧ ಸಮಾಜದ ಬಂಧುಗಳು ಜಾತಿ ಮತ ಭೇದವಿಲ್ಲದೆ ಭಾಗವಹಿಸಿ, ದೂರದ ಊರು ಶಿವಮೊಗ್ಗ, ವಿರಾಜ್ ಪೇಟೆ ಹಾಗೂ ನಮ್ಮೂರಿನ ಪ್ರತಿಭೆಗಳು ಈ ಸ್ಪರ್ಧೆಯಲ್ಲಿ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು.

ಸ್ಪರ್ಧೆಯಲ್ಲಿ ನ್ಯಾಯಯುತ ತೀರ್ಪು ನೀಡಿ ಸಹಕರಿಸಿದ ಯುವ ಸಾಹಿತಿ ಡಾ.ಅರುಣ್ ಉಳ್ಳಾಲ್ ಮತ್ತು ಶಿಕ್ಷಕಿ,ಸಾಹಿತಿ ವಿಜಯಲಕ್ಷ್ಮಿ ಕಟೀಲು ಹಾಗೂ ಸಾಹಿತಿ ರಮಾನಾಥ ಕೋಟೆಕಾರು ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಹಲವು ವರ್ಷಗಳಿಂದ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಪೂಜಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಪುರುಷೋತ್ತಮ ಅಡ್ಕ,,,ಗೋಪಾಲ ಕೊಂಡಾಣ ಹಾಗೂ ಮಾಧವ ಪರ್ಯತ್ತೂರು ಇವರನ್ನು ಗುರುತಿಸಿ ವೇದಿಕೆಯಲ್ಲಿ ಗಣ್ಯರ ಸಮಕ್ಷಮದಲ್ಲಿ ಘಟಕದ ವತಿಯಿಂದ ಗೌರವಿಸಲಾಯಿತು.

ಶ್ರೀಮತಿ ವತ್ಸಲಾ ರಘುರಾಮ್ ಶ್ರೀಮತಿ ವಿನುತ ಬಾಲಕೃಷ್ಣ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುಂದರ ಸುವರ್ಣ ಸ್ವಾಗತಿಸಿ,ಪ್ರಾಸ್ತಾವಿಸಿದರು.
ಕಾರ್ಯದರ್ಶಿ ಶಿರಲ್ ಕೊಲ್ಯ ವಂದಿಸಿದರು.ಸುಧಾ ಸುರೇಶ್ ಕೊಲ್ಯ,ಲತೀಶ್ ಎಂ.ಸಂಕೊಳಿಗೆ,ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »