TOP STORIES:

FOLLOW US

ನಿಮ್ಮ ವಾಟ್ಸ್​ಆಯಪ್ ಜೊತೆ ಈ ಆ್ಯಪ್ ಇದ್ದರೆ ತಕ್ಷಣ ಡಿಲೀಟ್ ಮಾಡಿ


ವಾಟ್ಸ್​ಆಯಪ್ ಪ್ಲಸ್ ಆಯಪ್ ಇಂದು ಲಕ್ಷಕ್ಕೂ ಅಧಿಕ ಮಂದಿ ಉಪಯೋಗ ಮಾಡುತ್ತಿದ್ದಾರೆ. ನೀವು ಇಂಥಹ ಅನಧಿಕೃತ ಆಯಪ್ ಅನ್ನು ಬಳಸುತ್ತಿದ್ದರೆ ತಕ್ಷಣವೇ ಅದನ್ನು ಅನ್​ಇನ್​ಸ್ಟಾಲ್ ಮಾಡಿ.

ಒಂದು ಆಯಪ್ ಫೇಮಸ್ ಆಗಿದೆ ಎಂದಾದರೆ ಅದಕ್ಕೆ ಪೂರಕವಾದ ಅಥವಾ ಥೇಟ್ ಅದರಂತೆ ಇರುವ ನಕಲಿ ಆಯಪ್​ಗಳು (Fake App) ಕೂಡ ಹುಟ್ಟಿಕೊಳ್ಳುತ್ತವೆ. ಗೂಗಲ್ ಪ್ಲೇ ಸ್ಟೋರ್​​ನಲ್ಲಿ (Goolge Play store) ಈಗಲೂ ಅಂತಹ ಅನೇಕ ಆಯಪ್​ಗಳು ರಾರಾಜಿಸುತ್ತಿವೆ. ಇಂತಹ ಫೇಕ್ ಆಯಪ್​ಗಳನ್ನು ನೀವು ಇನ್​ಸ್ಟಾಲ್ ಮಾಡಿದ್ದರೆ, ಇವು ನಿಮ್ಮಲ್ಲಿರುವ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತದೆ, ನಿಮ್ಮ ಬ್ಯಾಂಕ್ ಮಾಹಿತಿಯನ್ನು ಕಲೆಹಾಕಿ ಹಣ ದೋಚುತ್ತದೆ. ಈರೀತಿ ಅನೇಕ ಪ್ರಕರಣಗಳು ವರದಿಯಾಗಿದ್ದು ಗೊತ್ತೇ ಇದೆ. ಸದ್ಯ ವಾಟ್ಸ್​ಆಯಪ್​ನಂತೆ ಇರುವ ವಾಟ್ಸ್​ಆಯಪ್ ಪ್ಲಸ್ (WhatsApp Plus) ಎಂಬ ಆಯಪ್ ಅನ್ನು ಅನೇಕರು ಉಪಯೋಗಿಸುತ್ತಿದ್ದಾರೆ ಎಂಬುದು ತಿಳಿದುಬಂದಿದ್ದು ಅಂಥವರಿಗೆ ಕಂಟಕ ಎದುರಾಗಿದೆ.

 

ಹೌದು, ವಾಟ್ಸ್​ಆಯಪ್ ಪ್ಲಸ್ ಆಯಪ್ ಇಂದು ಲಕ್ಷಕ್ಕೂ ಅಧಿಕ ಮಂದಿ ಉಪಯೋಗ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಒಂದೇ ಸ್ಮಾರ್ಟ್​ಫೋನಿನಲ್ಲಿ ಎರಡು ವಾಟ್ಸ್​ಆಯಪ್ ಖಾತೆ ತೆರೆಯಲು ಸಾಧ್ಯವಿಲ್ಲ. ಹೀಗಾಗಿ ಒಂದು ಮೊಬೈಲ್​ನಲ್ಲಿ ಎರಡು ಸಿಮ್ ಬಳಸುವ ಅನೇಕರು ಒಂದು ಸಿಮ್​ನಲ್ಲಿ ಅಧಿಕೃತ ವಾಟ್ಸ್​ಆಯಪ್ ಇದ್ದರೆ, ಇನ್ನೊಂದು ಸಿಮ್​ಗಾಗಿ ವಾಟ್ಸ್​ಆಯಪ್ ಪ್ಲಸ್ ಅನ್ನು ಬಳಸುತ್ತಿದ್ದಾರೆ. ನೀವು ಹೀಗೆ ಮಾಡುತ್ತಿದ್ದರೆ ತಕ್ಷಣವೇ ವಾಟ್ಸ್​ಆಯಪ್ ಪ್ಲಸ್ ಆಯಪ್ ಅನ್ನು ಡಿಲೀಟ್ ಮಾಡಿ.

 

ವಾಟ್ಸ್​ಆಯಪ್​ ಪ್ಲಸ್​ನಿಂದ ವಾಟ್ಸ್​ಆಯಪ್​ಗೆ ತಲೆನೋವಾಗುವ ಪರಿಸ್ಥಿತಿ ಎದುರಾಗಿದ್ದು, ನೀವು ವಾಟ್ಸ್​ಆಯಪ್​ ಪ್ಲಸ್ ನಂತಹ ಅನಧಿಕೃತ ಆಯಪ್ ಅನ್ನು ಬಳಸುತ್ತಿದ್ದರೆ ತಕ್ಷಣವೇ ಅದನ್ನು ಅನ್​ಇನ್​ಸ್ಟಾಲ್ ಮಾಡಿ ಎಂದು ವರದಿಯಾಗಿದೆ. ಇಲ್ಲದಿದ್ದರೆ ವಾಟ್ಸ್​ಆಯಪ್​​ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಬಹುದು. ವಾಟ್ಸ್​ಆಯಪ್​​ ಪ್ಲಸ್ ಒಂದು ಅನಧಿಕೃತ ಆವೃತ್ತಿಯಾಗಿದ್ದು, ಬಳಕೆದಾರರಿಗೆ ಸ್ಥಿತಿಯನ್ನು ಮರೆಮಾಚುವುದು, ಮಿತಿಗಳಿಲ್ಲದೆ ಫೋಟೋಗಳನ್ನು ಕಳುಹಿಸುವುದು, ನಿರ್ಧಿಷ್ಟ ಮಿತಿಯನ್ನು ಮೀರಿ ಗುಂಪುಗಳನ್ನು ರಚಿಸುವುದು ಮುಂತಾದ ಹೆಚ್ಚುವರಿ ವೈಶಿಷ್ಟ್ಯಗಳನ್ನು ನೀಡುತ್ತದೆ.

 

ಥರ್ಡ್ ಪಾರ್ಟಿ ಆಯಪ್​ ವಾಟ್ಸ್​ಆಯಪ್​ ಪ್ಲಸ್ ಬಳಸಿದರೆ ವಾಟ್ಸ್​ಆಯಪ್​ನಿಂದ ತಾತ್ಕಾಲಿಕ ಬ್ಯಾನ್ ಮಾಡಲಾಗುತ್ತದೆ ಎಂದು ವಾಟ್ಸ್​ಆಯಪ್ ನೀತಿ ನಿಯಮಗಳು ತಿಳಿಸುತ್ತವೆ. ಹೀಗಾಗಿ ಈ ಆಯಪ್​ಗಳನ್ನು ಬಳಸುತ್ತಿದ್ದರೆ ತಕ್ಷಣವೆ ಡಿಲೀಟ್ ಮಾಡಿ.

 

ಕಳೆದ ಆಗಸ್ಟ್ ತಿಂಗಳಲ್ಲಿ 20,70,000 ವಾಟ್ಸ್​ಆಯಪ್​ ಖಾತೆಗಳನ್ನು ಫೇಸ್​ಬುಕ್ ಒಡೆತನದ ಕಂಪನಿ ವಾಟ್ಸ್​​ಆಯಪ್ ಭಾರತದಲ್ಲಿ ನಿಷೇಧಿಸಿದೆ. ವಾಟ್ಸ್​ಆಯಪ್​ ಸುಮಾರು 420 ಕುಂದುಕೊರತೆಯ ವರದಿಗಳನ್ನು ಆಗಸ್ಟ್‌ನಲ್ಲಿ ಪಡೆದಿತ್ತು. ವಾಟ್ಸ್​​ಆಯಪ್​ ಕುರಿತಾಗಿ ಖಾತೆ ಬೆಂಬಲ (105), ನಿಷೇಧ ಮನವಿ (222), ಇತರ ಬೆಂಬಲ (34), ಉತ್ಪನ್ನ ಬೆಂಬಲ (42) ಮತ್ತು ಸುರಕ್ಷತೆ (17) ಗಳ ವಿಚಾರವಾಗಿ 420 ಬಳಕೆದಾರರ ವರದಿಗಳನ್ನು ಸ್ವೀಕರಿಸಲಾಗಿದೆ ಎಂದು ವಾಟ್ಸ್‌ಆಯಪ್ ಅನುಸರಣೆ ಡೇಟಾ ತೋರಿಸಿದೆ. ಆದಾಗ್ಯೂ, 421 ವರದಿಗಳ ಪೈಕಿ, ವಾಟ್ಸಾಪ್ 41 ಖಾತೆಗಳ ವಿರುದ್ಧ ಪರಿಹಾರ ಕ್ರಮಗಳನ್ನು ಕೂಡ ಕೈಗೊಂಡಿದೆ.

 

 


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »