TOP STORIES:

ನಾರಾಯಣಗುರುಗಳ ಸಂಘಟನೆಯಿಂದ ಬಲಯುತರಾಗಿರಿ ಸಂದೇಶ ಸಮಾಜ ಒಪ್ಪಿಕೊಂಡಿದೆ : ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು


ನಾರಾಯಣಗುರುಗಳ ಸಂದೇಶವನ್ನು ಅರಿತು, ಅಳವಡಿಸಿಕೊಳ್ಳುವ ಅನಿವಾರ್ಯತೆಯಿದೆ. ಅವರ ಸಂದೇಶಗಳು ಬದುಕಿಗೆ ಸಮರ್ಪಕವಾಗುವಂತಹ ಗಳು. ಅಂದಿನ ಅವರ ಚಿಂತನೆಯಿಂದ ಇಂದು ಬದಲಾವಣೆಯತ್ತ ನಾವು ಸಾಗುತ್ತಿದ್ದೇವೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಹೇಳಿದರು.
ಬ್ರಹ್ಮಶ್ರೀ ನಾರಾಯಣಗುರುಗಳ 92 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ ಸಮಾಜದಲ್ಲಿ ಸಮಾನತೆಯನ್ನು ಸಾರುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಎಂಬ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ, ಸರಕಾರಿ ಕಾಲೇಜು ತೆಂಕನಿಡಿಯೂರಿನ ಉಪನ್ಯಾಸಕರಾದ ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು ಮಾತನಾಡಿ ಜಾತಿ-ವರ್ಗಗಳ ಬೇಧವನ್ನು ಮರೆತು ಮಾನವೀಯತೆ, ಸಮಾನತೆಯ ಮನಸ್ಥಿತಿ ನಮ್ಮಲ್ಲಿ ಇದ್ದಾಗ ಸಮಾಜ ಪರಿವರ್ತನೆ ಸಾಧ್ಯವಾಗುತ್ತದೆ. ಗುರುಗಳ ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶ ಇಡೀ ಸಮಾಜವೇ ಒಪ್ಪಿಕೊಂಡಿದೆ. ಸಂಘಟನೆಗಳು ನೈತಿಕ ಬಲ ತುಂಬುವ ಮೂಲಕ ಸಮಾಜದ ತಪ್ಪುಗಳನ್ನು ಪ್ರಶ್ನಿಸುವ ಗುಣವು ನಮ್ಮಲ್ಲಿ ಬರಬೇಕಾಗಿದೆ. ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಂದೇಶ ಸಮಾನತೆ ತರುವಲ್ಲಿ ಸಹಕಾರಿಯಾಗಿದೆ ಎಂದರು.

ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಮಾತನಾಡಿ ನಾರಾಯಣಗುರುಗಳು ಸಾಮಾಜಿಕ ಕ್ರಾಂತಿ ಮಾಡಿ ಹಿಂದುಳಿದ ವರ್ಗಗಳಿಗೆ ಶಕ್ತಿಯಾದರು. ಸತ್ಯದ ಹೋರಾಟದ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸಿ ಬದಲಾವಣೆಯ ತಂದರು. ಅವರ ಅಂದಿನ ಸಂದೇಶ ಸಾರ್ವಕಾಲಿಕವಾಗಿದೆ.ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ವಹಿಸಿದ್ದರು.

ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾದ ಜಗದೀಶ್ ಸುವರ್ಣ, ಬಿಲ್ಲವ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಬಿ. ಅಮೀನ್, ಘಟಕದ ಕಾರ್ಯದರ್ಶಿ ಶಾಶ್ವತ್ ಎಸ್. ಉಪಸ್ಥಿತರಿದ್ದರು.

ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ಸ್ವಾಗತಿಸಿ, ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ಪ್ರಸ್ತಾವಿಸಿ, ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಜಯ ಎನ್. ಪೂಜಾರಿ ವಂದಿಸಿ, ಯಶೋಧ ಕಾರ್ಯಕ್ರಮ ನಿರ್ವಹಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »