TOP STORIES:

FOLLOW US

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್


ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್  ಹಿಂದೂ ಸಂಘಟನೆಯಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದು, ಈ ಮೊದಲು ಉರ್ವಾಸ್ಟೋರ್ ವಾರ್ಡಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ, ನಂತರ ಬಿಜೆಪಿ ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾಗಿ, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿರುತ್ತಾರೆ.
ಸಾಕಷ್ಟು ಕಡೆ ಅಮಿತ್ ರಾಜ್ ಅನ್ನೋ ಹೆಸರನ್ನ ನೀವು ಕೇಳಿರುವಿರಿ. ಅದೆಷ್ಟೋ ಜನ ಅಮಿತ್ ರಾಜ್ ರವರ ಬಗ್ಗೆ ಹೇಳುವ ಮಾತು… ಅವರೊಂದು ಶಕ್ತಿ!!ಹಿಂದುತ್ವಗೋಸ್ಕರ ದುಡಿಯುವಂತಹ ಪ್ರಾಮಾಣಿಕ ನಾಯಕ, ಹಾಗೆ ಬಡವರ ಸೇವೆ ಮಾಡುವಂತಹ ಸಮಾಜಸೇವಕ..
ತನ್ನ ಬಾಲ್ಯಜೀವನದಿಂದಲೇ “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ” ಸಂಘ ಶಿಕ್ಷಣ ಪಡೆದು ಸ್ವಯಂ ಸೇವಕರಾಗಿದ್ದು, ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡವರು.
ಬಾಲ್ಯದಿಂದಲೇ ಒಂದು ಆಸೆಯನ್ನ ತನ್ನೊಳಗೆ ಬಚ್ಚಿಟ್ಟುಕೊಂಡಿದ್ದರು. ಸಮಾಜದಲ್ಲಿ ನಾನು ಮತ್ತೊಬ್ಬರಿಗೆ ಒಳ್ಳೆಯದನ್ನ ಮಾಡಬೇಕು, ಸಮಾಜಕ್ಕೆ ಒಳಿತಿನ ಹಸ್ತವಾಗಿ ದುಡಿಯಬೇಕು ಎಂಬ ಮನಸ್ಥಿತಿಯಲ್ಲಿ ಬೆಳೆದು ತಾನು ಅಂದುಕೊಂಡ ಹಾಗೆ ಬದುಕುತ್ತಿದ್ದಾರೆ.
ಅಮಿತ್ ಅಣ್ಣ ನಂತರದ ದಿನಗಳಲ್ಲಿ ಬಡವರ ಸೇವೆಯನ್ನ ಮಾಡಲು ಮುಂದಾದರು. ಇವತ್ತಿಗೂ ಅದೆಷ್ಟೋ ಬಡವರ ಕಷ್ಟಕ್ಕೆ ಮರುಗಿ, ಅವರ ಕಣ್ಣೀರ ನೋವಿಗೆ ಆಸರೆಯಾಗಿರೋದು ನಿಜಕ್ಕೂ ಶ್ಲಾಘನೀಯ ವಿಚಾರ. ಪ್ರಾಮಾಣಿಕತೆಗೆ ಮತ್ತೊಂದು ಪ್ರತೀಕವೆನ್ನಬಹುದು.
“ಅಮಿತ್ ಅಣ್ಣ”ನಿಗೆ ಅದೆಷ್ಟೇ ಹೆಸರಿದ್ದರೂ ಯಾವತ್ತು ತನ್ನ ಕಾರ್ಯಕರ್ತರ ಜೊತೆ ನಾಯಕನಂತೆ ಮೆರೆಯದೆ, ಅಹಂಕಾರವನ್ನ ತೋರದೆ ಸಾಮಾನ್ಯವಾಗಿ ಅವರೊಂದಿಗೆ ಕೆಲಸ ಮಾಡೋ ಆ ಕಾರಣಕ್ಕಾಗಿ ಅಭಿಮಾನಗಳು ಹುಟ್ಟಿಕೊಂಡಿವೆ. ನಿಜಕ್ಕೂ ಎಂತಹ ಸಾರ್ಥಕ ಜೀವನ…ಅವರ ನಿಲುವು ಹಾಗೆ!! ಅವರ ಮಾರ್ಗದರ್ಶನದ ಪ್ರತಿಯೊಂದು ಹೆಜ್ಜೆಯಲ್ಲೂ ಅರ್ಥವಿದೆ..

ಸಮಾಜಕ್ಕಾಗಿ ಅಮಿತ್ ಅಣ್ಣ  ಎಂದರೆ ಏನು?

ಅವರ ನೇತೃತ್ವದಲ್ಲಿ ಬಡಮಕ್ಕಳ ಶಾಲೆಗೆ ಭೇಟಿ ನೀಡಿ ಹಾಗೂ ಹಲವಾರು ಅಶಕ್ತ ಕುಟುಂಬದ ಮನೆಗೆ ಭೇಟಿ ನೀಡಿ ಅವರಿಗೆ ಸಹಾಯ ಮಾಡುವುದರೊಂದಿಗೆ ಅನೇಕ ಸಮಾಜಮುಖಿ ‌ಕೆಲಸ ಮಾಡಿರುತ್ತಾರೆ.

ಅಲ್ಲದೆ 26-01-2018 ಮಂಗಳೂರಿನಲ್ಲಿ ಸುಮಾರು ನೂರು ಜನರ ನೇತ್ರದಾನ ಸಂಕಲ್ಪ ಮಾಡಿಸುವ ಮೂಲಕ #ನೇತ್ರದಾನ_ಶಿಬಿರ ನಡೆಸಿರುತ್ತಾರೆ..
ಇದಕ್ಕಿಂತ ಪುಣ್ಯದ ಕೆಲಸ ಬೇರೇನಿದೆ..ಇವೆಲ್ಲ ಸಮಾಜಕ್ಕೆ ಪ್ರಾಮುಖ್ಯತೆ ನೀಡೋ ಕೆಲಸವಾದರೆ ಇನ್ನು ಪರದೆಯ ಹಿಂದೆ ಅದೆಷ್ಟೋ ಒಳಿತಿನ ಸಹಾಯವನ್ನ ಇವರು ಮಾಡುತ್ತಲೇ ಬರುತ್ತಿದ್ದಾರೆ..ಕಾರಣವಿಷ್ಟೇ… ತಾನು ಮಾಡೋ ಕೆಲಸ ದೇವರಿಗೆ ಗೊತ್ತಾದರೆ ಸಾಕು ಸಮಾಜಕ್ಕೆ ಬೇಡ ಎಂಬ ಅರ್ಥದೊಳು ಕೆಲಸ ಮಾಡೋ ಸರಳತೆಯ ನಾಯಕನೇ ಇವರು.

ಹೆಚ್ಚು ಹೇಳಬೇಕೆಂದರೆ

ಅತ್ತಾಗ ಕಣ್ಣೀರು ಒರೆಸೋ ನಾಯಕ
ಸೋತಾಗ ಹೆಗಲು ಕೊಡೊ ನಾಯಕ
ಬಡವರ ನೋವಿಗೆ ಶಕ್ತಿ ತುಂಬೋ ನಾಯಕ
ಕಾರ್ಯಕರ್ತರಿಗೆ ಧೈರ್ಯ ತುಂಬೋ ನಾಯಕ ಎಲ್ಲೇ ಯಾರಿಗೂ ತೊಂದರೆಯಾದರೂ ಕ್ಷಣ ಮಾತ್ರದಲ್ಲಿ ಸ್ಪಂದಿಸೋ ನಾಯಕ
ಅನ್ಯಾಯದ ವಿರುದ್ಧ ಗರ್ಜಿಸೋ ನಾಯಕ
ನೊಂದ ಜೀವಕ್ಕೆ ಆಸರೆಯಾಗೋ ನಾಯಕ
ಪ್ರಾಮಾಣಿಕ ಸಿದ್ದಾಂತಕ್ಕೆ ಸೈ ಎನ್ನೋ ನಾಯಕ
ಸರಳತೆಯಲ್ಲಿ ಬದುಕೋ ನಾಯಕ
ಒಟ್ಟಿನಲ್ಲಿ ನಾಯಕ ಅನ್ನೋ ಪದಗಳಿಗೆ ಅರ್ಹತೆಯ ಮಡಿಲು ತುಂಬೋ ನಿಸ್ವಾರ್ಥ ವ್ಯಕ್ತಿ
ಅನ್ಯಾಯ ಮಾಡುವರನ್ನ ಹತ್ತಿರವೂ ಸೇರಿಸದೆ ನ್ಯಾಯದ ಪರ ಕೆಲಸ ಮಾಡೋ ಜನರ ಜೊತೆ ಬೆರೆತು ನಾನಿದ್ದೇನೆ ಎಂಬ ಭರವಸೆಯ ಶಕ್ತಿಯಾಗಿ ದುಷ್ಟರಿಗೆ ಅಂಜದೆ, #ದೈವ_ದೇವರುಗಳ ಆಶೀರ್ವಾದ ಪಡೆದು ಹಿಂದೂ ಧರ್ಮದ ತತ್ವಗಳನ್ನ ಪಾಲಿಸುತ್ತ,
ಹಿಂದೂಭದ್ರಕೋಟೆಗೆ ಕಾವಲಿರೋ ಈ ನಾಯಕನ ಬಗ್ಗೆ ಅದೆಷ್ಟೇ ಮಾತುಗಳ ವರ್ಣನೆ ನೀಡಿದರು ಅದು ಕಡಿಮೆಯೇ..
ಇಲ್ಲಿಯವರೆಗೆ ನಾ ಇವರನ್ನ ಭೇಟಿಯಾಗಿಲ್ಲ..ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ #ನಿಜ!! ಆದರೆ ಭೇಟಿಯಾಗದಿದ್ದರು ಹತ್ತಿರದಿಂದ ನೋಡಿದ್ದೇನೆ ಎಂಬ ಅರಿವು ಅಭಿಮಾನಿಗಳ ಮಾತುಗಳಿಂದ ಹಾಗು ಅವರ ಕೆಲಸದಿಂದ ಗೊತ್ತಾಗುತ್ತದೆ..
ಸ್ವಾರ್ಥ ತುಂಬಿರೋ ಈ ಪ್ರಪಂಚದಲ್ಲಿ ಇಂತಹ ನಾಯಕರು ಹಲವರಿಗೆ ಮಾದರಿಯಾಗಬೇಕು..”#ಅಮಿತ್_ಅಣ್ಣ” ವೇದಿಕೆಯ ಮುಂಭಾಗ ನಿಂತು ಕೆಲಸ ಮಾಡುವರಲ್ಲ, ಪರದೆಯ ಹಿಂದೆ ದುಡಿಯುವಂತಹ ಕಾಯಕ..
ಹಾಗೆ “ಅಮಿತ್ ಅಣ್ಣ” “ರಾಷ್ಟ್ರೀಯ ಸ್ವಯಂಸೇವಕ ಸಂಘದ” ಸಂಘ ಶಿಕ್ಷಣ ಪಡೆದು RSS ನಲ್ಲಿ ಬಹಳ ಒಲವನ್ನು ಇಟ್ಟುಕೊಂಡವರು..ಆರ್ ಎಸ್ ಎಸ್ ಪ್ರಮುಖ ಅಂಶಗಳನ್ನ ತನ್ನೊಳಗೆ ಅಳವಡಿಸಿ ಹಿಂದೂರಾಷ್ಟ್ರದ ಭಗವಧ್ವಜ ಪತಾಕೆ ಬಹಳ ಎತ್ತರಕ್ಕೆ ಹಾರಲಿ ಎಂಬ ಕನಸು ಕಂಡವರು..
ಅಣ್ಣ ನೀವು ಹಿಂದೂ ಸಮಾಜಗೋಸ್ಕರ ಕೊಟ್ಟಿರೋ ಕೊಡುಗೆಗೆ ಬೆಲೆಕಟ್ಟಲಾಗದು..ನಿಮ್ಮಿಂದ ಇನ್ನು ಅನೇಕ ಒಳಿತಿನ ವಿಚಾರಗಳು ಮೂಡಿ ಬರೆಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ..ನಿಮ್ಮ ಹೊಸ ಪಯಣದ ಆರಂಭ ಅದೆಷ್ಟೋ ಜನರಿಗೆ ಪ್ರೇರಣೆಯಾಗಲಿ..ಸದಾ ನಿಮ್ಮ ವ್ಯಕ್ತಿತ್ವದ ಅಭಿಮಾನಿ ನಾ

ಬರಹ-ಪ್ರವೀಣ್ ಪೂಜಾರಿ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »