TOP STORIES:

FOLLOW US

ನಿಡ್ಡೋಡಿ: ಕಾಲನ ಹೊಡೆತಕ್ಕೆ ಸಿಕ್ಕ ಮೈಂದಡಿ ದೈವಸ್ಥಾನ ಮತ್ತು ಗರಡಿ


ಮಂಗಳೂರು: ತುಳುನಾಡು ಎಂದಕ್ಷಣ ಕಣ್ಣಿಗೆ ಕಾಣುವುದು ದೈವಾರಾಧನೆ. ತುಳುವರ ರಕ್ತದಲ್ಲಿ ದೈವಾರಾಧನೆ ಬೆರೆತು ಹೋಗಿದೆ. ಏನೇ ಕಷ್ಟ ಬಂದರು ಮೊರೆ ಹೋಗುವುದು ದೈವಗಳ ಕಾಲ ಬುಡಕ್ಕೆ. ನಂಬಿದವರನ್ನು ಯಾವತ್ತು ಕೈಬಿಟ್ಟವರಲ್ಲ ಈ ಅತಿಮಾನುಷ ಶಕ್ತಿಗಳಾದ ದೈವಗಳು. ಅದೆಷ್ಟೋ ಕಾಲದ ಹೊಡೆತಕ್ಕೆ ಮಣ್ಣಿನಡಿಗೆ ಸೇರಿದ ದೈವಸ್ಥಾನಗಳು ಕೂಡ ಕಾಲ ಬಂದಾಗ ತಮ್ಮ ಇರುವಿಕೆಯನ್ನು ತೋರಿಸಿ ತಮಗೆ ಬೇಕಾದ ಸ್ಥಾನಮಾನಗಳನ್ನು ಕಟ್ಟಿಸಿಕೊಂಡು ನಂಬಿದವರಿಗೆ ಇಂಬುಕೊಟ್ಟವರು.

ಇಂತಹ ದೈವಾರಾಧನೆಯಲ್ಲಿ ಗರಡಿಗಳು ಕೂಡ ಕಾಯ ಬಿಟ್ಟು ಮಾಯ ಸೇರಿದ ಅವಳಿ ಕಾರಣೀಕ ಪುರುಷರ ಆರಾಧನ ಕೇಂದ್ರ. ಪ್ರಸ್ಥುತ 250 ಮಿಕ್ಕಿ ಗರಡಿಗಳು ಇದ್ದರು ಕೂಡ ಕೆಲವು ಗರಡಿಗಳು ಮಣ್ಣಿನ ಅಡಿಯಲ್ಲಿ ಜೀರ್ಣಾವಸ್ಥೆಯಲ್ಲಿ ಇದೆ. ಹೆಸರಿಗೆ ಮಾತ್ರ ಲೆಕ್ಕದಲ್ಲಿ ಇದೆ. ಅಂತಹುದೇ ಗರಡಿಗಳಲ್ಲಿ ಮೈಂದಡಿ ಗರಡಿಯು ಒಂದು. ಶ್ರೀ ಕ್ಷೇತ್ರ ಕಟೀಲಿಗೆ ಹೋಗುವ ದಾರಿಯಲ್ಲಿ ಸಿಗುವ ನಿಡ್ಡೋಡಿ ಎಂಬ ಗ್ರಾಮದಲ್ಲಿ ಮೈಂದಡಿ ಎನ್ನುವ ಪುಟ್ಟ ಊರು. ಹಸಿರು ಕಾಂತಿಯಿಂದ ಈ ಹಳ್ಳಿ ಕಂಗೊಳಿಸುತ್ತಾ ಇದ್ದು ಎಲ್ಲರು ನೆಮ್ಮದಿಯಿಂದ ಒಟ್ಟಾಗಿ ಜೀವಿಸುತ್ತಿರುವ ಊರು. ಕಾಲದ ಹೊಡೆತಕ್ಕೆ ಸಿಕ್ಕಿ ಈ ಹಿಂದೆ ವಿಜೃಂಭಣೆಯಿಂದ ನಡೆಯುತ್ತಿದ್ದ ಗರಡಿ ಜಾತ್ರೆ ಕಾಲಗರ್ಭದಲ್ಲಿ ಹುದುಗಿ ಹೋಗಿದೆ. 66 ಗರಡಿ 33 ತಾವುಗಳೆಂಬ ನಾಣ್ಣುಡಿಯಂತೆ ಈ ಗರಡಿಯು ಕೂಡ 66 ಗರಡಿಯಲ್ಲಿ ಸೇರಿರಬಹುದೆಂಬ ನಂಬಿಕೆಯಿದೆ. ಇಲ್ಲಿ ಅಳಿದು ಉಳಿದಿರುವ ಶಕ್ತಿ ಕಲ್ಲು, ದಂಬೆ ಕಲ್ಲು, ಆಯದ ಕಲ್ಲು, ತೀರ್ಥ ಬಾವಿ ಇವೆಲ್ಲ ಇದಕ್ಕೆ ಸಾಕ್ಷಿಯೆಂಬಂತೆ ಇದೆ. ಸುಮಾರು 150 ವರ್ಪಗಳ ಹಿಂದೆ ಬಹು ಸಡಗರದಿಂದ ನಡೆಯುತ್ತಿದ್ದ ನೇಮೋತ್ಸವವು ಯಾಕಾಗಿ ನಿಂತಿದೆ ಎನ್ನುವ ಮಾಹಿತಿ ಯಾರಿಗೂ ಇಲ್ಲ. ನೋಡಿದ ಕೇಳಿದ ಜನರು ಇರಲು ಸಾಧ್ಯವಿಲ್ಲ. ಆದರೆ 5 ಕಡೆಗಳಿಂದ ದೈವಗಳು ಮತ್ತು ಬೈದೇರುಗಳ ಭಂಡಾರ ಬಂದು ನೇಮೋತ್ಸವ ಆಗುತ್ತಿದ್ದ ಬಗ್ಗೆ ಅಲ್ಪ ಸ್ವಲ್ಪ ಮಾಹಿತಿಯಿದೆ. ಭಾವದ ಮನೆಯಿಂದ ಕೊಡಮಂದಾಯ ದೈವದ ಭಂಡಾರ, ಪಾತ್ರಬೈಲು ಮನೆಯಿಂದ ಸರಳ ಜುಮಾದಿ ಭಂಡಾರ, ಮಚ್ಚಾರು ಮನೆಯಿಂದ ಬೈದೇರುಗಳ ಭಂಡಾರ, ನಂದೊಟ್ಟು ಮನೆಯಿಂದ ಕಾಂತೇರ್ ಜುಮಾದಿ ಭಂಡಾರ ಮತ್ತು ಇನ್ನೊಂದು ಕಡೆಯಿಂದ ಜಾರಂದಾಯನ ಭಂಡಾರ ಮೈಂದಡಿ ಎನ್ನುವ ಸ್ಥಳದಲ್ಲಿ ಇರುವ ದೈವಸ್ಥಾನಕ್ಕೆ ಮತ್ತು ಗರಡಿಗೆ ಒಟ್ಟಾಗಿ ಬಂದು ಧ್ವಜಾರೋಹಣ ಆಗಿ ನೇಮೋತ್ಸವ ಆಗುತ್ತಿತ್ತಂತೆ. ಇಡೀ ಊರಿಗೆ ಇದು ಜಾತ್ರೆ. ಗ್ರಾಮಸ್ಥರು ಎಲ್ಲರು ಒಟ್ಟಾಗಿ ದೈವಗಳ ಮತ್ತು ಬೈದೇರುಗಳ ಭಂಡಾರ ಮನೆಯವರ ಮುಂದಾಳತ್ವದಲ್ಲಿ ನಡೆಸುತ್ತಿದ್ದರಂತೆ. ಆದರೆ ಯಾವುದೋ ಒಂದು ವಿಷ ಗಳಿಗೆಯಲ್ಲಿ ಎಲ್ಲವು ನಿಂತು ಹೋಗಿ ಮೈಂದಡಿಯಲ್ಲಿರುವ ದೈವಸ್ಥಾನ ಮತ್ತು ಗರಡಿ ಧರಶಾಹಿಯಾಗಿದೆ. ಈ ಬಗ್ಗೆ ಊರಿನ ಸಂಬಂಧಪಟ್ಟವರಿಂದ ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿದ್ದು ಅತೀ ಬೇಗನೆ ಆಗಬಹುದೆಂಬ ನಂಬಿಕೆಯಿದೆ. ಒಂದಂತು ಸತ್ಯ ಯಾವ ಕಾಲಕ್ಕೆ ಯಾವುದು ಆಗಬೇಕೆನ್ನುವುದು ದೈವ ನಿರ್ಣಯ. ದೈವಗಳ ಮತ್ತು ಬೈದೇರುಗಳ ನಿರ್ಣಯ ಯಾವ ರೀತಿ ಇದೆಯೆಂಬುದು ಯಾರಿಗೂ ತಿಳಿದಿಲ್ಲ. ಆದರೆ ಆಗುತ್ತೆ ಎನ್ನುವುದು ಸಾರ್ವಕಾಲಿಕ ಸತ್ಯ. ಗ್ರಾಮಸ್ಥರೆಲ್ಲ ಈ ಬಗ್ಗೆ ಉತ್ಸುಕತೆಯಿಂದ ಕಾಯುತ್ತಿದ್ದು ಎಲ್ಲರು ಒಂದು ಕಡೆ ಸೇರಿ ಈ ಬಗ್ಗೆ ಚರ್ಚಿಸಲು ಮಾತ್ರ ಬಾಕಿಯಿರುತ್ತದೆ. ಇಲ್ಲಿನ‌ ಪಳೆಯುಳಿಕೆಗಳಾದ ದೈವಗಳ ದೈವಸ್ಥಾನ, ಬೈದೇರುಗಳ ಗರಡಿ, ದಂಬೆಕಲ್ಲು, ಶಕ್ತಿಕಲ್ಲು, ಆಯದ ಕಲ್ಲು, ತೀರ್ಥ ಬಾವಿ ಹೊರಗಿನಿಂದ ಅಲ್ಪಸ್ವಲ್ಪ ಕಾಣುತ್ತಿದ್ದು ಚಿತ್ರಣವನ್ನು ನೋಡುವಾಗ ಮೈ ರೋಮಾಂಚಣಗೊಳ್ಳುತ್ತದೆ. ಇಂದಿಗೂ ಅಲ್ಲಿರುವ ಶಕ್ತಿಗಳು ಭಕ್ತರ ಬರುವಿಕೆಗೆ ಕಾದಿದೆಯೋ ಎನ್ನುವಂತೆ ಭಾಸವಾಗುತ್ತಿದೆ.

Credits: ನಮ್ಮ ಬಿಲ್ಲವೆರ್


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »