TOP STORIES:

FOLLOW US

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ, ಇತರ ಪ್ರತಿಭೆಗೆ ಪ್ರೋತ್ಸಹ ಕೊಡುವ ಪ್ರದೀಪ್ ಪೂಜಾರಿ ಕುಕ್ಕಿಪಾಡಿ


ತುಳುನಾಡಿನ ಹೆಮ್ಮೆಯ ಹಾಗೂ ಬಿಲ್ಲವ ಸಮಾಜದ ಯುವ ಪ್ರತಿಭೆ ಕುಕ್ಕಿಪಾಡಿಯ ಕೊರಗಪ್ಪ ಪೂಜಾರಿ ಮತ್ತು ಯಮುನಾ ದಂಪತಿಗಳ ಮಗ ಪ್ರದೀಪ್ ಪೂಜಾರಿ ಕುಕ್ಕಿಪಾಡಿ.ಇವರು ಪ್ರಾಥಮಿಕ ಶಿಕ್ಷಣ-ಕುಕ್ಕಿಪಾಡಿ ಸಂತ ಬಾರ್ತಲೋಮಿಯರ ಸ್ಕೂಲ್, ಪ್ರೌಢ -ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು , ಕಾಲೇಜ್ -ಹೋಲಿ ರೋಸರಿ ಕಾಲೇಜು ಮೂಡಬಿದ್ರಿ ಯಲ್ಲಿ ತನ್ನ ವಿದ್ಯಾಭ್ಯಾಸ ಮುಗಿಸಿದರು.

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ ತನ್ನ ಪ್ರತಿಭೆಯ ಜೊತೆಗೆ ಇತರ ಪ್ರತಿಭೆಗೆ ಪ್ರೋತ್ಸಹ ಕೊಟ್ಟು ಅವರಿಗೂ ವೇದಿಕೆ ಕಲ್ಪಿಸಿಕೊಟ್ಟ ಸಾಧನೆಯ ಹಾದಿಯಲ್ಲಿ ನಡೆಯುವಂತೆ ಮಾಡಿದ ಮಹಾನ್ ಸಾಧಕ. ತಾನು ಪಟ್ಟ ಕಷ್ಟ ಇನ್ನೊಬ್ಬರು ಅನುಭವಿಸಬಾರದು ಎಂದು ಅವರ ಜೀವನದಲ್ಲಿ ಬೆಳಕಾದವರು.

ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿ ಇರುವ ಇವರಿಗೆ ನಾಯಕ ನಟನಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಕಲಾ ಕ್ಷೇತ್ರದ ಗುರುಗಳಾದ ಅಶೋಕ್ ಹಲಾಯಿ ಇವರ ನಿರ್ದೇಶನದ ಪೂರಾ ಪೊಕ್ಕಡೆ ಚಿತ್ರದಲ್ಲಿ ನಟಿಸಿ ಸೈ ಎಣಿಸಿಕೊಂಡರು.

ಹೀಗೆ ಅನೇಕ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ತಾನು ಬಣ್ಣ ಅಚ್ಚುವ ಬದಲು ಇತರ ಪ್ರತಿಭೆಗೆ ಅವಕಾಶ ಕೊಡಲು ಅಪ್ಪು ಎನ್ನುವ ನೃತ್ಯ ತಂಡ ರಚಿಸಿ ಉಚಿತ ನೃತ್ಯ ತರಬೇತಿ ನೀಡುತ್ತಿದ್ದರು.ಇವರು ಅನೇಕ ಕಿರು ಚಿತ್ರ ನಿರ್ದೇಶನ ಮಾಡಿ ಯಶಸ್ವೀ ನಿರ್ದೇಶಕರು ಎನಿಸಿಕೊಂಡಿದ್ದಾರೆ. ಮನಸ್ದ ಪೊರ್ಲು, ಸಸ್ಪೆನ್ಸ್ ಮೂವಿ, ನಂಬುಗೆ, ಅಂಗಲಪು, ಆಪರೇಷನ್ ತುಳುನಾಡ ಹೀಗೆ ಅನೇಕ ಕಿರುಚಿತ್ರ ಮಾಡಿದ್ದಾರೆ. ನಿರ್ದೇಶಕ ಮಾತ್ರ ಅಲ್ಲ ಗ್ಲಾಮರ್ ಡಿಸೈನ್ ಆಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಗ್ಲಾಮರ್ ಶಾಟ್ಸ್ ನಲ್ಲಿ ಹಲವಾರು ಕಿರುಚಿತ್ರ ನಿರ್ಮಾಣ ಮಾಡಿ ಹೊಸ ಪ್ರತಿಭೆ ಅವಕಾಶ ಮಾಡಿಕೊಟ್ಟ ಕಲಾ ಪೋಷಕರು ಹೌದು, ಇವರ ಈ ಸಾಧನೆಗೆ ಫ್ಯಾಮಿಲಿ, ಫ್ರೆಂಡ್ಸ್ ಜೊತೆಗೆ ತ್ರಿಶಾಲ್ ಶೆಟ್ಟಿ, ಶಶಿಂದ್ರ ಜಂಕಳ, ನಾವೆಲ್, ತಿಲಕ್, ವಿದ್ಯಾ ಹೀಗೆ ಅನೇಕರ ಸಂಪೂರ್ಣ ಸಹಕಾರ ಸಿಕ್ಕಿತ್ತು.

ಬಂಟ್ವಾಳ ತಾಲ್ಲೂಕಿನ ಜನರಿಗೆ ಮಾಹಿತಿ ನೀಡಲು ಸೂಕ್ತ ನ್ಯೂಸ್ ಚಾನಲ್ ಅನ್ನು ಯು ಟ್ಯೂಬ್ ನಲ್ಲಿ ಆರಂಭಿಸಿ ಜನರಿಗೆ ಸೂಕ್ತ ಮಾಹಿತಿ ತಲುಪುವಂತೆ ಮಾಡಿದರು ಮತ್ತು ನೊಂದ ಬಡ ಜನರ ನೋವಿನ ವರದಿಯನ್ನು ಈ ಚಾನಲ್ ಮೂಲಕ ಸಂಘ ಸಂಸ್ಥೆಗಳಿಗೆ ತಲುಪುವಂತೆ ಮಾಡಿ ಬಡವರ ಪಾಲಿಗೆ ಆಶಾ ಕಿರಣವಾದರು.

ತಮ್ಮ ನಿಸ್ವಾರ್ಥ ಸೇವೆಯಿಂದ ಸೇವೆ ಮಾಡುವ ಇವರ ಬಾಳು ಬೆಳಕಾಗಲಿ ಮತ್ತು ಕಲಾ ಮಾತೆಯ ಅನುಗ್ರಹದಿಂದ ಇನ್ನಷ್ಟು ಒಳ್ಳೆಯ ಕಿರು ಚಿತ್ರ , ಸಿನಿಮಾ ಮಾಡಿ ಪ್ರಶಸ್ತಿ ಪುರಸ್ಕಾರ ಇವರ ಮುಡಿಗೇರುವಂತೆ ಮಾಡಲಿ.

ಬರಹ: ಪ್ರಶಾಂತ್ ಅಂಚನ್ – ಮಸ್ಕತ್ತ್


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »