TOP STORIES:

ನಾರಾಯಣಗುರುಗಳ ಸಂಘಟನೆಯಿಂದ ಬಲಯುತರಾಗಿರಿ ಸಂದೇಶ ಸಮಾಜ ಒಪ್ಪಿಕೊಂಡಿದೆ : ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು


ನಾರಾಯಣಗುರುಗಳ ಸಂದೇಶವನ್ನು ಅರಿತು, ಅಳವಡಿಸಿಕೊಳ್ಳುವ ಅನಿವಾರ್ಯತೆಯಿದೆ. ಅವರ ಸಂದೇಶಗಳು ಬದುಕಿಗೆ ಸಮರ್ಪಕವಾಗುವಂತಹ ಗಳು. ಅಂದಿನ ಅವರ ಚಿಂತನೆಯಿಂದ ಇಂದು ಬದಲಾವಣೆಯತ್ತ ನಾವು ಸಾಗುತ್ತಿದ್ದೇವೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಹೇಳಿದರು.
ಬ್ರಹ್ಮಶ್ರೀ ನಾರಾಯಣಗುರುಗಳ 92 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ ಸಮಾಜದಲ್ಲಿ ಸಮಾನತೆಯನ್ನು ಸಾರುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಎಂಬ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ, ಸರಕಾರಿ ಕಾಲೇಜು ತೆಂಕನಿಡಿಯೂರಿನ ಉಪನ್ಯಾಸಕರಾದ ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು ಮಾತನಾಡಿ ಜಾತಿ-ವರ್ಗಗಳ ಬೇಧವನ್ನು ಮರೆತು ಮಾನವೀಯತೆ, ಸಮಾನತೆಯ ಮನಸ್ಥಿತಿ ನಮ್ಮಲ್ಲಿ ಇದ್ದಾಗ ಸಮಾಜ ಪರಿವರ್ತನೆ ಸಾಧ್ಯವಾಗುತ್ತದೆ. ಗುರುಗಳ ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶ ಇಡೀ ಸಮಾಜವೇ ಒಪ್ಪಿಕೊಂಡಿದೆ. ಸಂಘಟನೆಗಳು ನೈತಿಕ ಬಲ ತುಂಬುವ ಮೂಲಕ ಸಮಾಜದ ತಪ್ಪುಗಳನ್ನು ಪ್ರಶ್ನಿಸುವ ಗುಣವು ನಮ್ಮಲ್ಲಿ ಬರಬೇಕಾಗಿದೆ. ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಂದೇಶ ಸಮಾನತೆ ತರುವಲ್ಲಿ ಸಹಕಾರಿಯಾಗಿದೆ ಎಂದರು.

ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಮಾತನಾಡಿ ನಾರಾಯಣಗುರುಗಳು ಸಾಮಾಜಿಕ ಕ್ರಾಂತಿ ಮಾಡಿ ಹಿಂದುಳಿದ ವರ್ಗಗಳಿಗೆ ಶಕ್ತಿಯಾದರು. ಸತ್ಯದ ಹೋರಾಟದ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸಿ ಬದಲಾವಣೆಯ ತಂದರು. ಅವರ ಅಂದಿನ ಸಂದೇಶ ಸಾರ್ವಕಾಲಿಕವಾಗಿದೆ.ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ವಹಿಸಿದ್ದರು.

ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾದ ಜಗದೀಶ್ ಸುವರ್ಣ, ಬಿಲ್ಲವ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಬಿ. ಅಮೀನ್, ಘಟಕದ ಕಾರ್ಯದರ್ಶಿ ಶಾಶ್ವತ್ ಎಸ್. ಉಪಸ್ಥಿತರಿದ್ದರು.

ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ಸ್ವಾಗತಿಸಿ, ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ಪ್ರಸ್ತಾವಿಸಿ, ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಜಯ ಎನ್. ಪೂಜಾರಿ ವಂದಿಸಿ, ಯಶೋಧ ಕಾರ್ಯಕ್ರಮ ನಿರ್ವಹಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »