TOP STORIES:

FOLLOW US

ನಾಡು ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ!! ಎಸ್ ಬಂಗಾರಪ್ಪ ಜನುಮ ದಿನದಂದು ಗೌರವ ಪೂರ್ವಕ ನಮನಗಳು


ಬಂಗಾರಪ್ಪಾಜಿಯವರ ಸ್ಮರಣೋತ್ಸವದ ಅಂಗವಾಗಿ ಈ ಲೇಖನ.

ಎಸ್, ಬಂಗಾರಪ್ಪ ಅಂದರೆ ಸಾರೆಕೊಪ್ಪ ಬಂಗಾರಪ್ಪ ಅಂತ ಅರ್ಥ. ಸಾರೆಕೊಪ್ಪ ಎಂಬುದು ಅಂಚೆ ವಿಳಾಸ.

ಇವರ ಹುಟ್ಟೂರು ಶಿವಮೊಗ್ಗ* ಜಿಲ್ಲೆಯ *ಸೊರಬ* ತಾಲೂಕಿನ *ಕುಬಟೂರು* ಎಂಭ ಕುಗ್ರಾಮ. ಇವರ ತಂದೆಯ ಹೆದರು *ಕಲ್ಲಪ್ಪ.* ಮತ್ತು ತಾಯಿಯ ಹೆಸರು *ಕಲ್ಲಮ್ಮ* ಎಂದು. ಇವರಿಗೆ ಈ ಹೆಸರು ಬರಲು ಕಾರಣ *ಕಾರವಾರ* ಜಿಲ್ಲೆಯ *ಶಿರ್ಶಿ* ತಾಲೂಕಿನ *ಕದಂಭರು* ಆಳಿದ *ಬನವಾಸಿಯ* ಹತ್ತಿರ ಕೇವಲ ಮೂರು ಕಿ.ಮೀ. ದಲ್ಲಿ *ಗುಡ್ನಾಪುರ* ಎಂಬ ಹಳ್ಳಿ ಇದೆ. ಈ ಹಳ್ಳಿಯ ಪಕ್ಕದಲ್ಲಿ *ದೊಡ್ಡದಾದ ಕೆರೆಯೊಂದಿದೆ* ಸದಾ ವರ್ಷವಿಡೀ ನೀರಿನಿಂದ ತುಂಬಿರುವ ಈ ಕೆರೆಯ ಮಧ್ಯಭಾಗದಲ್ಲಿ *ಬಂಗಾರೇಶ್ವರ ದೇವಾಲಯವಿದೆ.* ಅಲ್ಲಿ *ಶಿವನ* ಅವತಾರ *ಬಂಗಾರೇಶ್ವರ* ನೆಲೆಸಿದ್ದಾನೆ.

 

*ಕಲ್ಲಪ್ಪ* ಮತ್ತು *ಕಲ್ಲಮ್ಮ* ದಂಪತಿಗಳಿಗೆ ಬಹಳ ದಿನವಾದರೂ ಗಂಡು ಸಂತಾನವಾಗುವುದಿಲ್ಲ ಆಗ ಮನೆದೇವರು *ಹುಚ್ಚುರಾಯೇಶ್ವರ ಸ್ವಾಮಿ {ಆಂಜನೇಯ ಸ್ವಾಮಿ}* ನೆನೆಯುತ್ತಾ ಈ ಬಂಗಾರೇಶ್ವರ ದೇವರಿಗೆ ಹರಕೆ ಹೊತ್ತರಂತೆ ಗಂಡು ಮಗು ಜನಿಸಿದರೆ ನಿನ್ನ ಹೆಸರೇ ನಾಮಕರಣ ಮಾಡುತ್ತೇವೆ ಅಂತ.ಆ ನಂತರದಲ್ಲಿ ಕಲ್ಲಮ್ಮನವರು ನವಮಾಸ ತುಂಬಿ ಮಗುವಿಗೆ ಜನ್ಮ ನೀಡಿದಾಗ ಗಂಡಯ ಮಗು ಆಗಿತ್ತಂತೆ ಹರಕೆಯ ಪ್ರಕಾರ ಆ ಗಂಡು ಮಗುವಿಗೆ *ಬಂಗಾರೇಶ್ವರನ* ಆಶಿರ್ವಾದದಿಂದ ಜನಿಸಿದ್ದಕ್ಕೆ *ಬಂಗಾರಪ್ಪ* ಎಂದು ನಾಮಕರಣ ಮಾಡಿದರಂತೆ. ಇವರೇ ನಾಡುಕಂಡ ಧೀಮಂತ ವ್ಯಕ್ತಿ , ಬಡವರ ಬಂಧು *ಈಡಿಗ ಸಮುದಾಯದ ಆಶಾಕಿರಣ ಬಂಗಾರಪ್ಪನವರು.*

 

ಅದೇ ರೀತಿಯಾಗಿ *ಬಂಗಾರಪ್ಪನವರ* ಸಹೋದರಿಯರು *ದೊಡ್ಡ ಕೆರಿಯಮ್ಮ* ಮತ್ತು *ಸಣ್ಣ ಕೆರಿಯಮ್ಮ* ಎಂದು. *ಬಂಗಾರೇಶ್ವರ* ದೇವಾಲಯದ ಪಕ್ಕ ಇರುವ *ಗುಡ್ನಾಪುರ* ಎಂಬ ಕುಗ್ರಾಮದ ಪಕ್ಕ ಕೆರೆ ಇದೆಯಲ್ಲ, ಅಲ್ಲಿ *ಬಂಗಾರೇಶ್ವರ ಸ್ವಾಮಿಯ ಜೊತೆಗೆ ಶಕ್ತಿಸ್ವರೂಪಿಣಿ ಆದಿಶಕ್ತಿ ಅಮ್ಮನಾಗಿ ಕೆರೆಯಲ್ಲಿರುವುದರಿಂದ ಕೆರೆಯಮ್ಮಳಾಗಿ ದರ್ಶನ ಕೊಡುತ್ತಿದ್ದಾಳೆ.*

 

ಆದ್ದರಿಂದ *ಬಂಗಾರಪ್ಪನವರ* ತಂದೆ ತಾಯಿ ತಮ್ಮ ಹೆಣ್ಣಮಕ್ಕಳಿಗೆ *ದೊಡ್ಡ ಕೆರೆಯಮ್ಮ,,, ಸಣ್ಣ ಕೆರೆಯಮ್ಮ* ಎಂದು ನಾಮಕರಣ ಮಾಡಿದ್ದಾರೆ.

ಬಂಗಾರಪ್ಪನವರು ಈಡಿಗ ಜಾತಿಗೆ ಸೇರಿದವರು. ಈಡಿಗ ಜಾತಿಯ ಉಪಜಾತಿಯಾದ ದೀವರು ಸಮುದಾಯಕ್ಕೆ ಸೇರಿದವರು.ಇವರ ಧರ್ಮ ಪತ್ನಿಯ ಹೆಸರು *ಶಕುಂತಲ. ಇವರದು ಕಾರವಾರ ಜಿಲ್ಲೆಯ ಶಿರ್ಶಿ ತಾಲೂಕಿನ ಮಳಲಗಾಂವ್ಎಂಬ ಹಳ್ಳಿ.ಇವರದು ಸಹಿತ ಈಡಿಗ ಸಮುದಾಯದ ಉಪಜಾತಿ ನಾಯ್ಕ ಕುಟುಂಬದವರು.

 

ಬಂಗಾರಪ್ಪನವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಇವರ ಒಬ್ಬ ಪುತ್ರಿಯನ್ನು ಇದೇ ಸಮುದಾಯದ ಕನ್ನಡದ ಮುತ್ತು ಪದ್ಮಬೂಷಣ ಡಾ ! ರಾಜಕುಮಾರ ಅವರ ಪುತ್ರ ಶಿವರಾಜಕುಮಾರ ಮದುವೆಯಾಗಿದ್ದಾರೆ.

ಇನ್ನೋರ್ವ ಪುತ್ರಿ ಹೆಸರಾಂತ ದಿನಪತ್ರಿಕೆ ಪ್ರಜಾವಾಣಿಯ ಮಾಲಾಕರನ್ನು ಮಡದಿಯಾಗಿದ್ದಾರೆ.

ಬಂಗಾರಪ್ಪನವರು ತಮ್ಮ ರಾಜಕೀಯ ಅಕಾಂಕ್ಷೆಗೆ ಕಲಾವಿದರನ್ನು ಎಂದೂ ಬಳಸಿಕೊಳ್ಳಲಿಲ್ಲ. *ಡಾ ! ರಾಜ್* ಅವರನ್ನು ಒಂದು ದಿನವೂ ತಮ್ಮ ರಾಜಕೀಯ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲಿಲ್ಲ.

ಮಿರಿ ಮಿರಿ ಮಿಂಚುವ ಶರ್ಟ್ ಬಿಳಿ ಪ್ಯಾಂಟ್ ಬಿಳಿ ಚಪ್ಪಲಿ ಅಥವಾ ಶೂ, ಕಣ್ಣಿಗೆ ಕೂಲಿಂಗ್ ಕನ್ನಡಕ, ಕೈಯಲ್ಲಿ ಕನ್ನಡಕ ಇಡುವ ಬಾಕ್ಸ್ ಇದು *ಬಂಗಾರಪ್ಪನವರ* ಸಾರ್ವಜನಿಕ ವಸ್ತ್ರ ಸಂಹಿತೆ. ವೇದಿಕೆ ಮೇಲಿರುವಾಗಲಂತೂ ದೂರದಲ್ಲಿ ನಿಂತು ನೋಡುವವರಿಗೆ ಗುರುತು ಹಿಡಿಯಲು *ಮಿಂಚು ಅಚ್ಚಕೆಂಪು, ತಿಳಿನೀಲಿ, ಅಚ್ಚನೀಲಿ,ಶರ್ಟ್ ದರಿಸುತ್ತಿದ್ದರು.

ಬಂಗಾರಪ್ಪನವರನ್ನು ಈ ದಿನ ಮನದಲ್ಲಿ ಸ್ಮರಿಸಿಕೊಳ್ಳುತ್ತಾ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಹಾರೈಸೋಣ.

ವಿಷಯ ಸಂಗ್ರಹ : ಆಂಜನೇಯ.ಟಿ.{ ಈಡಿಗ }

ಅಗಡಿ ಹಾವೇರಿ

9113604162


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »