TOP STORIES:

FOLLOW US

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!


ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಖಾತೆಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆಏನಾಗುತ್ತದೆ, ಯಾರಾದರು ನಮ್ಮ ಖಾತೆಯನ್ನು ಹ್ಯಾಕ್ ಮಾಡಿ ಕೆಟ್ಟ ಸಂದೇಶ ಫೋಟೋಗಳನ್ನು ಹಂಚಿಕೊಂಡರೆ ಏನುಮಾಡೋದು..? ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಫೇಸ್ಬುಕ್:
ವಿವಿಧ ರೀತಿಯ ಸಾಮಾಜಿಕ ಜಾಲತಾಣಗಳು ಅದರದ್ದೇ ಆಗಿರುವ ಕೆಲವೊಂದು ಖಾಸಗಿ ನಿಯಮಗಳನ್ನು ರೂಪಿಸಿರುತ್ತವೆ. ಫೇಸ್‌ಬುಕ್ ಅಂತೂ ನೀವು ಸತ್ತ ಮೇಲೆ ನಿಮ್ಮ ಖಾತೆಯನ್ನು ಯಾರು ನಿರ್ವಹಿಸಬೇಕೆಂಬುದನ್ನು ಮೊದಲೇ ನಿರ್ಧರಿಸುವುದಕ್ಕೆಬಳಕೆದಾರರಿಗೆ ಸೌಲಭ್ಯವನ್ನು ಕೂಡ ಒದಗಿಸಿದೆ. ಆದರೆ, ಇದು ಅನೇಕರಿಗೆ ತಿಳಿದಿಲ್ಲವಷ್ಟೆ. ಇದಕ್ಕಾಗಿ ಮೊದಲು ನಿಮ್ಮ ಫೇಸ್‌ಬುಕ್ಖಾತೆಯ ಸೆಟ್ಟಿಂಗ್‌ಗೆ ಹೋಗಿ ಅಲ್ಲಿ ಸೆಕ್ಯೂರಿಟಿ ಮತ್ತು ಪ್ರೈವಸಿಯಲ್ಲಿಲಿಗಸಿ ಕಾಂಟ್ಯಾಕ್ಟ್ಕ್ಲಿಕ್ ಮಾಡಬೇಕು. ಅಲ್ಲಿ ನೀವುಸಾಮಾಜಿಕ ಜಾಲತಾಣದಲ್ಲಿರುವಂತಹ ವ್ಯಕ್ತಿಯನ್ನು ನೀವು ಆಯ್ಕೆ ಮಾಡಿ ಸೆಲೆಕ್ಟ್ ಮಾಡಿದರೆ, ನೀವು ಸತ್ತ ನಂತರ ವ್ಯಕ್ತಿ ನಿಮ್ಮಖಾತೆಯನ್ನು ನಿಭಾಯಿಸುವಂತಹವರಾಗಿತ್ತಾರೆ.

ಇನ್ಸ್ಟಾಗ್ರಾಮ್:
ಹಾಗೆಯೆ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳನ್ನು ಅಳಿಸಲು ಅಥವಾ ಅವರ ಸಾವಿನ ನಂತರ ಅವುಗಳನ್ನುಸ್ಮರಣಾರ್ಥವಾಗಿ ಪರಿವರ್ತಿಸಲು ಆಯ್ಕೆಯನ್ನು ಹೊಂದಿರುತ್ತಾರೆ. ಸ್ಮರಣೀಯವಾದ ಫೇಸ್‌ಬುಕ್ ಪುಟವು ಇತರ ಪುಟಗಳಂತೆಕಾಣುತ್ತದೆ. ಆದರೆ, ವ್ಯಕ್ತಿಯ ಹೆಸರಿನ ಮುಂದೆ “Remembering” ಎಂಬ ಪದವನ್ನು ನೋಡಬಹುದು. ಫೇಸ್‌ಬುಕ್‌ನಂತೆಯೇ, ಇನ್ಸ್ಟಾಗ್ರಾಮ್ ಖಾತೆಯನ್ನು ಸ್ಮರಣೀಯಗೊಳಿಸಬಹುದು ಅಥವಾ ಅಳಿಸಬಹುದಾದ ಆಯ್ಕೆಯನ್ನು ಹೊಂದಿದೆ. ಆದರೆಖಾತೆಯನ್ನು ಸ್ಮರಣಾರ್ಥವಾಗಿಸಲು, ಜನರು ಮರಣದ ಪುರಾವೆಯೊಂದಿಗೆ ಇನ್ಸ್ಟಾಗ್ರಾಮ್ ಅನ್ನು ಸಂಪರ್ಕಿಸಬೇಕು.

ಟ್ವಿಟರ್:ವಿಶ್ವದಲ್ಲಿ ಮತ್ತೊಂದು ಜನಪ್ರಿಯ ಸಾಮಾಜಿಕ ಜಾಲತಾಣವೆಂದರೆ ಟ್ವಿಟರ್. ಸಾವಿನ ಬಳಿಕ ಖಾತೆ ಯಾರು ಮುಂದುವರಿಸಿಕೊಂಡುಹೋಗಬಹುದು ಎನ್ನುವ ಬಗ್ಗೆ ಯಾವುದೇ ನಿಯಮವಿಲ್ಲ. ಆದರೆ ಮೃತನ ಕುಟುಂಬದವರು ಖಾತೆ ಮುಚ್ಚಬೇಕೆಂದು ಟ್ವಿಟರ್ಗೆಮನವಿ ಮಾಡಿಕೊಳ್ಳುವ ಅವಕಾಶವಿದೆ. ಖಾತೆದಾರನ ಕುಟುಂಬದವರು ಎಂದು ದೃಢಪಟ್ಟ ಬಳಿಕವಷ್ಟೇ ಖಾತೆಯ ಪೋಸ್ಟ್, ಫೋಟೋ ಮತ್ತು ಖಾತೆ ತೆಗೆದು ಹಾಕಲಾಗುವುದು. ಮರಣಪ್ರಮಾಣ ಪತ್ರ ಸಲ್ಲಿಸುವುದು ಅತೀ ಅಗತ್ಯ.

ಜಿಮೇಲ್:ಜಿಮೇಲ್‌ನಲ್ಲಿ ಸಹ ಖಾತೆಯನ್ನು ನಿಷ್ಕ್ರಿಯ ಮಾಡುವ ಅವಕಾಶಗಳನ್ನು ಗೂಗಲ್ ನೀಡಿದ್ದು, ಅದಕ್ಕಾಗಿಪ್ರಿ ಸೆಲೆಕ್ಟೆಡ್‌ ಪೀರಿಡ್ಆಯ್ಕೆ ಮತ್ತು ಖಾತೆ ಡಿಆಕ್ಟಿವ್ ಮಾಡಲು ಕುಟುಂಬ ಸದಸ್ಯರಿಗೆ ಆಕ್ಸಸ್‌ ನೀಡುವ ಆಯ್ಕೆಗಳನ್ನು ನೀಡಿದೆ. ಬಳಕೆದಾರರು ಪ್ರಿಸೆಲೆಕ್ಟೆಡ್ ಪೀರಿಡ್ ಆಯ್ಕೆಯ ಡಿಆಕ್ಟಿವ್ ಮಾಡುವ ಅವಕಾಶ ಇದೆ. ಬಳಕೆದಾರ ಇಲ್ಲವಾದಾಗ ಅವರ ಕುಟುಂಬ ಸದಸ್ಯರು ಖಾತೆಡಿಆಕ್ಟಿವ್ ಮಾಡಲು ಆಕ್ಸಸ್ ನೀಡುವ ಆಯ್ಕೆ ಗೂಗಲ್ ನೀಡಿದೆ.

ಯೂ ಟ್ಯೂಬ್:ಯೂ ಟ್ಯೂಬ್ ಖಾತೆದಾರರು ತಮ್ಮ ಭವಿಷ್ಯದ ಬಗ್ಗೆ ನಿರ್ಧರಿಸಲು ಅವಕಾಶ ನೀಡಿದೆ. ಯೂ ಟ್ಯೂಬ್​​ನಲ್ಲಿ ಹಣ ಸಂಪಾದನೆಮಾಡುವಂತಹ ಲಕ್ಷಾಂತರ ಮಂದಿಗೆ ಇದು ತುಂಬಾ ಒಳ್ಳೆಯ ಆಯ್ಕೆ. ಸಾವಿನ ಬಳಿಕ ನಿಮ್ಮ ಚಾನೆಲ್ ಅನ್ನು ಯಾರುನಿರ್ವಹಿಸಬಹುದು ಎನ್ನುವ ಬಗ್ಗೆ ಒಂದು ಕಾನೂನು ಪತ್ರ ಸಲ್ಲಿಸಬೇಕು. ಆಯ್ಕೆ ಮಾಡದೇ ಇದ್ದರೆ ಕೆಲವು ಸಮಯದ ತನಕಯಾವುದೇ ಪ್ರತಿಕ್ರಿಯೆ ಇಲ್ಲದೆ ಇರುವಂತಹ ನಿಮ್ಮ ಖಾತೆಯನ್ನು ಯೂ ಟ್ಯೂಬ್ ಮುಚ್ಚುತ್ತದೆ. ನೀವು ಗೂಗಲ್ ಇನ್ ಆಯಕ್ಟಿವ್ಅಕೌಂಟ್ ಮ್ಯಾನೇಜರ್ ಮೂಲಕ ಒಬ್ಬ ನಂಬಿಕಸ್ಥ ವ್ಯಕ್ತಿಗೆ ಖಾತೆಯ ನಿರ್ವಹಣೆ ನೀಡಬಹುದು.

ಇವಿಷ್ಟು ಮಾಹಿತಿಗಳು ನಿಮಗಾಗಿ. ಇದರಲ್ಲಿ ನಿಮ್ಮ ಅಕೌಂಟ್ ಗಳಿದ್ದರೆ ಈಗಲೇ ಅಪ್ಡೇಟ್ ಮಾಡ್ಕೊಳ್ಳಿ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »