TOP STORIES:

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ


ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ ಯು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಇಲ್ಲಿ ನೆರವೇರಿತು.

ಯುವವಾಹಿನಿ (ರಿ.)ಕೊಲ್ಯ ಘಟಕವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 167 ನೇ ಜನ್ಮ ಜಯಂತಿಯ ಅಂಗವಾಗಿ ಅಂತರ್ಜಾಲದಲ್ಲಿ ಏಪರ್ಡಿಸಿದ ಗುರುಶ್ಲೋಕ ಕಂಠಪಾಠ,ಗಾಯನ ಸ್ಪರ್ಧೆ “ಶ್ರೀ ಗುರುಶೃತಿ-2021” ಇದರ ಬಹುಮಾನ ವಿತರಣಾ ಸಮಾರಂಭವು ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.

ಸಭಾಕಾರ್ಯಕ್ರಮ ವನ್ನು ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಇವರು ಉದ್ಘಾಟಿಸಿ ಮಾತನಾಡಿದರು ಹಾಗೂ ಸಭಾಧ್ಯಕ್ಷತೆಯನ್ನು ಯುವವಾಹಿನಿ(ರಿ.)ಕೊಲ್ಯ ಘಟಕದ ಅಧ್ಯಕ್ಷರಾದ ಮೋಹನ್ ಮಾಡೂರು ವಹಿಸಿದ್ದರು.

ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಜಗದೀಶ್ಚಂದ್ರ ಡಿ.ಕೆ ಮೂಡುಬಿದಿರೆ ಮತ್ತು ಯುವಸಿಂಚನ ಪತ್ರಿಕೆಯ ಸಂಪಾದಕ ದೇವರಾಜ್ ಅಮೀನ್ ಬಜ್ಪೆ ಅತಿಥಿಗಳಾಗಿ ಭಾಗವಹಿಸಿದ್ದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆನಂದ ಮಲಯಾಳಕೋಡಿ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ, ಸಮಿತಿಯ ಅಧ್ಯಕ್ಷರು ಪದ್ಮನಾಭ ಕೊಲ್ಯ,ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಶ್ರೀಮತಿ ಅರ್ಚನಾ.ಎಂ.ಬಂಗೇರ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕುಸುಮ ಭರತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

“ಗುರುಶೃತಿ-2021” ಸ್ಪರ್ಧೆಯು ಕ್ರಮವಾಗಿ ಮೂರು ವಿಭಾಗಗಳಲ್ಲಿ ಆಯೋಜನೆಗೊಂಡಿದ್ದು ವಿವಿಧ ಸಮಾಜದ ಬಂಧುಗಳು ಜಾತಿ ಮತ ಭೇದವಿಲ್ಲದೆ ಭಾಗವಹಿಸಿ, ದೂರದ ಊರು ಶಿವಮೊಗ್ಗ, ವಿರಾಜ್ ಪೇಟೆ ಹಾಗೂ ನಮ್ಮೂರಿನ ಪ್ರತಿಭೆಗಳು ಈ ಸ್ಪರ್ಧೆಯಲ್ಲಿ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು.

ಸ್ಪರ್ಧೆಯಲ್ಲಿ ನ್ಯಾಯಯುತ ತೀರ್ಪು ನೀಡಿ ಸಹಕರಿಸಿದ ಯುವ ಸಾಹಿತಿ ಡಾ.ಅರುಣ್ ಉಳ್ಳಾಲ್ ಮತ್ತು ಶಿಕ್ಷಕಿ,ಸಾಹಿತಿ ವಿಜಯಲಕ್ಷ್ಮಿ ಕಟೀಲು ಹಾಗೂ ಸಾಹಿತಿ ರಮಾನಾಥ ಕೋಟೆಕಾರು ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಹಲವು ವರ್ಷಗಳಿಂದ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಪೂಜಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಪುರುಷೋತ್ತಮ ಅಡ್ಕ,,,ಗೋಪಾಲ ಕೊಂಡಾಣ ಹಾಗೂ ಮಾಧವ ಪರ್ಯತ್ತೂರು ಇವರನ್ನು ಗುರುತಿಸಿ ವೇದಿಕೆಯಲ್ಲಿ ಗಣ್ಯರ ಸಮಕ್ಷಮದಲ್ಲಿ ಘಟಕದ ವತಿಯಿಂದ ಗೌರವಿಸಲಾಯಿತು.

ಶ್ರೀಮತಿ ವತ್ಸಲಾ ರಘುರಾಮ್ ಶ್ರೀಮತಿ ವಿನುತ ಬಾಲಕೃಷ್ಣ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುಂದರ ಸುವರ್ಣ ಸ್ವಾಗತಿಸಿ,ಪ್ರಾಸ್ತಾವಿಸಿದರು.
ಕಾರ್ಯದರ್ಶಿ ಶಿರಲ್ ಕೊಲ್ಯ ವಂದಿಸಿದರು.ಸುಧಾ ಸುರೇಶ್ ಕೊಲ್ಯ,ಲತೀಶ್ ಎಂ.ಸಂಕೊಳಿಗೆ,ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »