TOP STORIES:

FOLLOW US

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!


ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಖಾತೆಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆಏನಾಗುತ್ತದೆ, ಯಾರಾದರು ನಮ್ಮ ಖಾತೆಯನ್ನು ಹ್ಯಾಕ್ ಮಾಡಿ ಕೆಟ್ಟ ಸಂದೇಶ ಫೋಟೋಗಳನ್ನು ಹಂಚಿಕೊಂಡರೆ ಏನುಮಾಡೋದು..? ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಫೇಸ್ಬುಕ್:
ವಿವಿಧ ರೀತಿಯ ಸಾಮಾಜಿಕ ಜಾಲತಾಣಗಳು ಅದರದ್ದೇ ಆಗಿರುವ ಕೆಲವೊಂದು ಖಾಸಗಿ ನಿಯಮಗಳನ್ನು ರೂಪಿಸಿರುತ್ತವೆ. ಫೇಸ್‌ಬುಕ್ ಅಂತೂ ನೀವು ಸತ್ತ ಮೇಲೆ ನಿಮ್ಮ ಖಾತೆಯನ್ನು ಯಾರು ನಿರ್ವಹಿಸಬೇಕೆಂಬುದನ್ನು ಮೊದಲೇ ನಿರ್ಧರಿಸುವುದಕ್ಕೆಬಳಕೆದಾರರಿಗೆ ಸೌಲಭ್ಯವನ್ನು ಕೂಡ ಒದಗಿಸಿದೆ. ಆದರೆ, ಇದು ಅನೇಕರಿಗೆ ತಿಳಿದಿಲ್ಲವಷ್ಟೆ. ಇದಕ್ಕಾಗಿ ಮೊದಲು ನಿಮ್ಮ ಫೇಸ್‌ಬುಕ್ಖಾತೆಯ ಸೆಟ್ಟಿಂಗ್‌ಗೆ ಹೋಗಿ ಅಲ್ಲಿ ಸೆಕ್ಯೂರಿಟಿ ಮತ್ತು ಪ್ರೈವಸಿಯಲ್ಲಿಲಿಗಸಿ ಕಾಂಟ್ಯಾಕ್ಟ್ಕ್ಲಿಕ್ ಮಾಡಬೇಕು. ಅಲ್ಲಿ ನೀವುಸಾಮಾಜಿಕ ಜಾಲತಾಣದಲ್ಲಿರುವಂತಹ ವ್ಯಕ್ತಿಯನ್ನು ನೀವು ಆಯ್ಕೆ ಮಾಡಿ ಸೆಲೆಕ್ಟ್ ಮಾಡಿದರೆ, ನೀವು ಸತ್ತ ನಂತರ ವ್ಯಕ್ತಿ ನಿಮ್ಮಖಾತೆಯನ್ನು ನಿಭಾಯಿಸುವಂತಹವರಾಗಿತ್ತಾರೆ.

ಇನ್ಸ್ಟಾಗ್ರಾಮ್:
ಹಾಗೆಯೆ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳನ್ನು ಅಳಿಸಲು ಅಥವಾ ಅವರ ಸಾವಿನ ನಂತರ ಅವುಗಳನ್ನುಸ್ಮರಣಾರ್ಥವಾಗಿ ಪರಿವರ್ತಿಸಲು ಆಯ್ಕೆಯನ್ನು ಹೊಂದಿರುತ್ತಾರೆ. ಸ್ಮರಣೀಯವಾದ ಫೇಸ್‌ಬುಕ್ ಪುಟವು ಇತರ ಪುಟಗಳಂತೆಕಾಣುತ್ತದೆ. ಆದರೆ, ವ್ಯಕ್ತಿಯ ಹೆಸರಿನ ಮುಂದೆ “Remembering” ಎಂಬ ಪದವನ್ನು ನೋಡಬಹುದು. ಫೇಸ್‌ಬುಕ್‌ನಂತೆಯೇ, ಇನ್ಸ್ಟಾಗ್ರಾಮ್ ಖಾತೆಯನ್ನು ಸ್ಮರಣೀಯಗೊಳಿಸಬಹುದು ಅಥವಾ ಅಳಿಸಬಹುದಾದ ಆಯ್ಕೆಯನ್ನು ಹೊಂದಿದೆ. ಆದರೆಖಾತೆಯನ್ನು ಸ್ಮರಣಾರ್ಥವಾಗಿಸಲು, ಜನರು ಮರಣದ ಪುರಾವೆಯೊಂದಿಗೆ ಇನ್ಸ್ಟಾಗ್ರಾಮ್ ಅನ್ನು ಸಂಪರ್ಕಿಸಬೇಕು.

ಟ್ವಿಟರ್:ವಿಶ್ವದಲ್ಲಿ ಮತ್ತೊಂದು ಜನಪ್ರಿಯ ಸಾಮಾಜಿಕ ಜಾಲತಾಣವೆಂದರೆ ಟ್ವಿಟರ್. ಸಾವಿನ ಬಳಿಕ ಖಾತೆ ಯಾರು ಮುಂದುವರಿಸಿಕೊಂಡುಹೋಗಬಹುದು ಎನ್ನುವ ಬಗ್ಗೆ ಯಾವುದೇ ನಿಯಮವಿಲ್ಲ. ಆದರೆ ಮೃತನ ಕುಟುಂಬದವರು ಖಾತೆ ಮುಚ್ಚಬೇಕೆಂದು ಟ್ವಿಟರ್ಗೆಮನವಿ ಮಾಡಿಕೊಳ್ಳುವ ಅವಕಾಶವಿದೆ. ಖಾತೆದಾರನ ಕುಟುಂಬದವರು ಎಂದು ದೃಢಪಟ್ಟ ಬಳಿಕವಷ್ಟೇ ಖಾತೆಯ ಪೋಸ್ಟ್, ಫೋಟೋ ಮತ್ತು ಖಾತೆ ತೆಗೆದು ಹಾಕಲಾಗುವುದು. ಮರಣಪ್ರಮಾಣ ಪತ್ರ ಸಲ್ಲಿಸುವುದು ಅತೀ ಅಗತ್ಯ.

ಜಿಮೇಲ್:ಜಿಮೇಲ್‌ನಲ್ಲಿ ಸಹ ಖಾತೆಯನ್ನು ನಿಷ್ಕ್ರಿಯ ಮಾಡುವ ಅವಕಾಶಗಳನ್ನು ಗೂಗಲ್ ನೀಡಿದ್ದು, ಅದಕ್ಕಾಗಿಪ್ರಿ ಸೆಲೆಕ್ಟೆಡ್‌ ಪೀರಿಡ್ಆಯ್ಕೆ ಮತ್ತು ಖಾತೆ ಡಿಆಕ್ಟಿವ್ ಮಾಡಲು ಕುಟುಂಬ ಸದಸ್ಯರಿಗೆ ಆಕ್ಸಸ್‌ ನೀಡುವ ಆಯ್ಕೆಗಳನ್ನು ನೀಡಿದೆ. ಬಳಕೆದಾರರು ಪ್ರಿಸೆಲೆಕ್ಟೆಡ್ ಪೀರಿಡ್ ಆಯ್ಕೆಯ ಡಿಆಕ್ಟಿವ್ ಮಾಡುವ ಅವಕಾಶ ಇದೆ. ಬಳಕೆದಾರ ಇಲ್ಲವಾದಾಗ ಅವರ ಕುಟುಂಬ ಸದಸ್ಯರು ಖಾತೆಡಿಆಕ್ಟಿವ್ ಮಾಡಲು ಆಕ್ಸಸ್ ನೀಡುವ ಆಯ್ಕೆ ಗೂಗಲ್ ನೀಡಿದೆ.

ಯೂ ಟ್ಯೂಬ್:ಯೂ ಟ್ಯೂಬ್ ಖಾತೆದಾರರು ತಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಲು ಅವಕಾಶ ನೀಡಿದೆ. ಯೂ ಟ್ಯೂಬ್​​ನಲ್ಲಿ ಹಣ ಸಂಪಾದನೆಮಾಡುವಂತಹ ಲಕ್ಷಾಂತರ ಮಂದಿಗೆ ಇದು ತುಂಬಾ ಒಳ್ಳೆಯ ಆಯ್ಕೆ. ಸಾವಿನ ಬಳಿಕ ನಿಮ್ಮ ಚಾನೆಲ್ ಅನ್ನು ಯಾರುನಿರ್ವಹಿಸಬಹುದು ಎನ್ನುವ ಬಗ್ಗೆ ಒಂದು ಕಾನೂನು ಪತ್ರ ಸಲ್ಲಿಸಬೇಕು. ಆಯ್ಕೆ ಮಾಡದೇ ಇದ್ದರೆ ಕೆಲವು ಸಮಯದ ತನಕಯಾವುದೇ ಪ್ರತಿಕ್ರಿಯೆ ಇಲ್ಲದೆ ಇರುವಂತಹ ನಿಮ್ಮ ಖಾತೆಯನ್ನು ಯೂ ಟ್ಯೂಬ್ ಮುಚ್ಚುತ್ತದೆ. ನೀವು ಗೂಗಲ್ ಇನ್ ಆಯಕ್ಟಿವ್ಅಕೌಂಟ್ ಮ್ಯಾನೇಜರ್ ಮೂಲಕ ಒಬ್ಬ ನಂಬಿಕಸ್ಥ ವ್ಯಕ್ತಿಗೆ ಖಾತೆಯ ನಿರ್ವಹಣೆ ನೀಡಬಹುದು.

ಇವಿಷ್ಟು ಮಾಹಿತಿಗಳು ನಿಮಗಾಗಿ. ಇದರಲ್ಲಿ ನಿಮ್ಮ ಅಕೌಂಟ್ ಗಳಿದ್ದರೆ ಈಗಲೇ ಅಪ್ಡೇಟ್ ಮಾಡ್ಕೊಳ್ಳಿ.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »