TOP STORIES:

FOLLOW US

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್


ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್  ಹಿಂದೂ ಸಂಘಟನೆಯಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದು, ಈ ಮೊದಲು ಉರ್ವಾಸ್ಟೋರ್ ವಾರ್ಡಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ, ನಂತರ ಬಿಜೆಪಿ ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾಗಿ, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿರುತ್ತಾರೆ.
ಸಾಕಷ್ಟು ಕಡೆ ಅಮಿತ್ ರಾಜ್ ಅನ್ನೋ ಹೆಸರನ್ನ ನೀವು ಕೇಳಿರುವಿರಿ. ಅದೆಷ್ಟೋ ಜನ ಅಮಿತ್ ರಾಜ್ ರವರ ಬಗ್ಗೆ ಹೇಳುವ ಮಾತು… ಅವರೊಂದು ಶಕ್ತಿ!!ಹಿಂದುತ್ವಗೋಸ್ಕರ ದುಡಿಯುವಂತಹ ಪ್ರಾಮಾಣಿಕ ನಾಯಕ, ಹಾಗೆ ಬಡವರ ಸೇವೆ ಮಾಡುವಂತಹ ಸಮಾಜಸೇವಕ..
ತನ್ನ ಬಾಲ್ಯಜೀವನದಿಂದಲೇ “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ” ಸಂಘ ಶಿಕ್ಷಣ ಪಡೆದು ಸ್ವಯಂ ಸೇವಕರಾಗಿದ್ದು, ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡವರು.
ಬಾಲ್ಯದಿಂದಲೇ ಒಂದು ಆಸೆಯನ್ನ ತನ್ನೊಳಗೆ ಬಚ್ಚಿಟ್ಟುಕೊಂಡಿದ್ದರು. ಸಮಾಜದಲ್ಲಿ ನಾನು ಮತ್ತೊಬ್ಬರಿಗೆ ಒಳ್ಳೆಯದನ್ನ ಮಾಡಬೇಕು, ಸಮಾಜಕ್ಕೆ ಒಳಿತಿನ ಹಸ್ತವಾಗಿ ದುಡಿಯಬೇಕು ಎಂಬ ಮನಸ್ಥಿತಿಯಲ್ಲಿ ಬೆಳೆದು ತಾನು ಅಂದುಕೊಂಡ ಹಾಗೆ ಬದುಕುತ್ತಿದ್ದಾರೆ.
ಅಮಿತ್ ಅಣ್ಣ ನಂತರದ ದಿನಗಳಲ್ಲಿ ಬಡವರ ಸೇವೆಯನ್ನ ಮಾಡಲು ಮುಂದಾದರು. ಇವತ್ತಿಗೂ ಅದೆಷ್ಟೋ ಬಡವರ ಕಷ್ಟಕ್ಕೆ ಮರುಗಿ, ಅವರ ಕಣ್ಣೀರ ನೋವಿಗೆ ಆಸರೆಯಾಗಿರೋದು ನಿಜಕ್ಕೂ ಶ್ಲಾಘನೀಯ ವಿಚಾರ. ಪ್ರಾಮಾಣಿಕತೆಗೆ ಮತ್ತೊಂದು ಪ್ರತೀಕವೆನ್ನಬಹುದು.
“ಅಮಿತ್ ಅಣ್ಣ”ನಿಗೆ ಅದೆಷ್ಟೇ ಹೆಸರಿದ್ದರೂ ಯಾವತ್ತು ತನ್ನ ಕಾರ್ಯಕರ್ತರ ಜೊತೆ ನಾಯಕನಂತೆ ಮೆರೆಯದೆ, ಅಹಂಕಾರವನ್ನ ತೋರದೆ ಸಾಮಾನ್ಯವಾಗಿ ಅವರೊಂದಿಗೆ ಕೆಲಸ ಮಾಡೋ ಆ ಕಾರಣಕ್ಕಾಗಿ ಅಭಿಮಾನಗಳು ಹುಟ್ಟಿಕೊಂಡಿವೆ. ನಿಜಕ್ಕೂ ಎಂತಹ ಸಾರ್ಥಕ ಜೀವನ…ಅವರ ನಿಲುವು ಹಾಗೆ!! ಅವರ ಮಾರ್ಗದರ್ಶನದ ಪ್ರತಿಯೊಂದು ಹೆಜ್ಜೆಯಲ್ಲೂ ಅರ್ಥವಿದೆ..

ಸಮಾಜಕ್ಕಾಗಿ ಅಮಿತ್ ಅಣ್ಣ  ಎಂದರೆ ಏನು?

ಅವರ ನೇತೃತ್ವದಲ್ಲಿ ಬಡಮಕ್ಕಳ ಶಾಲೆಗೆ ಭೇಟಿ ನೀಡಿ ಹಾಗೂ ಹಲವಾರು ಅಶಕ್ತ ಕುಟುಂಬದ ಮನೆಗೆ ಭೇಟಿ ನೀಡಿ ಅವರಿಗೆ ಸಹಾಯ ಮಾಡುವುದರೊಂದಿಗೆ ಅನೇಕ ಸಮಾಜಮುಖಿ ‌ಕೆಲಸ ಮಾಡಿರುತ್ತಾರೆ.

ಅಲ್ಲದೆ 26-01-2018 ಮಂಗಳೂರಿನಲ್ಲಿ ಸುಮಾರು ನೂರು ಜನರ ನೇತ್ರದಾನ ಸಂಕಲ್ಪ ಮಾಡಿಸುವ ಮೂಲಕ #ನೇತ್ರದಾನ_ಶಿಬಿರ ನಡೆಸಿರುತ್ತಾರೆ..
ಇದಕ್ಕಿಂತ ಪುಣ್ಯದ ಕೆಲಸ ಬೇರೇನಿದೆ..ಇವೆಲ್ಲ ಸಮಾಜಕ್ಕೆ ಪ್ರಾಮುಖ್ಯತೆ ನೀಡೋ ಕೆಲಸವಾದರೆ ಇನ್ನು ಪರದೆಯ ಹಿಂದೆ ಅದೆಷ್ಟೋ ಒಳಿತಿನ ಸಹಾಯವನ್ನ ಇವರು ಮಾಡುತ್ತಲೇ ಬರುತ್ತಿದ್ದಾರೆ..ಕಾರಣವಿಷ್ಟೇ… ತಾನು ಮಾಡೋ ಕೆಲಸ ದೇವರಿಗೆ ಗೊತ್ತಾದರೆ ಸಾಕು ಸಮಾಜಕ್ಕೆ ಬೇಡ ಎಂಬ ಅರ್ಥದೊಳು ಕೆಲಸ ಮಾಡೋ ಸರಳತೆಯ ನಾಯಕನೇ ಇವರು.

ಹೆಚ್ಚು ಹೇಳಬೇಕೆಂದರೆ

ಅತ್ತಾಗ ಕಣ್ಣೀರು ಒರೆಸೋ ನಾಯಕ
ಸೋತಾಗ ಹೆಗಲು ಕೊಡೊ ನಾಯಕ
ಬಡವರ ನೋವಿಗೆ ಶಕ್ತಿ ತುಂಬೋ ನಾಯಕ
ಕಾರ್ಯಕರ್ತರಿಗೆ ಧೈರ್ಯ ತುಂಬೋ ನಾಯಕ ಎಲ್ಲೇ ಯಾರಿಗೂ ತೊಂದರೆಯಾದರೂ ಕ್ಷಣ ಮಾತ್ರದಲ್ಲಿ ಸ್ಪಂದಿಸೋ ನಾಯಕ
ಅನ್ಯಾಯದ ವಿರುದ್ಧ ಗರ್ಜಿಸೋ ನಾಯಕ
ನೊಂದ ಜೀವಕ್ಕೆ ಆಸರೆಯಾಗೋ ನಾಯಕ
ಪ್ರಾಮಾಣಿಕ ಸಿದ್ದಾಂತಕ್ಕೆ ಸೈ ಎನ್ನೋ ನಾಯಕ
ಸರಳತೆಯಲ್ಲಿ ಬದುಕೋ ನಾಯಕ
ಒಟ್ಟಿನಲ್ಲಿ ನಾಯಕ ಅನ್ನೋ ಪದಗಳಿಗೆ ಅರ್ಹತೆಯ ಮಡಿಲು ತುಂಬೋ ನಿಸ್ವಾರ್ಥ ವ್ಯಕ್ತಿ
ಅನ್ಯಾಯ ಮಾಡುವರನ್ನ ಹತ್ತಿರವೂ ಸೇರಿಸದೆ ನ್ಯಾಯದ ಪರ ಕೆಲಸ ಮಾಡೋ ಜನರ ಜೊತೆ ಬೆರೆತು ನಾನಿದ್ದೇನೆ ಎಂಬ ಭರವಸೆಯ ಶಕ್ತಿಯಾಗಿ ದುಷ್ಟರಿಗೆ ಅಂಜದೆ, #ದೈವ_ದೇವರುಗಳ ಆಶೀರ್ವಾದ ಪಡೆದು ಹಿಂದೂ ಧರ್ಮದ ತತ್ವಗಳನ್ನ ಪಾಲಿಸುತ್ತ,
ಹಿಂದೂಭದ್ರಕೋಟೆಗೆ ಕಾವಲಿರೋ ಈ ನಾಯಕನ ಬಗ್ಗೆ ಅದೆಷ್ಟೇ ಮಾತುಗಳ ವರ್ಣನೆ ನೀಡಿದರು ಅದು ಕಡಿಮೆಯೇ..
ಇಲ್ಲಿಯವರೆಗೆ ನಾ ಇವರನ್ನ ಭೇಟಿಯಾಗಿಲ್ಲ..ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ #ನಿಜ!! ಆದರೆ ಭೇಟಿಯಾಗದಿದ್ದರು ಹತ್ತಿರದಿಂದ ನೋಡಿದ್ದೇನೆ ಎಂಬ ಅರಿವು ಅಭಿಮಾನಿಗಳ ಮಾತುಗಳಿಂದ ಹಾಗು ಅವರ ಕೆಲಸದಿಂದ ಗೊತ್ತಾಗುತ್ತದೆ..
ಸ್ವಾರ್ಥ ತುಂಬಿರೋ ಈ ಪ್ರಪಂಚದಲ್ಲಿ ಇಂತಹ ನಾಯಕರು ಹಲವರಿಗೆ ಮಾದರಿಯಾಗಬೇಕು..”#ಅಮಿತ್_ಅಣ್ಣ” ವೇದಿಕೆಯ ಮುಂಭಾಗ ನಿಂತು ಕೆಲಸ ಮಾಡುವರಲ್ಲ, ಪರದೆಯ ಹಿಂದೆ ದುಡಿಯುವಂತಹ ಕಾಯಕ..
ಹಾಗೆ “ಅಮಿತ್ ಅಣ್ಣ” “ರಾಷ್ಟ್ರೀಯ ಸ್ವಯಂಸೇವಕ ಸಂಘದ” ಸಂಘ ಶಿಕ್ಷಣ ಪಡೆದು RSS ನಲ್ಲಿ ಬಹಳ ಒಲವನ್ನು ಇಟ್ಟುಕೊಂಡವರು..ಆರ್ ಎಸ್ ಎಸ್ ಪ್ರಮುಖ ಅಂಶಗಳನ್ನ ತನ್ನೊಳಗೆ ಅಳವಡಿಸಿ ಹಿಂದೂರಾಷ್ಟ್ರದ ಭಗವಧ್ವಜ ಪತಾಕೆ ಬಹಳ ಎತ್ತರಕ್ಕೆ ಹಾರಲಿ ಎಂಬ ಕನಸು ಕಂಡವರು..
ಅಣ್ಣ ನೀವು ಹಿಂದೂ ಸಮಾಜಗೋಸ್ಕರ ಕೊಟ್ಟಿರೋ ಕೊಡುಗೆಗೆ ಬೆಲೆಕಟ್ಟಲಾಗದು..ನಿಮ್ಮಿಂದ ಇನ್ನು ಅನೇಕ ಒಳಿತಿನ ವಿಚಾರಗಳು ಮೂಡಿ ಬರೆಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ..ನಿಮ್ಮ ಹೊಸ ಪಯಣದ ಆರಂಭ ಅದೆಷ್ಟೋ ಜನರಿಗೆ ಪ್ರೇರಣೆಯಾಗಲಿ..ಸದಾ ನಿಮ್ಮ ವ್ಯಕ್ತಿತ್ವದ ಅಭಿಮಾನಿ ನಾ

ಬರಹ-ಪ್ರವೀಣ್ ಪೂಜಾರಿ


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »