TOP STORIES:

FOLLOW US

ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ಲಕ್ಷ್ಮೀಶ್ ಸುವರ್ಣ.


ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ತಿಮ್ಮಪ್ಪ ಪೂಜಾರಿ ಮತ್ತು ಶಶಿಕಲಾ ಟಿ ಸುವರ್ಣ ಇವರ ಮುದ್ದಿನ ಮಗ ಲಕ್ಷ್ಮೀಶ್ ಸುವರ್ಣ

ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ ಇತ್ತು ಆದರೆ ಇವರಿಗೆ ಶಾಲಾ ದಿನಗಳಲ್ಲಿ ಯಾವುದೇ ರೀತಿಯ ಬೆಂಬಲ ಅಥವಾ ತಾವೇ ಮುಂದೆ ಹೋಗುವಷ್ಟು ಧೈರ್ಯ ಇರಲಿಲ್ಲ. ಹಾಡುಗಾರನಾಗಿ ಬೆಳೆಯಬೇಕು ಎಂಬ ಆಸೆಯೂ ನೆರವೇರಲಿಲ್ಲ . ಆದರೆ ನಿರೂಪಕನಾಗಿ ಜನರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾದರು ಇವರ ಕಂಚಿನ ಕಂಠದ ಧ್ವನಿಯಿಂದ ಎಂಟು ವರ್ಷದಿಂದ ನಿರೂಪಣೆಯ ಹಾದಿಯಲ್ಲಿ ಮುಂದುವರಿದರು ಕರ್ನಾಟಕದ ಅನೇಕ ಕಡೆ ಮೈಸೂರ್, ಚಿಕ್ಕಮಂಗಳೂರು, ಶೃಂಗೇರಿ,ಕೊಪ್ಪ,ಉಡುಪಿ, ಮಂಗಳೂರು, ಜೈಪುರ್, ಬಾಳೆಹೊನ್ನೂರು, ಕಾಸರಗೋಡು, ಪುತ್ತೂರು, ಸುಳ್ಯ, ಮುಂಬೈಗಳಲ್ಲಿ ಕಾರ್ಯಕ್ರಮ ನೀಡಿ ತಮ್ಮ ವಾಕ್ ಚಾತುರ್ಯದಿಂದಲೇ ಜನ ಮನ ಗೆದ್ದಿದ್ದಾರೆ. ಓಮನ್ ಬಿಲ್ಲವಾಸ್ ಅವರು ಆಯೋಜಿಸಿದ ಬಲೇ ತೆಲಿಪಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿತ್ತು ಆದರೆ ಕೋರೋನ ದ ಲಾಕ್ ಡೌನ್ ಕಾರಣ ಅವಕಾಶ ಕಳೆದುಕೊಂಡರು

ತನ್ನ ಪ್ರಾಥಮಿಕ ಶಿಕ್ಷಣವನ್ನು ಜೆಪ್ಪಿನಮೊಗರು ಗವರ್ನಮೆಂಟ್ ಸ್ಕೂಲ್ ಮತ್ತು ಪ್ರೌಢ ಶಿಕ್ಷಣವನ್ನು ಕ್ಯಾಸಿಯಾ ಹೈ ಸ್ಕೂಲ್ ನಲ್ಲಿ ಮಾಡಿ ಮುಗಿಸಿದರು.

ಜೀವನದಲ್ಲಿ ಏನಾದರೂ ಸಾಧಿಸಬೇಕು ತನ್ನನ್ನು ಎಲ್ಲರೂ ಗುರುತಿಸಬೇಕು ಎಂದು ಕೊಂಡಾಗ ಇವರ ಕೈ ಹಿಡಿದದ್ದು ಕಲಾ ಮಾತೆ ಇವರು ಕೇವಲ ನಿರೂಪಕರಾಗಿರದೆ ಅನೇಕ ತುಳು ಚಿತ್ರಗಳಲ್ಲಿ ನಟಿಸಿ ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಇವರು ನಟಿಸಿದ ಸಿನಿಮಾ, (ತಂಬಿಲ, ಭೋಜರಾಜ್ ಎಮ್ ಬಿ ಬಿ ಎಸ್, ಭಟ್ಕಳ,)ಧಾರಾವಾಹಿ (ಅಜನೆ) ಮತ್ತು ಕಿರು ಚಿತ್ರ (ಪ್ಲಾನ್ –ಸಿ, ಆ ಒಂದು ಕೆರೆ) ಹೀಗೆ ತನ್ನಲ್ಲೂ ಒಬ್ಬ ಕಲಾವಿದ ಇದ್ದಾನೆ ಎಂದು ತೋರಿಸಿಕೊಟ್ಟಿದ್ದಾರೆ. ಜೀವನದಲ್ಲಿ ದೊಡ್ಡ ಕಲಾವಿದ ಆಗಬೇಕು, ಕನ್ನಡ ಚಿತ್ರಗಳಲ್ಲಿ ನಟಿಸಬೇಕೆಂಬ ಆಸೆ ಇದೆಯಂತೆ. ಹಾಗೆಯೇ ನಿರೂಪಣೆ ಯಲ್ಲಿಯೂ ಒಳ್ಳೆಯ ಹೆಸರು ಮಾಡಬೇಕು ಮತ್ತು ಹೊರ ದೇಶದಲ್ಲಿಯೂ ವಾಕ್ ಚಾತುರ್ಯ ತೋರಿಸಬೇಕು ಎನ್ನುವ ಕನಸು ನನಸಾಗಲಿ ಇವರ ಈ ಎಲ್ಲಾ ಆಸೆಗೆ ಮನೆಯವರು ಪ್ರೋತ್ಸಾಹ ಮತ್ತು ಮಡದಿ ಶ್ರೀಮತಿ ಶುಭ ಲಕ್ಷ್ಮಿ ಯವರ ಸಂಪೂರ್ಣ ಪ್ರೋತ್ಸಾಹ, ಬೆಂಬಲ ಇದೆ.

ಪ್ರಸ್ತುತ ಈಗ ಇವರು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ನಾಮಫಲಕ ಕಲಾಗಾರರ ಸಂಘದ ಅಧ್ಯಕ್ಷರಾಗಿ ಬಿರ್ವೆರ್ ಕುಡ್ಲ ವಕ್ತಾರೆ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ತನ್ನ ಜೀವನಕ್ಕಾಗಿ ತನ್ನದೇ ಆದ ಸುವರ್ಣ ಗ್ರಾಫಿಕ್ಸ್ ಸ್ಟುಡಿಯೋ ನಡೆಸಿಕೊಂಡು ಹೋಗುತ್ತಿದ್ದಾರೆ.(ಕಾರ್, ಬೈಕ್ ಇದರ ಗ್ರಾಫಿಕ್ಸ್, ಸ್ಟಿಕರ್ ಕಟ್ಟಿಂಗ್, ನೇಮ್ ಪ್ಲೇಟ್ )

ತಾನು ಚಿತ್ರರಂಗದಲ್ಲಿ ಹೆಸರು ಮಾಡಬೇಕು ಎಂಬ ಇವರ ಕನಸು ಆದಷ್ಟು ಬೇಗ ಈಡೇರಲಿ.

ಕನ್ನಡ ತುಳು ಚಿತ್ರ ರಂಗದಲ್ಲಿ ಒಳ್ಳೆಯ ಅವಕಾಶ ಸಿಗಲಿ, ಕನ್ನಡದಲ್ಲಿ ಅಭಿನಯಿಸುವ ಆಸೆಯು ಬೇಗ ಫಲಿಸಲಿ, ಕಲಾಮಾತೆ ಮತ್ತು ತುಳುನಾಡಿನ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ನಿಮಗೆ

 

ಬರಹ:✍ಪ್ರಶಾಂತ್ ಅಂಚನ್ ಮಸ್ಕತ್


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »