TOP STORIES:

ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ಲಕ್ಷ್ಮೀಶ್ ಸುವರ್ಣ.


ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ತಿಮ್ಮಪ್ಪ ಪೂಜಾರಿ ಮತ್ತು ಶಶಿಕಲಾ ಟಿ ಸುವರ್ಣ ಇವರ ಮುದ್ದಿನ ಮಗ ಲಕ್ಷ್ಮೀಶ್ ಸುವರ್ಣ

ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ ಇತ್ತು ಆದರೆ ಇವರಿಗೆ ಶಾಲಾ ದಿನಗಳಲ್ಲಿ ಯಾವುದೇ ರೀತಿಯ ಬೆಂಬಲ ಅಥವಾ ತಾವೇ ಮುಂದೆ ಹೋಗುವಷ್ಟು ಧೈರ್ಯ ಇರಲಿಲ್ಲ. ಹಾಡುಗಾರನಾಗಿ ಬೆಳೆಯಬೇಕು ಎಂಬ ಆಸೆಯೂ ನೆರವೇರಲಿಲ್ಲ . ಆದರೆ ನಿರೂಪಕನಾಗಿ ಜನರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾದರು ಇವರ ಕಂಚಿನ ಕಂಠದ ಧ್ವನಿಯಿಂದ ಎಂಟು ವರ್ಷದಿಂದ ನಿರೂಪಣೆಯ ಹಾದಿಯಲ್ಲಿ ಮುಂದುವರಿದರು ಕರ್ನಾಟಕದ ಅನೇಕ ಕಡೆ ಮೈಸೂರ್, ಚಿಕ್ಕಮಂಗಳೂರು, ಶೃಂಗೇರಿ,ಕೊಪ್ಪ,ಉಡುಪಿ, ಮಂಗಳೂರು, ಜೈಪುರ್, ಬಾಳೆಹೊನ್ನೂರು, ಕಾಸರಗೋಡು, ಪುತ್ತೂರು, ಸುಳ್ಯ, ಮುಂಬೈಗಳಲ್ಲಿ ಕಾರ್ಯಕ್ರಮ ನೀಡಿ ತಮ್ಮ ವಾಕ್ ಚಾತುರ್ಯದಿಂದಲೇ ಜನ ಮನ ಗೆದ್ದಿದ್ದಾರೆ. ಓಮನ್ ಬಿಲ್ಲವಾಸ್ ಅವರು ಆಯೋಜಿಸಿದ ಬಲೇ ತೆಲಿಪಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತ್ತು ಆದರೆ ಕೋರೋನ ದ ಲಾಕ್ ಡೌನ್ ಕಾರಣ ಅವಕಾಶ ಕಳೆದುಕೊಂಡರು

ತನ್ನ ಪ್ರಾಥಮಿಕ ಶಿಕ್ಷಣವನ್ನು ಜೆಪ್ಪಿನಮೊಗರು ಗವರ್ನಮೆಂಟ್ ಸ್ಕೂಲ್ ಮತ್ತು ಪ್ರೌಢ ಶಿಕ್ಷಣವನ್ನು ಕ್ಯಾಸಿಯಾ ಹೈ ಸ್ಕೂಲ್ ನಲ್ಲಿ ಮಾಡಿ ಮುಗಿಸಿದರು.

ಜೀವನದಲ್ಲಿ ಏನಾದರೂ ಸಾಧಿಸಬೇಕು ತನ್ನನ್ನು ಎಲ್ಲರೂ ಗುರುತಿಸಬೇಕು ಎಂದು ಕೊಂಡಾಗ ಇವರ ಕೈ ಹಿಡಿದದ್ದು ಕಲಾ ಮಾತೆ ಇವರು ಕೇವಲ ನಿರೂಪಕರಾಗಿರದೆ ಅನೇಕ ತುಳು ಚಿತ್ರಗಳಲ್ಲಿ ನಟಿಸಿ ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಇವರು ನಟಿಸಿದ ಸಿನಿಮಾ, (ತಂಬಿಲ, ಭೋಜರಾಜ್ ಎಮ್ ಬಿ ಬಿ ಎಸ್, ಭಟ್ಕಳ,)ಧಾರಾವಾಹಿ (ಅಜನೆ) ಮತ್ತು ಕಿರು ಚಿತ್ರ (ಪ್ಲಾನ್ –ಸಿ, ಆ ಒಂದು ಕೆರೆ) ಹೀಗೆ ತನ್ನಲ್ಲೂ ಒಬ್ಬ ಕಲಾವಿದ ಇದ್ದಾನೆ ಎಂದು ತೋರಿಸಿಕೊಟ್ಟಿದ್ದಾರೆ. ಜೀವನದಲ್ಲಿ ದೊಡ್ಡ ಕಲಾವಿದ ಆಗಬೇಕು, ಕನ್ನಡ ಚಿತ್ರಗಳಲ್ಲಿ ನಟಿಸಬೇಕೆಂಬ ಆಸೆ ಇದೆಯಂತೆ. ಹಾಗೆಯೇ ನಿರೂಪಣೆ ಯಲ್ಲಿಯೂ ಒಳ್ಳೆಯ ಹೆಸರು ಮಾಡಬೇಕು ಮತ್ತು ಹೊರ ದೇಶದಲ್ಲಿಯೂ ವಾಕ್ ಚಾತುರ್ಯ ತೋರಿಸಬೇಕು ಎನ್ನುವ ಕನಸು ನನಸಾಗಲಿ ಇವರ ಈ ಎಲ್ಲಾ ಆಸೆಗೆ ಮನೆಯವರು ಪ್ರೋತ್ಸಾಹ ಮತ್ತು ಮಡದಿ ಶ್ರೀಮತಿ ಶುಭ ಲಕ್ಷ್ಮಿ ಯವರ ಸಂಪೂರ್ಣ ಪ್ರೋತ್ಸಾಹ, ಬೆಂಬಲ ಇದೆ.

ಪ್ರಸ್ತುತ ಈಗ ಇವರು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ನಾಮಫಲಕ ಕಲಾಗಾರರ ಸಂಘದ ಅಧ್ಯಕ್ಷರಾಗಿ ಬಿರ್ವೆರ್ ಕುಡ್ಲ ವಕ್ತಾರೆ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ತನ್ನ ಜೀವನಕ್ಕಾಗಿ ತನ್ನದೇ ಆದ ಸುವರ್ಣ ಗ್ರಾಫಿಕ್ಸ್ ಸ್ಟುಡಿಯೋ ನಡೆಸಿಕೊಂಡು ಹೋಗುತ್ತಿದ್ದಾರೆ.(ಕಾರ್, ಬೈಕ್ ಇದರ ಗ್ರಾಫಿಕ್ಸ್, ಸ್ಟಿಕರ್ ಕಟ್ಟಿಂಗ್, ನೇಮ್ ಪ್ಲೇಟ್ )

ತಾನು ಚಿತ್ರರಂಗದಲ್ಲಿ ಹೆಸರು ಮಾಡಬೇಕು ಎಂಬ ಇವರ ಕನಸು ಆದಷ್ಟು ಬೇಗ ಈಡೇರಲಿ.

ಕನ್ನಡ ತುಳು ಚಿತ್ರ ರಂಗದಲ್ಲಿ ಒಳ್ಳೆಯ ಅವಕಾಶ ಸಿಗಲಿ, ಕನ್ನಡದಲ್ಲಿ ಅಭಿನಯಿಸುವ ಆಸೆಯು ಬೇಗ ಫಲಿಸಲಿ, ಕಲಾಮಾತೆ ಮತ್ತು ತುಳುನಾಡಿನ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ನಿಮಗೆ

 

ಬರಹ:✍ಪ್ರಶಾಂತ್ ಅಂಚನ್ ಮಸ್ಕತ್


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »