TOP STORIES:

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!


ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಖಾತೆಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆಏನಾಗುತ್ತದೆ, ಯಾರಾದರು ನಮ್ಮ ಖಾತೆಯನ್ನು ಹ್ಯಾಕ್ ಮಾಡಿ ಕೆಟ್ಟ ಸಂದೇಶ ಫೋಟೋಗಳನ್ನು ಹಂಚಿಕೊಂಡರೆ ಏನುಮಾಡೋದು..? ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಫೇಸ್ಬುಕ್:
ವಿವಿಧ ರೀತಿಯ ಸಾಮಾಜಿಕ ಜಾಲತಾಣಗಳು ಅದರದ್ದೇ ಆಗಿರುವ ಕೆಲವೊಂದು ಖಾಸಗಿ ನಿಯಮಗಳನ್ನು ರೂಪಿಸಿರುತ್ತವೆ. ಫೇಸ್‌ಬುಕ್ ಅಂತೂ ನೀವು ಸತ್ತ ಮೇಲೆ ನಿಮ್ಮ ಖಾತೆಯನ್ನು ಯಾರು ನಿರ್ವಹಿಸಬೇಕೆಂಬುದನ್ನು ಮೊದಲೇ ನಿರ್ಧರಿಸುವುದಕ್ಕೆಬಳಕೆದಾರರಿಗೆ ಸೌಲಭ್ಯವನ್ನು ಕೂಡ ಒದಗಿಸಿದೆ. ಆದರೆ, ಇದು ಅನೇಕರಿಗೆ ತಿಳಿದಿಲ್ಲವಷ್ಟೆ. ಇದಕ್ಕಾಗಿ ಮೊದಲು ನಿಮ್ಮ ಫೇಸ್‌ಬುಕ್ಖಾತೆಯ ಸೆಟ್ಟಿಂಗ್‌ಗೆ ಹೋಗಿ ಅಲ್ಲಿ ಸೆಕ್ಯೂರಿಟಿ ಮತ್ತು ಪ್ರೈವಸಿಯಲ್ಲಿಲಿಗಸಿ ಕಾಂಟ್ಯಾಕ್ಟ್ಕ್ಲಿಕ್ ಮಾಡಬೇಕು. ಅಲ್ಲಿ ನೀವುಸಾಮಾಜಿಕ ಜಾಲತಾಣದಲ್ಲಿರುವಂತಹ ವ್ಯಕ್ತಿಯನ್ನು ನೀವು ಆಯ್ಕೆ ಮಾಡಿ ಸೆಲೆಕ್ಟ್ ಮಾಡಿದರೆ, ನೀವು ಸತ್ತ ನಂತರ ವ್ಯಕ್ತಿ ನಿಮ್ಮಖಾತೆಯನ್ನು ನಿಭಾಯಿಸುವಂತಹವರಾಗಿತ್ತಾರೆ.

ಇನ್ಸ್ಟಾಗ್ರಾಮ್:
ಹಾಗೆಯೆ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳನ್ನು ಅಳಿಸಲು ಅಥವಾ ಅವರ ಸಾವಿನ ನಂತರ ಅವುಗಳನ್ನುಸ್ಮರಣಾರ್ಥವಾಗಿ ಪರಿವರ್ತಿಸಲು ಆಯ್ಕೆಯನ್ನು ಹೊಂದಿರುತ್ತಾರೆ. ಸ್ಮರಣೀಯವಾದ ಫೇಸ್‌ಬುಕ್ ಪುಟವು ಇತರ ಪುಟಗಳಂತೆಕಾಣುತ್ತದೆ. ಆದರೆ, ವ್ಯಕ್ತಿಯ ಹೆಸರಿನ ಮುಂದೆ “Remembering” ಎಂಬ ಪದವನ್ನು ನೋಡಬಹುದು. ಫೇಸ್‌ಬುಕ್‌ನಂತೆಯೇ, ಇನ್ಸ್ಟಾಗ್ರಾಮ್ ಖಾತೆಯನ್ನು ಸ್ಮರಣೀಯಗೊಳಿಸಬಹುದು ಅಥವಾ ಅಳಿಸಬಹುದಾದ ಆಯ್ಕೆಯನ್ನು ಹೊಂದಿದೆ. ಆದರೆಖಾತೆಯನ್ನು ಸ್ಮರಣಾರ್ಥವಾಗಿಸಲು, ಜನರು ಮರಣದ ಪುರಾವೆಯೊಂದಿಗೆ ಇನ್ಸ್ಟಾಗ್ರಾಮ್ ಅನ್ನು ಸಂಪರ್ಕಿಸಬೇಕು.

ಟ್ವಿಟರ್:ವಿಶ್ವದಲ್ಲಿ ಮತ್ತೊಂದು ಜನಪ್ರಿಯ ಸಾಮಾಜಿಕ ಜಾಲತಾಣವೆಂದರೆ ಟ್ವಿಟರ್. ಸಾವಿನ ಬಳಿಕ ಖಾತೆ ಯಾರು ಮುಂದುವರಿಸಿಕೊಂಡುಹೋಗಬಹುದು ಎನ್ನುವ ಬಗ್ಗೆ ಯಾವುದೇ ನಿಯಮವಿಲ್ಲ. ಆದರೆ ಮೃತನ ಕುಟುಂಬದವರು ಖಾತೆ ಮುಚ್ಚಬೇಕೆಂದು ಟ್ವಿಟರ್ಗೆಮನವಿ ಮಾಡಿಕೊಳ್ಳುವ ಅವಕಾಶವಿದೆ. ಖಾತೆದಾರನ ಕುಟುಂಬದವರು ಎಂದು ದೃಢಪಟ್ಟ ಬಳಿಕವಷ್ಟೇ ಖಾತೆಯ ಪೋಸ್ಟ್, ಫೋಟೋ ಮತ್ತು ಖಾತೆ ತೆಗೆದು ಹಾಕಲಾಗುವುದು. ಮರಣಪ್ರಮಾಣ ಪತ್ರ ಸಲ್ಲಿಸುವುದು ಅತೀ ಅಗತ್ಯ.

ಜಿಮೇಲ್:ಜಿಮೇಲ್‌ನಲ್ಲಿ ಸಹ ಖಾತೆಯನ್ನು ನಿಷ್ಕ್ರಿಯ ಮಾಡುವ ಅವಕಾಶಗಳನ್ನು ಗೂಗಲ್ ನೀಡಿದ್ದು, ಅದಕ್ಕಾಗಿಪ್ರಿ ಸೆಲೆಕ್ಟೆಡ್‌ ಪೀರಿಡ್ಆಯ್ಕೆ ಮತ್ತು ಖಾತೆ ಡಿಆಕ್ಟಿವ್ ಮಾಡಲು ಕುಟುಂಬ ಸದಸ್ಯರಿಗೆ ಆಕ್ಸಸ್‌ ನೀಡುವ ಆಯ್ಕೆಗಳನ್ನು ನೀಡಿದೆ. ಬಳಕೆದಾರರು ಪ್ರಿಸೆಲೆಕ್ಟೆಡ್ ಪೀರಿಡ್ ಆಯ್ಕೆಯ ಡಿಆಕ್ಟಿವ್ ಮಾಡುವ ಅವಕಾಶ ಇದೆ. ಬಳಕೆದಾರ ಇಲ್ಲವಾದಾಗ ಅವರ ಕುಟುಂಬ ಸದಸ್ಯರು ಖಾತೆಡಿಆಕ್ಟಿವ್ ಮಾಡಲು ಆಕ್ಸಸ್ ನೀಡುವ ಆಯ್ಕೆ ಗೂಗಲ್ ನೀಡಿದೆ.

ಯೂ ಟ್ಯೂಬ್:ಯೂ ಟ್ಯೂಬ್ ಖಾತೆದಾರರು ತಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಲು ಅವಕಾಶ ನೀಡಿದೆ. ಯೂ ಟ್ಯೂಬ್​​ನಲ್ಲಿ ಹಣ ಸಂಪಾದನೆಮಾಡುವಂತಹ ಲಕ್ಷಾಂತರ ಮಂದಿಗೆ ಇದು ತುಂಬಾ ಒಳ್ಳೆಯ ಆಯ್ಕೆ. ಸಾವಿನ ಬಳಿಕ ನಿಮ್ಮ ಚಾನೆಲ್ ಅನ್ನು ಯಾರುನಿರ್ವಹಿಸಬಹುದು ಎನ್ನುವ ಬಗ್ಗೆ ಒಂದು ಕಾನೂನು ಪತ್ರ ಸಲ್ಲಿಸಬೇಕು. ಆಯ್ಕೆ ಮಾಡದೇ ಇದ್ದರೆ ಕೆಲವು ಸಮಯದ ತನಕಯಾವುದೇ ಪ್ರತಿಕ್ರಿಯೆ ಇಲ್ಲದೆ ಇರುವಂತಹ ನಿಮ್ಮ ಖಾತೆಯನ್ನು ಯೂ ಟ್ಯೂಬ್ ಮುಚ್ಚುತ್ತದೆ. ನೀವು ಗೂಗಲ್ ಇನ್ ಆಯಕ್ಟಿವ್ಅಕೌಂಟ್ ಮ್ಯಾನೇಜರ್ ಮೂಲಕ ಒಬ್ಬ ನಂಬಿಕಸ್ಥ ವ್ಯಕ್ತಿಗೆ ಖಾತೆಯ ನಿರ್ವಹಣೆ ನೀಡಬಹುದು.

ಇವಿಷ್ಟು ಮಾಹಿತಿಗಳು ನಿಮಗಾಗಿ. ಇದರಲ್ಲಿ ನಿಮ್ಮ ಅಕೌಂಟ್ ಗಳಿದ್ದರೆ ಈಗಲೇ ಅಪ್ಡೇಟ್ ಮಾಡ್ಕೊಳ್ಳಿ.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »