TOP STORIES:

ನಮ್ಮ ಸಂಘಟನೆಗಳಲ್ಲಿ ನಮ್ಮವರಿಗಾಗಿ ದುಡಿಯುವ ಮನಸ್ಥಿತಿಯೊಂದಿಗೆ ನಮ್ಮಲ್ಲಿ ಪಕ್ಷಕ್ಕಿಂತ ಸಂಘ-ಸಂಸ್ಥೆಗಳ ಮೇಲೂ ಕಾಳಜಿಯಿರಲಿ…


ಬಿಲ್ಲವ ಸಮಾಜದಲ್ಲಿ ಯಾವುದೇ ವಿಷಯ ಪ್ರಸ್ತಾಪವಾದಾಗ ಪಕ್ಷ ಕೇಂದ್ರಿತವಾಗಿ ನೋಡುವ ಜಾಯಮಾನವಿದೆ. ಜಾತಿ ಆಧಾರಿತ ಬಿಲ್ಲವ ಸಂಘಗಳು ಇದಕ್ಕೆ ಹೊರತಾಗಿಲ್ಲ. ಇದು ನಮ್ಮ ದುರಂತ. ಬಹುಷ: ಬಿಲ್ಲವರಲ್ಲಿ ಇಂದು ಸಂಖ್ಯಾ ಬಲವಿದೆ ಎಂದು ಡಂಗುರ ಸಾರಿದರೂ ಬುದ್ಧಿ ಬಲ ಅರ್ಥಾತ್ ಯೋಚನೆ, ಯೋಜನೆಯಲ್ಲಿ ವಿಫಲರಾಗುತ್ತಿದ್ದಾರೆ.

ನಾರಾಯಣ ಗುರುಗಳ ಸಂದೇಶವಿದೆ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿ ಎಂದು. ಹೌದು, ವಿದ್ಯೆಯಿಂದ ನಾವು ಸ್ವತಂತ್ರರಾಗುವ ಬದಲು ನಮ್ಮ ಸ್ವಾತಂತ್ರ್ಯವನ್ನು ಪರರಿಗೆ ಧಾರೆ ಎರೆದು ಪರರ ತಂತ್ರಕ್ಕೆ ಬಲಿಯಾಗುತ್ತಿದ್ದೇವೆ. ಸಂಘಟನೆಗಳು ಬಲವ ತುಂಬುವ ಬದಲು ಹಲವು ಆಗುತ್ತಿದೆ. ಕೆಲವರ ಪ್ರಕಾರ ಸಂಘಟನೆಗಳು ಹೆಚ್ಚಾಗಬೇಕು ಅದರಿಂದ ಸಮಾಜಕ್ಕೆ ಪ್ರಯೋಜನವಿದೆ. ಹೆಚ್ಚಾಗಲಿ ಒಳ್ಳೆಯದು ಆದರೆ ನಮ್ಮ ಸಂಘಟನೆಗಳು ನಮ್ಮ ಸಮಾಜವನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಔದ್ಯೋಗಿಕವಾಗಿ ಸಧೃಡವಾಗಿಸಲು ಸಹಕಾರಿಯಾಗಿರಬೇಕು. ಆ ಮೂಲಕ ಸಮಾಜದ ಹಿತಚಿಂತನೆಯ ಗುರಿ ಇರಬೇಕು.

ಜಾತಿಗಳು ಧರ್ಮದೊಳಗಿನ ಬಳ್ಳಿಗಳು. ಧರ್ಮ ನಮ್ಮೆಲ್ಲರಿಗೂ ಬೇಕು. ಆದರೆ ಅದು ಕೇವಲ ಬಿಲ್ಲವರಿಗಾಗಿ ಮಾತ್ರವೇ ಎಂಬ ಪ್ರಶ್ನೆಯನ್ನು ನಾವು ಮಾಡಬೇಕಾಗಿದೆ. ನಮ್ಮಲ್ಲಿ ಧರ್ಮಾಧಾರಿತ ಸಂಘಟನೆಯಲ್ಲಿ ಪ್ರಾಣತೆತ್ತವರಿದ್ದಾರೆ. ಅವರು ಯಾಕೆ ಹೋಗಬೇಕಿತ್ತು ಬೇರೆಯವರು ಇರಲಿಲ್ಲವೇ? ಇತ್ಯಾದಿ ಪ್ರಶ್ನೆಗಳು ಎಲ್ಲರೂ ಕೇಳುತ್ತೇವೆ. ಅದು ಸಾಮಾನ್ಯ. ಆದರೆ ಇದರ ಬಗ್ಗೆ ತಿಳುವಳಿಕೆ ಮೂಡಿಸುವುದು ಅನಿವಾರ್ಯ. ಆದರೆ ನಮ್ಮವ ಎಂಬ ಪ್ರಜ್ಞೆ ನಮ್ಮಲ್ಲಿರಲಿ. ಆ ಮೂಲಕ ಅಲ್ಲಿ ಪಕ್ಷ ನೋಡದೆ ಸಾಂತ್ವನ ಇಲ್ಲವೇ ಅದರ ವಿರುದ್ಧ ಬೇಕಾದ ಕ್ರಮದ ಬಗ್ಗೆ ನಮ್ಮ ಸಂಘಟನೆಗಳು ಮಾಡುತ್ತಿಲ್ಲ. ಎಲ್ಲೋ ಕೆಲವು ಬೆರಳೆಣಿಕೆಯ ಸಂಘಟನೆಗಳು ಅಥವಾ ಸ್ಥಳೀಯ ಬಿಲ್ಲವ ಸಂಘ ಧ್ವನಿ ಎತ್ತುತ್ತವೆ ನಂತರ ಅದಕ್ಕೆ ಸ್ಪಂದನೆಯೂ ಇಲ್ಲ. ಇದಕ್ಕೆ ಮೂಲ ಕಾರಣ ಸಂಘಟನೆಯ ಪ್ರಮುಖರು ಪಕ್ಷದಲ್ಲಿದ್ದಾಗ ಘಟನೆಯು ಕೆಲವೊಮ್ಮೆ ಜಾತಿಗಿಂತ ಪಕ್ಷದ ಮೇಲೆ ನಿಲ್ಲುತ್ತದೆ. ಜಾತಿಗಿಂತ ಪಕ್ಷದ ಚಿಂತನೆಯಿರುವ ವ್ಯಕ್ತಿಯು ಸಂಘಟನೆಯ ಚುಕ್ಕಾಣಿ ಹಿಡಿಯಲು ಅಸಮರ್ಥ ಅಥವಾ ಪಕ್ಷಾತೀತ ವ್ಯಕ್ತಿಗೆ ನಮ್ಮ ಸಂಘಟನೆಯ ಜವಾಬ್ದಾರಿ ವಹಿಸಬೇಕಾಗಿದೆ.

ಇತ್ತೀಚಿನ ಒಂದು ಘಟನೆಯನ್ನು ನೋಡುವುದಾದರೆ ಕಲಾವಿದ ಅರವಿಂದ್ ಬೋಳಾರ್ ಖಾಸಗಿ ವಾಹಿನಿಯಲ್ಲಿ ಜ್ಯೋತಿಷ್ಯ ಪಾತ್ರ ಮಾಡಿದಾಗ ಉಂಟಾದ ಸಮಸ್ಯೆಯ ಸಂದರ್ಭ ಖಾಸಗಿ ವಾಹಿನಿಯ ಬಗ್ಗೆ ಚಕಾರವೆತ್ತದೆ ಓರ್ವ ಕಲಾವಿದನಿಗಾದ ಅವಮಾನ ನಮಗೆ ಗೊತ್ತು. ಈ ಸಮಯದಲ್ಲಿ ನಮ್ಮವರಲ್ಲಿಯೇ ಧರ್ಮ, ಜಾತಿಯ ನಡುವಿನ ವಾದವಿವಾದಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆದಿತ್ತು. ಆದರೆ ನಮ್ಮ ಜಾತಿಯ ಪ್ರಮುಖ ಸಂಘಟನೆಗಳೆನಿಸಿಕೊಂಡವರು ಮೌನವಾಗಿದ್ದರು. ಕಲಾವಿದನಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಲಿಲ್ಲ. ಕೆಲವರು ಮಾಡಿರಬಹುದು. ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಇದಕ್ಕೆ ಕಾರಣವೇ? ಅಥವಾ ಯಾರು ಮುಂದೆ ಹೋಗುತ್ತಾರೆ ನಂತರ ನಾವು ಹೋಗುವ ಎಂಬ ಸೋಗಲಾಡಿತನವೇ ಎಂಬಂತಾಗಿದೆ.
ಇತರ ಜಾತಿಗಳನ್ನು ಕೊಂಡಾಡುವ ನಾವು ಅವರಿಂದ ಸಾಕಷ್ಟು ಕಲಿಯಬೇಕಾಗಿದೆ. ಚುನಾವಣಾ ಸಂದರ್ಭ ಜಾತಿಯ ಪ್ರಮುಖರನ್ನು ಒಗ್ಗೂಡಿಸಿಕೊಂಡು ನಮ್ಮ ಜಾತಿಗೆ ಪ್ರಾತಿನಿಧ್ಯ ಕೊಡಬೇಕು ಎಂಬ ಬೇಡಿಕೆ, ಜಾತಿಗೆ ಬೇಕಾದ ಸವಲತ್ತು ಪಡೆಯಲು ರಾಜ್ಯದ ಮುಖ್ಯಮಂತ್ರಿಯೇನು, ಪ್ರಧಾನಮಂತ್ರಿಯನ್ನೂ ಭೇಟಿಯಾಗಲು ತಾಕತ್ತು ಅವರಲ್ಲಿ ಇರಬೇಕಾದರೆ, ಜನಸಂಖ್ಯೆಯಲ್ಲಿ ಹೆಚ್ಚಿನ ಪ್ರಾಬಲ್ಯವಿದ್ದು, ನಮ್ಮ ಜಾತಿಯ ಮತಗಳೇ ನಿರ್ಣಾಯಕವಾಗಿರುವಾಗ ನಮ್ಮಲ್ಲಿ ತಾಕತ್ತಿಲ್ಲವೇ? ನಮಗೆ ರಾಜಕೀಯ ನಾಯಕರು ಇದ್ದರು ಚುನಾವಣಾ ಸಂದರ್ಭ ನಾರಾಯಣಗುರು ಮಂದಿರದ ಭೇಟಿಯೇನು, ಜಾತಿಯ ಪ್ರಮುಖರ ಭೇಟಿ ಮಾಡುವುದೇನು? ಗೆದ್ದ ನಂತರ ಸರ್ವರೂ ಸಮಾನರು ಎಂಬ ಧೋರಣೆ ಅವರದ್ದು. ಇದು ನಮ್ಮವರಿಗೆ ರಾಜಕೀಯ ನಾಯಕರ ಬಗೆಗಿನ ತಾತ್ಸಾರಕ್ಕೂ ಕಾರಣವಾಗಿದೆ. ನಮ್ಮಲ್ಲಿ ಜಗಜ್ಜಾಹಿರಾಗುವಂತೆ ಜನ ಸೇರಿಸಿ ಅದು ಆಗ ಬೇಕು ಇದಾಗಬೇಕೆನ್ನುತ್ತೇವೆ. ಹೇಳುವುದು ಮಾತ್ರ ಅದರ ಹಿಂದೆ ಹೋಗಿ ಒತ್ತಡ ಹಾಕಲಾರೆವು. ಅದೇ ಇತರ ಜಾತಿಯವರು ಗುಪ್ತವಾಗಿ ಅವರ ನಾಯಕರು ಮಾತ್ರ ಮುಂದೆ ಹೋಗಿ ಸಮಾಜಕ್ಕಾಗಿ ಸರಕಾರಕ್ಕೆ ಒತ್ತಡ ಹಾಕಿ ಬೇಕಾದನ್ನು ಪಡೆಯುತ್ತಾರೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಕಾರ್ಖಾನೆ, ಕಂಪನಿ, ಬ್ಯಾಂಕ್ ಇತ್ಯಾದಿಗಳಿದ್ದರೂ ಅಲ್ಲಿ ಸಿರಿವಂತರಿಗೆ ಮಣೆ. ಕೆಲವು ಜಾತಿ ಪ್ರಮುಖರು ಭಾಷಣಕ್ಕೆ ಜಾತಿ ಜಾತಿ ಎಂದು ಬೊಬ್ಬಿರಿದರು ಉದ್ಯೋಗಕ್ಕಾಗಿ ಹೋದಾಗ ಜಾತಿ ಕಾಣದು.

ಪಕ್ಷ, ಧರ್ಮಗಳಿಗೆ ಜೋತು ಬೀಳುವ ನಾವು ಜಾತಿಗಾಗಿರುವ ಸಂಘಟನೆಯನ್ನು ಸಮರ್ಥವಾಗಿ ಬಳಸುವ. ಇತರೆ ಜಾತಿಗಳು ಜಾತಿ ಮೊದಲು ಧರ್ಮ ನಂತರವೆಂದರೆ ನಾವುಗಳು ಧರ್ಮ ಮೊದಲು ಜಾತಿ ನಂತರ ಎನ್ನುತ್ತೇವೆ. ಇದಕ್ಕೆ ಕಾರಣ ಹುಡುಕಿದಾಗ ಜಾತಿ ಸಂಘಟನೆಗಳಿಂದಾದ ಪ್ರಮಾದ. ಯಾವಾಗ ಜಾತಿ ಸಂಘಟನೆಗಳು ಜಾತಿಗಾಗಿ ದುಡಿಯುವುದಿಲ್ಲವೋ ಆಗ ಯುವ ಮನಸ್ಸುಗಳು ತಮ್ಮನ್ನು ಸೆಳೆಯುವ ಧರ್ಮಾಧಾರಿತ ಸಂಘಟನೆಗಳ ಕಡೆಗೆ ಒಲವು ಹರಿಸುತ್ತಾರೆ. ಒಂದಷ್ಟು ಕಾರ್ಯಕ್ರಮಗಳನ್ನು ಮಾಡಿ, ಪ್ರಚಾರ ಬಯಸುವ ಬದಲು ಪ್ರೌಢ, ಕಾಲೇಜು ಹಂತದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಶಿಕ್ಷಣ, ಉದ್ಯೋಗದ ಬಗ್ಗೆ ಸೂಕ್ತ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಮಾಡಿದಾಗ ನಮ್ಮಲ್ಲಿಯೂ ಬದಲಾವಣೆಯ ಪರ್ವ ಕಾಣಬಹುದು.
ಜಾತಿ ಸಂಘಟನೆಗಳ ಮೂಲಕ ತಮ್ಮ ಬೇಳೆ ಬೇಯಿಸಿಕೊಂಡು ಇತರ ಜಾತಿಯನ್ನು ಅಥವಾ ಪಕ್ಷವನ್ನು ಉದ್ಧರಿಸುವ ಬದಲು ನಮ್ಮವರನ್ನೇ ಉದ್ಧಾರ ಮಾಡುವ. ನಮಗಾಗಿ ದುಡಿಯುವ ಎಂಬ ಧ್ಯೇಯ ನಮ್ಮ ಸ್ಥಳೀಯ ಬಿಲ್ಲವ ಸಂಘಗಳಿಂದ ಹಿಡಿದು ಕೇಂದ್ರ, ರಾಷ್ಟ್ರೀಯ, ಅಖಿಲ ಭಾರತ, ಜಿಲ್ಲೆ, ರಾಜ್ಯ ಇತ್ಯಾದಿ ಹಣೆಪಟ್ಟಿ ಕಟ್ಟಿಕೊಂಡ ನಮ್ಮ ಸಂಘಟನೆಗಳಲ್ಲಿ ಇರಲಿ ಎಂಬುದು ನಮ್ಮೆಲ್ಲರ ಆಶಯ.

 

ಬರಹ: ದೀಪಕ್ ಕೆ ಬೀರ


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »