TOP STORIES:

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ, ಇತರ ಪ್ರತಿಭೆಗೆ ಪ್ರೋತ್ಸಹ ಕೊಡುವ ಪ್ರದೀಪ್ ಪೂಜಾರಿ ಕುಕ್ಕಿಪಾಡಿ


ತುಳುನಾಡಿನ ಹೆಮ್ಮೆಯ ಹಾಗೂ ಬಿಲ್ಲವ ಸಮಾಜದ ಯುವ ಪ್ರತಿಭೆ ಕುಕ್ಕಿಪಾಡಿಯ ಕೊರಗಪ್ಪ ಪೂಜಾರಿ ಮತ್ತು ಯಮುನಾ ದಂಪತಿಗಳ ಮಗ ಪ್ರದೀಪ್ ಪೂಜಾರಿ ಕುಕ್ಕಿಪಾಡಿ.ಇವರು ಪ್ರಾಥಮಿಕ ಶಿಕ್ಷಣ-ಕುಕ್ಕಿಪಾಡಿ ಸಂತ ಬಾರ್ತಲೋಮಿಯರ ಸ್ಕೂಲ್, ಪ್ರೌಢ -ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು , ಕಾಲೇಜ್ -ಹೋಲಿ ರೋಸರಿ ಕಾಲೇಜು ಮೂಡಬಿದ್ರಿ ಯಲ್ಲಿ ತನ್ನ ವಿದ್ಯಾಭ್ಯಾಸ ಮುಗಿಸಿದರು.

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ ತನ್ನ ಪ್ರತಿಭೆಯ ಜೊತೆಗೆ ಇತರ ಪ್ರತಿಭೆಗೆ ಪ್ರೋತ್ಸಹ ಕೊಟ್ಟು ಅವರಿಗೂ ವೇದಿಕೆ ಕಲ್ಪಿಸಿಕೊಟ್ಟ ಸಾಧನೆಯ ಹಾದಿಯಲ್ಲಿ ನಡೆಯುವಂತೆ ಮಾಡಿದ ಮಹಾನ್ ಸಾಧಕ. ತಾನು ಪಟ್ಟ ಕಷ್ಟ ಇನ್ನೊಬ್ಬರು ಅನುಭವಿಸಬಾರದು ಎಂದು ಅವರ ಜೀವನದಲ್ಲಿ ಬೆಳಕಾದವರು.

ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿ ಇರುವ ಇವರಿಗೆ ನಾಯಕ ನಟನಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಕಲಾ ಕ್ಷೇತ್ರದ ಗುರುಗಳಾದ ಅಶೋಕ್ ಹಲಾಯಿ ಇವರ ನಿರ್ದೇಶನದ ಪೂರಾ ಪೊಕ್ಕಡೆ ಚಿತ್ರದಲ್ಲಿ ನಟಿಸಿ ಸೈ ಎಣಿಸಿಕೊಂಡರು.

ಹೀಗೆ ಅನೇಕ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ತಾನು ಬಣ್ಣ ಅಚ್ಚುವ ಬದಲು ಇತರ ಪ್ರತಿಭೆಗೆ ಅವಕಾಶ ಕೊಡಲು ಅಪ್ಪು ಎನ್ನುವ ನೃತ್ಯ ತಂಡ ರಚಿಸಿ ಉಚಿತ ನೃತ್ಯ ತರಬೇತಿ ನೀಡುತ್ತಿದ್ದರು.ಇವರು ಅನೇಕ ಕಿರು ಚಿತ್ರ ನಿರ್ದೇಶನ ಮಾಡಿ ಯಶಸ್ವೀ ನಿರ್ದೇಶಕರು ಎನಿಸಿಕೊಂಡಿದ್ದಾರೆ. ಮನಸ್ದ ಪೊರ್ಲು, ಸಸ್ಪೆನ್ಸ್ ಮೂವಿ, ನಂಬುಗೆ, ಅಂಗಲಪು, ಆಪರೇಷನ್ ತುಳುನಾಡ ಹೀಗೆ ಅನೇಕ ಕಿರುಚಿತ್ರ ಮಾಡಿದ್ದಾರೆ. ನಿರ್ದೇಶಕ ಮಾತ್ರ ಅಲ್ಲ ಗ್ಲಾಮರ್ ಡಿಸೈನ್ ಆಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಗ್ಲಾಮರ್ ಶಾಟ್ಸ್ ನಲ್ಲಿ ಹಲವಾರು ಕಿರುಚಿತ್ರ ನಿರ್ಮಾಣ ಮಾಡಿ ಹೊಸ ಪ್ರತಿಭೆ ಅವಕಾಶ ಮಾಡಿಕೊಟ್ಟ ಕಲಾ ಪೋಷಕರು ಹೌದು, ಇವರ ಈ ಸಾಧನೆಗೆ ಫ್ಯಾಮಿಲಿ, ಫ್ರೆಂಡ್ಸ್ ಜೊತೆಗೆ ತ್ರಿಶಾಲ್ ಶೆಟ್ಟಿ, ಶಶಿಂದ್ರ ಜಂಕಳ, ನಾವೆಲ್, ತಿಲಕ್, ವಿದ್ಯಾ ಹೀಗೆ ಅನೇಕರ ಸಂಪೂರ್ಣ ಸಹಕಾರ ಸಿಕ್ಕಿತ್ತು.

ಬಂಟ್ವಾಳ ತಾಲ್ಲೂಕಿನ ಜನರಿಗೆ ಮಾಹಿತಿ ನೀಡಲು ಸೂಕ್ತ ನ್ಯೂಸ್ ಚಾನಲ್ ಅನ್ನು ಯು ಟ್ಯೂಬ್ ನಲ್ಲಿ ಆರಂಭಿಸಿ ಜನರಿಗೆ ಸೂಕ್ತ ಮಾಹಿತಿ ತಲುಪುವಂತೆ ಮಾಡಿದರು ಮತ್ತು ನೊಂದ ಬಡ ಜನರ ನೋವಿನ ವರದಿಯನ್ನು ಈ ಚಾನಲ್ ಮೂಲಕ ಸಂಘ ಸಂಸ್ಥೆಗಳಿಗೆ ತಲುಪುವಂತೆ ಮಾಡಿ ಬಡವರ ಪಾಲಿಗೆ ಆಶಾ ಕಿರಣವಾದರು.

ತಮ್ಮ ನಿಸ್ವಾರ್ಥ ಸೇವೆಯಿಂದ ಸೇವೆ ಮಾಡುವ ಇವರ ಬಾಳು ಬೆಳಕಾಗಲಿ ಮತ್ತು ಕಲಾ ಮಾತೆಯ ಅನುಗ್ರಹದಿಂದ ಇನ್ನಷ್ಟು ಒಳ್ಳೆಯ ಕಿರು ಚಿತ್ರ , ಸಿನಿಮಾ ಮಾಡಿ ಪ್ರಶಸ್ತಿ ಪುರಸ್ಕಾರ ಇವರ ಮುಡಿಗೇರುವಂತೆ ಮಾಡಲಿ.

ಬರಹ: ಪ್ರಶಾಂತ್ ಅಂಚನ್ – ಮಸ್ಕತ್ತ್


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »