TOP STORIES:

FOLLOW US

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ, ಇತರ ಪ್ರತಿಭೆಗೆ ಪ್ರೋತ್ಸಹ ಕೊಡುವ ಪ್ರದೀಪ್ ಪೂಜಾರಿ ಕುಕ್ಕಿಪಾಡಿ


ತುಳುನಾಡಿನ ಹೆಮ್ಮೆಯ ಹಾಗೂ ಬಿಲ್ಲವ ಸಮಾಜದ ಯುವ ಪ್ರತಿಭೆ ಕುಕ್ಕಿಪಾಡಿಯ ಕೊರಗಪ್ಪ ಪೂಜಾರಿ ಮತ್ತು ಯಮುನಾ ದಂಪತಿಗಳ ಮಗ ಪ್ರದೀಪ್ ಪೂಜಾರಿ ಕುಕ್ಕಿಪಾಡಿ.ಇವರು ಪ್ರಾಥಮಿಕ ಶಿಕ್ಷಣ-ಕುಕ್ಕಿಪಾಡಿ ಸಂತ ಬಾರ್ತಲೋಮಿಯರ ಸ್ಕೂಲ್, ಪ್ರೌಢ -ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು , ಕಾಲೇಜ್ -ಹೋಲಿ ರೋಸರಿ ಕಾಲೇಜು ಮೂಡಬಿದ್ರಿ ಯಲ್ಲಿ ತನ್ನ ವಿದ್ಯಾಭ್ಯಾಸ ಮುಗಿಸಿದರು.

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ ತನ್ನ ಪ್ರತಿಭೆಯ ಜೊತೆಗೆ ಇತರ ಪ್ರತಿಭೆಗೆ ಪ್ರೋತ್ಸಹ ಕೊಟ್ಟು ಅವರಿಗೂ ವೇದಿಕೆ ಕಲ್ಪಿಸಿಕೊಟ್ಟ ಸಾಧನೆಯ ಹಾದಿಯಲ್ಲಿ ನಡೆಯುವಂತೆ ಮಾಡಿದ ಮಹಾನ್ ಸಾಧಕ. ತಾನು ಪಟ್ಟ ಕಷ್ಟ ಇನ್ನೊಬ್ಬರು ಅನುಭವಿಸಬಾರದು ಎಂದು ಅವರ ಜೀವನದಲ್ಲಿ ಬೆಳಕಾದವರು.

ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿ ಇರುವ ಇವರಿಗೆ ನಾಯಕ ನಟನಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಕಲಾ ಕ್ಷೇತ್ರದ ಗುರುಗಳಾದ ಅಶೋಕ್ ಹಲಾಯಿ ಇವರ ನಿರ್ದೇಶನದ ಪೂರಾ ಪೊಕ್ಕಡೆ ಚಿತ್ರದಲ್ಲಿ ನಟಿಸಿ ಸೈ ಎಣಿಸಿಕೊಂಡರು.

ಹೀಗೆ ಅನೇಕ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ತಾನು ಬಣ್ಣ ಅಚ್ಚುವ ಬದಲು ಇತರ ಪ್ರತಿಭೆಗೆ ಅವಕಾಶ ಕೊಡಲು ಅಪ್ಪು ಎನ್ನುವ ನೃತ್ಯ ತಂಡ ರಚಿಸಿ ಉಚಿತ ನೃತ್ಯ ತರಬೇತಿ ನೀಡುತ್ತಿದ್ದರು.ಇವರು ಅನೇಕ ಕಿರು ಚಿತ್ರ ನಿರ್ದೇಶನ ಮಾಡಿ ಯಶಸ್ವೀ ನಿರ್ದೇಶಕರು ಎನಿಸಿಕೊಂಡಿದ್ದಾರೆ. ಮನಸ್ದ ಪೊರ್ಲು, ಸಸ್ಪೆನ್ಸ್ ಮೂವಿ, ನಂಬುಗೆ, ಅಂಗಲಪು, ಆಪರೇಷನ್ ತುಳುನಾಡ ಹೀಗೆ ಅನೇಕ ಕಿರುಚಿತ್ರ ಮಾಡಿದ್ದಾರೆ. ನಿರ್ದೇಶಕ ಮಾತ್ರ ಅಲ್ಲ ಗ್ಲಾಮರ್ ಡಿಸೈನ್ ಆಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಗ್ಲಾಮರ್ ಶಾಟ್ಸ್ ನಲ್ಲಿ ಹಲವಾರು ಕಿರುಚಿತ್ರ ನಿರ್ಮಾಣ ಮಾಡಿ ಹೊಸ ಪ್ರತಿಭೆ ಅವಕಾಶ ಮಾಡಿಕೊಟ್ಟ ಕಲಾ ಪೋಷಕರು ಹೌದು, ಇವರ ಈ ಸಾಧನೆಗೆ ಫ್ಯಾಮಿಲಿ, ಫ್ರೆಂಡ್ಸ್ ಜೊತೆಗೆ ತ್ರಿಶಾಲ್ ಶೆಟ್ಟಿ, ಶಶಿಂದ್ರ ಜಂಕಳ, ನಾವೆಲ್, ತಿಲಕ್, ವಿದ್ಯಾ ಹೀಗೆ ಅನೇಕರ ಸಂಪೂರ್ಣ ಸಹಕಾರ ಸಿಕ್ಕಿತ್ತು.

ಬಂಟ್ವಾಳ ತಾಲ್ಲೂಕಿನ ಜನರಿಗೆ ಮಾಹಿತಿ ನೀಡಲು ಸೂಕ್ತ ನ್ಯೂಸ್ ಚಾನಲ್ ಅನ್ನು ಯು ಟ್ಯೂಬ್ ನಲ್ಲಿ ಆರಂಭಿಸಿ ಜನರಿಗೆ ಸೂಕ್ತ ಮಾಹಿತಿ ತಲುಪುವಂತೆ ಮಾಡಿದರು ಮತ್ತು ನೊಂದ ಬಡ ಜನರ ನೋವಿನ ವರದಿಯನ್ನು ಈ ಚಾನಲ್ ಮೂಲಕ ಸಂಘ ಸಂಸ್ಥೆಗಳಿಗೆ ತಲುಪುವಂತೆ ಮಾಡಿ ಬಡವರ ಪಾಲಿಗೆ ಆಶಾ ಕಿರಣವಾದರು.

ತಮ್ಮ ನಿಸ್ವಾರ್ಥ ಸೇವೆಯಿಂದ ಸೇವೆ ಮಾಡುವ ಇವರ ಬಾಳು ಬೆಳಕಾಗಲಿ ಮತ್ತು ಕಲಾ ಮಾತೆಯ ಅನುಗ್ರಹದಿಂದ ಇನ್ನಷ್ಟು ಒಳ್ಳೆಯ ಕಿರು ಚಿತ್ರ , ಸಿನಿಮಾ ಮಾಡಿ ಪ್ರಶಸ್ತಿ ಪುರಸ್ಕಾರ ಇವರ ಮುಡಿಗೇರುವಂತೆ ಮಾಡಲಿ.

ಬರಹ: ಪ್ರಶಾಂತ್ ಅಂಚನ್ – ಮಸ್ಕತ್ತ್


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »